ಬೆಂಗಳೂರು, ಮೇ 27: ಭಾರತೀಯ ಹವಾಮಾನ ಇಲಾಖೆಯ (IMD) ಇತ್ತೀಚಿನ ಮುನ್ಸೂಚನೆಯು ಬೆಂಗಳೂರು ಮತ್ತು ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿರುವ ಇತರ ಜಿಲ್ಲೆಗಳಿಗೆ ಕೊಚ್ಚ ನೆಮ್ಮದಿ ತಂದಿದೆ.
ಇತ್ತೀಚಿನ IMD ಮುನ್ಸೂಚನೆಯ ಪ್ರಕಾರ, ಕರ್ನಾಟಕವು ಉತ್ತಮ ಮಾನ್ಸೂನ್ ಮಳೆಯನ್ನು ಪಡೆಯುವ ನಿರೀಕ್ಷೆಯಿದೆ, ಇದು ಕೃಷಿ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಈ ಪ್ರದೇಶಗಳಲ್ಲಿ ನೀರಿನ ಕೊರತೆಯನ್ನು ನಿವಾರಿಸಲು ಗಮನಾರ್ಹವಾಗಿ ಸಹಾಯ ಮಾಡುತ್ತದೆ. ಈ ಹಿಂದೆ IMD ಮುನ್ಸೂಚನೆಯು ಮೇ 31 ರಿಂದ ಕರ್ನಾಟಕದಲ್ಲಿ ಮಾನ್ಸೂನ್ ಪ್ರಾರಂಭವಾಗಲಿದೆ ಎಂದು ಸೂಚಿಸಿತ್ತು.

ಆದರೆ, ಇತ್ತೀಚಿನ ಮುನ್ಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಮುಂಗಾರು ಜೂನ್ 5 ರ ಸುಮಾರಿಗೆ ಪ್ರಾರಂಭವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಮೇ 31 ರವರೆಗೆ ಪ್ರತ್ಯೇಕ ಮತ್ತು ಚದುರಿದ ಮಳೆ ಮುಂದುವರಿಯುತ್ತದೆ ಎಂದು IMD ಹವಾಮಾನ ತಜ್ಞ ಸಿಎಸ್ ಪಾಟೀಲ್ ಹೇಳಿದ್ದಾರೆ.
ಈ ವರ್ಷ, ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳು ಹೆಚ್ಚಿನ ಅಧಿಕ ಮಳೆಯನ್ನು ಪಡೆಯುವ ನಿರೀಕ್ಷೆಯಿದೆ, ಇದು ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಸಮವಾಗಿ ಬೀಳಲಿದೆ. ಆದಾಗ್ಯೂ, ಸೈಕ್ಲೋನಿಕ್ ಚಟುವಟಿಕೆಯಿಂದ ಬದಲಾವಣೆಗಳಾದರೆ ಮುಂಗಾರು ಇನ್ನೂ ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆಯಿದೆ.
ಬೆಂಗಳೂರಿನ ಐಎಂಡಿ ನಿರ್ದೇಶಕ ಎನ್ ಪುವಿಯರಸನ್ ಮಾತನಾಡಿ, ವಿವಿಧ ಹವಾಮಾನ ವ್ಯವಸ್ಥೆ ಬೆಳಣಿಗೆ ಮತ್ತು ಹೊಸ ವ್ಯವಸ್ಥೆಗಳ ರಚನೆಯೊಂದಿಗೆ ಮುಂಗಾರು ಪ್ರಾರಂಭವಾಗುವ ಸಾಧ್ಯತೆಯಿದೆ. ಮೇ 30 ರೊಳಗೆ ಕೇರಳ ಮತ್ತು ಮೇ 31 ರ ವೇಳೆಗೆ ಕರ್ನಾಟಕವನ್ನು ಅಪ್ಪಳಿಸುವ ಸಾಧ್ಯತೆಯಿದೆ. ಮುಂಗಾರು ಮುನ್ಸೂಚನೆ ಬಂದಾಗಲೆಲ್ಲಾ ಐದು ದಿನಗಳ ಮುಂಚಿತವಾಗಿ ಅಥವಾ ವಿಳಂಬವನ್ನು ಪರಿಗಣಿಸಲಾಗುವುದು ಎಂದು ಅವರು ಹೇಳಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications