ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದೆ. ಏರುಮಖದಲ್ಲೇ ಸಾಗಿರುವ ಈರುಳ್ಳಿ ಬೆಲೆ ಏರಿಕೆ ಜನಸಾಮಾನ್ಯರಲ್ಲಿ ಕಣ್ಣೀರು ತರಿಸಿದೆ. ದೇಶದ ಹಲವು ನಗರಗಳಲ್ಲಿ ಚಿಲ್ಲರೆ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 200 ರುಪಾಯಿ ತಲುಪಿದೆ. ಆದರೆ ದೀದಿ ಸರ್ಕಾರವು ಕೆಜಿಗೆ 50 ರುಪಾಯಿ ದರದಲ್ಲಿ ಈರುಳ್ಳಿ ನೀಡುತ್ತಿದೆ.
ದೇಶದ ಇತರೆ ನಗರಗಳಂತೆಯೇ ಕೊಲ್ಕತ್ತಾದಲ್ಲಿ ಕೆಜಿ ಈರುಳ್ಳಿ ಬೆಲೆ 150 ರುಪಾಯಿ ದಾಟಿದೆ. ಗ್ರಾಹಕರು 5 ಕೆಜಿ ಈರುಳ್ಳಿ ತೆಗೆದುಕೊಳ್ಳುವ ಪ್ರಮಾಣದಲ್ಲಿ 500 ಗ್ರಾಂ ಖರೀದಿಸುತ್ತಿದ್ದಾರೆ. ಬೆಲೆ ಏರಿಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಪಡಿತರ ಅಂಗಡಿಗಳ ಮೂಲಕ ಸಬ್ಸಿಡಿ ದರದಲ್ಲಿ ಸೋಮವಾರದಿಂದ ಪ್ರತಿ ಕೆಜಿ ಈರುಳ್ಳಿಗೆ 50 ರುಪಾಯಿಯಂತೆ ಮಾರಾಟ ಮಾಡುವುದಾಗಿ ಘೋಷಿಸಿದೆ.

ಪಶ್ಚಿಮ ಬಂಗಾಳದ ಒಟ್ಟು 935 ಪಡಿತರ ಮಳಿಗೆಗಳಲ್ಲಿ ಈರುಳ್ಳಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಪಡಿತರ ಕಾರ್ಡ್ ನೀಡಿದರೆ ಒಂದು ಕುಟುಂಬಕ್ಕೆ 1 ಕೆಜಿ ಈರುಳ್ಳಿ ಸಿಗಲಿದೆ.
ಈರುಳ್ಳಿ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆ ತಗ್ಗಿಸಲು ಪಶ್ಚಿಮ ಬಂಗಾಳ ಸರ್ಕಾರ 1 ಕೆಜಿ ಈರುಳ್ಳಿಗೆ 50 ರುಪಾಯಿ ದರದಲ್ಲಿ ಮಾರಾಟ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಆಗಿದೆ. ಆದರೆ 1 ಕುಟುಂಬಕ್ಕೆ 1 ಕೆಜಿ ಈರುಳ್ಳಿ ಸಾಕಾಗುತ್ತಾ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications