ಬೆಂಗಳೂರು, ಮೇ 27: ಭಾರತೀಯ ಹವಾಮಾನ ಇಲಾಖೆಯ (IMD) ಇತ್ತೀಚಿನ ಮುನ್ಸೂಚನೆಯು ಬೆಂಗಳೂರು ಮತ್ತು ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿರುವ ಇತರ ಜಿಲ್ಲೆಗಳಿಗೆ ಕೊಚ್ಚ ನೆಮ್ಮದಿ ತಂದಿದೆ.
ಇತ್ತೀಚಿನ IMD ಮುನ್ಸೂಚನೆಯ ಪ್ರಕಾರ, ಕರ್ನಾಟಕವು ಉತ್ತಮ ಮಾನ್ಸೂನ್ ಮಳೆಯನ್ನು ಪಡೆಯುವ ನಿರೀಕ್ಷೆಯಿದೆ, ಇದು ಕೃಷಿ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಈ ಪ್ರದೇಶಗಳಲ್ಲಿ ನೀರಿನ ಕೊರತೆಯನ್ನು ನಿವಾರಿಸಲು ಗಮನಾರ್ಹವಾಗಿ ಸಹಾಯ ಮಾಡುತ್ತದೆ. ಈ ಹಿಂದೆ IMD ಮುನ್ಸೂಚನೆಯು ಮೇ 31 ರಿಂದ ಕರ್ನಾಟಕದಲ್ಲಿ ಮಾನ್ಸೂನ್ ಪ್ರಾರಂಭವಾಗಲಿದೆ ಎಂದು ಸೂಚಿಸಿತ್ತು.

ಆದರೆ, ಇತ್ತೀಚಿನ ಮುನ್ಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಮುಂಗಾರು ಜೂನ್ 5 ರ ಸುಮಾರಿಗೆ ಪ್ರಾರಂಭವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಮೇ 31 ರವರೆಗೆ ಪ್ರತ್ಯೇಕ ಮತ್ತು ಚದುರಿದ ಮಳೆ ಮುಂದುವರಿಯುತ್ತದೆ ಎಂದು IMD ಹವಾಮಾನ ತಜ್ಞ ಸಿಎಸ್ ಪಾಟೀಲ್ ಹೇಳಿದ್ದಾರೆ.
ಈ ವರ್ಷ, ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳು ಹೆಚ್ಚಿನ ಅಧಿಕ ಮಳೆಯನ್ನು ಪಡೆಯುವ ನಿರೀಕ್ಷೆಯಿದೆ, ಇದು ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಸಮವಾಗಿ ಬೀಳಲಿದೆ. ಆದಾಗ್ಯೂ, ಸೈಕ್ಲೋನಿಕ್ ಚಟುವಟಿಕೆಯಿಂದ ಬದಲಾವಣೆಗಳಾದರೆ ಮುಂಗಾರು ಇನ್ನೂ ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆಯಿದೆ.
ಬೆಂಗಳೂರಿನ ಐಎಂಡಿ ನಿರ್ದೇಶಕ ಎನ್ ಪುವಿಯರಸನ್ ಮಾತನಾಡಿ, ವಿವಿಧ ಹವಾಮಾನ ವ್ಯವಸ್ಥೆ ಬೆಳಣಿಗೆ ಮತ್ತು ಹೊಸ ವ್ಯವಸ್ಥೆಗಳ ರಚನೆಯೊಂದಿಗೆ ಮುಂಗಾರು ಪ್ರಾರಂಭವಾಗುವ ಸಾಧ್ಯತೆಯಿದೆ. ಮೇ 30 ರೊಳಗೆ ಕೇರಳ ಮತ್ತು ಮೇ 31 ರ ವೇಳೆಗೆ ಕರ್ನಾಟಕವನ್ನು ಅಪ್ಪಳಿಸುವ ಸಾಧ್ಯತೆಯಿದೆ. ಮುಂಗಾರು ಮುನ್ಸೂಚನೆ ಬಂದಾಗಲೆಲ್ಲಾ ಐದು ದಿನಗಳ ಮುಂಚಿತವಾಗಿ ಅಥವಾ ವಿಳಂಬವನ್ನು ಪರಿಗಣಿಸಲಾಗುವುದು ಎಂದು ಅವರು ಹೇಳಿದ್ದರು.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications