ಈಗಲೇ ಸಿದ್ಧರಾಗಿ! ಗಾಯದ ಮೇಲೆ ಬರೆ ಎಳೆದಾಯಿತು.. ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳವೂ ಆಯಿತು. ಹೌದು, ಹೊಸ ವರ್ಷದ ಮರು ದಿನವೇ ಜನರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿ ಕೊಟ್ಟಿತ್ತು. ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣ ದರ (bus fare hike) ಶೇ.15ರಷ್ಟು ಹೆಚ್ಚಳ ಮಾಡುವುದಕ್ಕೆ ಗ್ರೀನ್ ಸಿಗ್ನಲ್ ಕೂಡ ಸಿಕ್ಕಿದೆ. ಅದರಂತೆ, ಇಂದು ಮಧ್ಯರಾತ್ರಿಯಿಂದಲೇ ಹೊಸ ಬಸ್ ಟಿಕೆಟ್ ದರ ಜಾರಿಗೆ ಬರಲಿದೆ. ಹಾಗಿದ್ರೆ, ಯಾವ ಊರಿಗೆ ಎಷ್ಟು ದರ ಏರಿಕೆಯಾಗಿದೆ? ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ.
ಹೌದು, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ಪ್ರಯಾಣ ದರ ಪರಿಷ್ಕರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಇಂದು ಮಧ್ಯರಾತ್ರಿಯಿಂದ ಶೇ 15ರಷ್ಟು ಟಿಕೆಟ್ ಏರಿಕೆಯ ಹೊಸ ದರ ಅನ್ವಯವಾಗುತ್ತದೆ.

ಬಸ್ ಪ್ರಯಾಣದ ದರ ಹೆಚ್ಚಳದ ಪಟ್ಟಿ
ಕೆಎಸ್ಆರ್ಟಿಸಿ ಎಕ್ಸ್ಪ್ರೆಸ್ ಬಸ್ಗಳ ಹೊಸ ದರ ಪಟ್ಟಿ ಬಿಡುಗಡೆ ಮಾಡಿದೆ. ಹೊಸ ಟಿಕೆಟ್ ದರ ಪಟ್ಟಿ ಈ ಕೆಳಗಿನಂತೆ ಇದೆ ನೋಡಿ.
- ಬೆಂಗಳೂರು - ತುಮಕೂರು ಪ್ರಯಾಣ ದರ: ಹಳೆಯ ದರ - 80 ರೂ. ಹೊಸ ದರ - 91 ರೂ.
- ಬೆಂಗಳೂರು-ಮಂಡ್ಯ ಪ್ರಯಾಣ ದರ: ಹಳೆಯ ದರ- 116ರೂ. ಹೊಸ ದರ - 131 ರೂ.
- ಬೆಂಗಳೂರು - ಮಂಗಳೂರು ಪ್ರಯಾಣ ದರ: ಹೊಸ ದರ 454 ರೂ.
- ಬೆಂಗಳೂರಿನಿಂದ ಹಾಸನ ಟಿಕೆಟ್ ದರ 246 ರೂ.ಗೆ ಹೆಚ್ಚಳವಾಗಿದೆ.
- ಬೆಂಗಳೂರು ನಿಂದ ಮೈಸೂರು ಟಿಕೆಟ್ ದರ 162 ರೂ.ಗೆ ಹೆಚ್ಚಳವಾಗಿದೆ.
- ಬೆಂಗಳೂರು - ಬೆಳಗಾವಿ ಟಿಕೆಟ್ ದರ : ಹೊಸ ದರ 697 ರೂ.
- ಬೆಂಗಳೂರು - ಹುಬ್ಬಳ್ಳಿಟಿಕೆಟ್ ದರ : ಹೊಸ ದರ 563 ರೂ.
- ಬೆಂಗಳೂರು-ಹಾವೇರಿ ಟಿಕೆಟ್ ದರ: ಹೊಸ ದರ 474 ರೂ.
- ಬೆಂಗಳೂರು-ಕಲಬುರಗಿ ಟಿಕೆಟ್ ದರ: ಹೊಸ ದರ 805 ರೂ.
- ಬೆಂಗಳೂರು-ಶಿವಮೊಗ್ಗ ಟಿಕೆಟ್ ದರ: ಹೊಸ ದರ 356 ರೂ.
- ಬೆಂಗಳೂರು-ಬಳ್ಳಾರಿ ಟಿಕೆಟ್ ದರ: ಹೊಸ ದರ 424 ರೂ.

ಸಾರಿಗೆ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಆರ್ಥಿಕವಾಗಿ ಮುಂದುವರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಹಾಗೂ ಹಮ್ಮಿಕೊಳ್ಳಲಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಪ್ರಯಾಣಿಕ ಬಸ್ ದರಗಳನ್ನು ಶೇ.33ರಷ್ಟು ಹೆಚ್ಚಿಸಲು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಶೇ.42ರಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು ಇದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಸಭೆಯಲ್ಲಿ ಚರ್ಚಿ ಮಾಡಿದ ನಂತರ ಶೇ.15ರಷ್ಟು ಟಿಕೆಟ್ ದರ ಪರಿಷ್ಕರಣೆ ಮಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ
ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರ್ಕಾರ ಪ್ರಯಾಣ ದರವನ್ನು ಶೇ.15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತು ಹೋಗಿ, ಪ್ರಯಾಣ ದರ ಏರಿಕೆಗೆ ಅಡ್ಜೆಸ್ಟ್ ಆಗುತ್ತಾರೆ. ಇದು ನೈಜ ಪರಿಸ್ಥಿತಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಸಿಬ್ಬಂದಿಗಳ ಭವಿಷ್ಯ ನಿಧಿ, ನಿವೃತ್ತ ನೌಕರರ ವೇತನ,ಗ್ರಾಚ್ಯುಟಿ, ಪೂರೈಕೆದಾರರ ಬಾಕಿ ಬಿಲ್ಗಳು, ಡೀಸೆಲ್ ಸರಬರಾಜು ಬಿಲ್, ಮೋಟಾರ್ ವಾಹನ ತೆರಿಗೆ ಪಾವತಿ ಮಾಡದಿರುವುದು ಮತ್ತು ಇತರ ಬಿಲ್ಗಳ ಬಾಕಿಯಿಂದಾಗಿ ನಾಲ್ಕು ಸಾರಿಗೆ ಸಂಸ್ಥೆಗಳ ಮೇಲೆ ಆರ್ಥಿಕ ಹೊಣೆಗಾರಿಕೆ ಜಾಸ್ತಿ ಇದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications