ಬೆಂಗಳೂರು, ನ. 14: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಮಾಡುವ ಕೆಎಂಎಫ್ ನಿರ್ಧಾರಕ್ಕೆ ಸರ್ಕಾರ ತಡೆ ನೀಡಿದೆ. ಸದ್ಯಕ್ಕೆ ಬೆಲೆ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ.
ನವೆಂಬರ್ 15, ನಾಳೆ ಮಂಗಳವಾರದಿಂದಲೇ ಹಾಲು ಮತ್ತು ಮೊಸರು ದರವನ್ನು 3 ರೂಗಳಷ್ಟು ಏರಿಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಹಲವು ತಿಂಗಳುಗಳ ಹಿಂದೆಯೇ ಈ ನಿಟ್ಟಿನಲ್ಲಿ ಸರ್ಕಾರದ ಮುಂದೆ ಕೆಎಂಎಫ್ ಪ್ರಸ್ತಾವ ಇಟ್ಟಿತ್ತು. ಇಂದು ಸೋಮವಾರ ಸರ್ಕಾರ ಕೂಡ ಇದಕ್ಕೆ ಅನುಮೋದನೆ ಕೊಟ್ಟಿದೆ ಎಂಬಂತಹ ಸುದ್ದಿ ದಟ್ಟವಾಗಿ ಕೇಳಿಬಂದಿತ್ತು. ಕೆಎಂಎಫ್ ಬೆಲೆ ಏರಿಕೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿಯೂ ಆಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸರ್ಕಾರ ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಹಾಲು ಮತ್ತು ಮೊಸರು ದರ ಏರಿಕೆ ಘೋಷಣೆಯನ್ನು ತಡೆಯಲಾಗಿದೆ. ನವೆಂಬರ್ 20ರ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ಹೇಳಿವೆ. ನವೆಂಬರ್ 20ರ ನಂತರ ಸರ್ಕಾರ ಸಭೆ ಕರೆದು ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆ ಇರಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಹಾಲಿನ ಬೆಲೆ ಏರಿಸುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಸರ್ಕಾರದ ನಿರ್ಧಾರಕ್ಕೆ ಏನು ಕಾರಣ?
ಹಾಲು ಮತ್ತು ಮೊಸರು ಬೆಲೆ ಏರಿಕೆ ಮಾಡುವ ಕೆಎಂಎಫ್ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿರುವುದು ರೈತರಿಗೆ ಸಹಾಯಧನ ಹೆಚ್ಚಿಸುವ ಉದ್ದೇಶ. ಆದರೆ, ಬೆಲೆ ಏರಿಕೆ ಮಾಡಿದರೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾದ ಉಭಯ ಸಂಕಟ ಸರ್ಕಾರದ್ದು. ಈಗಾಗಲೇ ಹಲವು ಅಗತ್ಯ ವಸ್ತುಗಳ ಬೆಲೆ ಏರಿರುವ ಅಸಹನೆಯಲ್ಲಿರುವ ಜನರಿಗೆ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳವಾದರೆ ಸಹನೆಯ ಕಟ್ಟೆ ಒಡೆಯಬಹುದು ಎಂಬ ಭೀತಿ ಸರ್ಕಾರಕ್ಕೆ ಇದೆ. ಹೀಗಾಗಿ, ಸಮಯ ಸಂದರ್ಭ ನೋಡಿಕೊಂಡು ನಿರ್ಧಾರ ಕೈಗೊಳ್ಳುವುದು ಸರ್ಕಾರದ ಉದ್ದೇಶ ಎನ್ನಲಾಗಿದೆ.
ಕೆಎಂಎಫ್ ಒತ್ತಡ
ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ಬೆಲೆ ತುಸು ಕಡಿಮೆ ಇದೆ. ಜೊತೆಗೆ ಹೈನುಗಾರಿಕೆಯ ವೆಚ್ಚ ಈಗೀಗ ಹೆಚ್ಚುತ್ತಿದೆ. ಹೀಗಾಗಿ, ರಾಜ್ಯದಲ್ಲೂ ಹಾಲು ದರ ಹೆಚ್ಚಿಸಬೇಕು ಎಂದು ಹಾಲು ಉತ್ಪಾದಕ ರೈತರು ಬಹಳ ದಿನಗಳಿಂದ ಒತ್ತಾಯ ಮಾಡುತ್ತಾ ಬಂದಿದ್ದಾರೆ.
ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೆಎಂಎಫ್ನ ಎಲ್ಲಾ 16 ಜಿಲ್ಲಾ ಹಾಲು ಒಕ್ಕೂಟಗಳು ಸೇರಿ ಪ್ರತೀ ಲೀಟರ್ ಹಾಲಿಗೆ 3 ರೂ ದರ ಏರಿಕೆ ಮಾಡಬೇಕೆಂದು ಕರ್ನಾಟಕ ಹಾಲು ಒಕ್ಕೂಟಕ್ಕೆ (ಕೆಎಂಎಫ್) ಮನವಿ ಮಾಡಿದ್ದವು. ಇತ್ತೀಚೆಗೆ ನಡೆದ ಕೆಎಂಎಫ್ ಸರ್ವಸದಸ್ಯರ ಸಭೆಯಲ್ಲಿ ಬೆಲೆ ಏರಿಕೆ ನಿರ್ಣಯ ಕೈಗೊಳ್ಳಲಾಗಿತ್ತು. ಅದಕ್ಕೆ ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳು ಸರ್ವಾನುಮತದಿಂದ ಬೆಂಬಲ ನೀಡಿದ್ದವು. ಹಾಲಿನ ದರ ಲೀಟರ್ಗೆ 3 ರೂ ಏರಿಕೆ ಮಾಡುವುದು, ಮತ್ತು ಆ ಏರಿಕೆ ಹಣವನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸುವುದು ಎಂಬುದು ತೀರ್ಮಾನವಾಗಿತ್ತು. ಮಂಡ್ಯ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಾಲು ಉತ್ಪಾದಕ ರೈತರು ಹಾಲಿನ ದರವನ್ನು ಐದು ರೂನಷ್ಟು ಹೆಚ್ಚಳ ಮಾಡಬೇಕೆಂದು ಇತ್ತೀಚೆಗೆ ಒತ್ತಾಯಿಸಿದ್ದರು.
ಈ ಹಿಂದೆ ಕೆಲವು ಬಾರಿ ಕೆಎಂಎಫ್ ಹಾಲಿನ ದರ ಹೆಚ್ಚಿಸಲು ಮುಂದಾಗಿದ್ದುಂಟು. ಹಾಗೆಲ್ಲಾ ಸರ್ಕಾರ ಬೆಲೆ ಏರಿಕೆಗೆ ಅವಕಾಶ ನಿರಾಕರಿಸುತ್ತಾ ಬಂದಿತ್ತು. ಈಗಲೂ ಕೆಎಂಎಫ್ನ ಇವತ್ತಿನ ನಿರ್ಧಾರಕ್ಕೆ ಸರ್ಕಾರ ತಡೆ ನೀಡಿರುವುದರಲ್ಲಿ ಅಚ್ಚರಿ ಏನಿಲ್ಲ.
ಈಗೆಷ್ಟಿದೆ ಹಾಲಿನ ದರ?
(ಲೀಟರ್ ಲೆಕ್ಕದಲ್ಲಿ)
ಟೋನ್ಡ್ ಹಾಲು: 37 ರೂ
ಹೋಮೋಜಿನೈಸ್ಡ್ ಹಾಲು: 38
ಹೋಮೋಜಿನೈಸ್ಡ್ ಹಸು ಹಾಲು: 42
ಸ್ಪೆಷಲ್ ಹಾಲು: 43 ರೂ
ಶುಭಂ ಹಾಲು: 43 ರೂ
ಹೋಮೋಜಿನೈಸ್ಡ್ ಸ್ಟ್ಯಾಂಡರ್ಡೈಸ್ಡ್ ಹಾಲು: 44 ರೂ
ಸಮೃದ್ಧಿ ಹಾಲು: 48 ರೂ
ಸಂತೃಪ್ತಿ ಹಾಲು: 50 ರೂ
ಡಬಲ್ ಟೋನ್ಡ್ ಹಾಲು: 36 ರೂ
ಮೊಸರು: 45 ರೂ
ಬೇರೆ ಬೇರೆ ರಾಜ್ಯಗಳಲ್ಲಿ ಹೇಗಿದೆ ರೇಟು?
ಸಾಮಾನ್ಯ ಹಾಲಿನ ಬೆಲೆ
ಕರ್ನಾಟಕ: 37 ರೂ
ತಮಿಳುನಾಡು: 40 ರೂ
ಕೇರಳ: 46 ರೂ
ಗುಜರಾತ್: 50 ರೂ
ಮಹಾರಾಷ್ಟ್ರ: 51 ರೂ
ದೆಹಲಿ: 51 ರೂ
ಆಂಧ್ರಪ್ರದೇಶ: 55 ರೂ
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications