ಈ ಹಿಂದೆ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಅವಕಾಶವನ್ನು ನೀಡಿದ ಕರ್ನಾಟಕ ರಾಜ್ಯ ಸರ್ಕಾರವು ಈಗ ಕೆಎಸ್ಆರ್ಟಿಸಿ ಉದ್ಯೋಗಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಉದ್ಯೋಗಿ ಸ್ನೇಹಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಉದ್ಯೋಗಿಗಳ ಪರಿಹಾರ ಮೊತ್ತವನ್ನು 3 ಲಕ್ಷ ರೂಪಾಯಿ 10 ಲಕ್ಷ ರೂಪಾಯಿಗೆ ಏರಿಸಿದೆ.
ಇದು ಸಾರಿಗೆ ಸೌಲಭ್ಯವು ಇತಿಹಾಸದಲ್ಲಿಯೇ ಅತೀ ಅಧಿಕ ಮೊತ್ತವಾಗಿದೆ. ಅನಾರೋಗ್ಯ ಅಥವಾ ಅಪಘಾತದಿಂದ ಕೆಎಸ್ಆರ್ಟಿಸಿ ಉದ್ಯೋಗಿಯು ಮರಣ ಹೊಂದಿದ ಸಂದರ್ಭದಲ್ಲಿ ನೌಕರನ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ನೀಡಲಾಗುತ್ತದೆ. ನೌಕರರ ಕುಟುಂಬ ಕಲ್ಯಾಣ ಯೋಜನೆ ಎಂದು ಕರೆಯಲ್ಪಡುವ, ಪರಿಹಾರ ಮೊತ್ತವು ಕೆಎಸ್ಆರ್ಟಿಸಿಯ ನೌಕರರಿಗೆ ಮಾತ್ರ ಅನ್ವಯಿಸುತ್ತದೆ.

ಬಿಎಂಟಿಸಿ ಮತ್ತು ಇತರ ಎರಡು ಸಾರಿಗೆ ನಿಗಮಗಳು ವಿಭಿನ್ನ ಯೋಜನೆಯನ್ನು ಹೊಂದಿವೆ. ಈ ಪರಿಹಾರ ಮೊತ್ತವು 1 ಕೋಟಿ ರೂಪಾಯಿ ಅಪಘಾತ ಪರಿಹಾರದ ಹೊರತಾಗಿ ಕರ್ತವ್ಯದಲ್ಲಿರುವಾಗ ಅಥವಾ ಹೊರಗಿರುವಾಗ ಪ್ರಾಣ ಕಳೆದುಕೊಳ್ಳುವ ನೌಕರರ ಕುಟುಂಬಕ್ಕೆ ನೀಡಲಾಗುವ ಮೊತ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಏಳು ಪ್ರಕರಣಗಳಿಗೆ ಈ ಪರಿಹಾರ ಸಿಕ್ಕಿದೆ.
ಕ್ಯಾನ್ಸರ್, ಪಾರ್ಶ್ವವಾಯು, ಹೃದಯಾಘಾತ, ಮೂತ್ರಪಿಂಡ ವೈಫಲ್ಯ ಮುಂತಾದ ಕಾಯಿಲೆಗಳಿಂದ ವರ್ಷಕ್ಕೆ 100 ಕ್ಕೂ ಹೆಚ್ಚು ಕೆಎಸ್ಆರ್ಟಿಸಿಯ ಉದ್ಯೋಗಿಗಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇದು ಕೆಲಸದ ಕಠಿಣ ಸ್ವಭಾವವನ್ನು ಸೂಚಿಸುತ್ತದೆ ಎಂದು ವರದಿಯು ಉಲ್ಲೇಖಿಸಿದೆ.
ಯೋಜನೆಯ ಭಾಗವಾಗಿ, ನೌಕರರು ತಿಂಗಳಿಗೆ 100 ರೂಪಾಯಿ ಬದಲಾಗಿ 200 ರೂಪಾಯಿಗಳನ್ನು ನೀಡಲಿದ್ದು, ನಿಗಮವು ಪ್ರತಿ ಉದ್ಯೋಗಿಯ ಪರವಾಗಿ ತನ್ನ ಕೊಡುಗೆಯನ್ನು 50 ರೂಪಾಯಿಯಿಂದ 100 ರೂಪಾಯಿಗೆ ಹೆಚ್ಚಿಸಲಿದೆ. ಈ ಪರಿಷ್ಕೃತ ಯೋಜನೆಯು ನವೆಂಬರ್ 1, 2023 ರಿಂದ ಜಾರಿಗೆ ಬರಲಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!



Click it and Unblock the Notifications