ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಶಕ್ತಿ ಆರಂಭವಾಗಿ ನೂರು ದಿನಗಳು ಆಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಮೂರು ತಿಂಗಳು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಶನ್, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನುಬ್ ಕುಮಾರ್ಗೆ ಪತ್ರ ಬರೆದಿದೆ. ಈ ಯೋಜನೆಯು ಎಸ್ಆರ್ಟಿಸಿ ಕಂಡಕ್ಟರ್ಗೆ ತಲೆನೋವಾಗಿದೆ ಎಂದು ಹೇಳಿದ್ದಾರೆ.
ಈ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಕಂಡಕ್ಟರ್ಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸೆಪ್ಟೆಂಬರ್ 19 ರಂದು ಬರೆದ ಪತ್ರದಲ್ಲಿ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಡಿ.ಎ, "ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯು ಯಶಸ್ವಿಯಾಗಿ ಮೂರು ತಿಂಗಳು ಪೂರೈಸಿದೆ. ಆದರೆ, ಈ ಯೋಜನೆಯನ್ನು ಅನುಷ್ಠಾನಗೊಳಿಸುವಾಗ, ಕಂಡಕ್ಟರ್ಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ," ಎಂದು ತಿಳಿಸಿದರು.

ಕಂಡಕ್ಟರ್ಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಲು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ತುರ್ತು ಸಭೆ ನಡೆಸಿ ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲು ಫೆಡರೇಶನ್ ಕೋರಿದೆ. ಕಂಡಕ್ಟರ್ಗಳ ಮೇಲೆ ನಡೆಯುತ್ತಿರುವ ಕಿರುಕುಳದ ಬಗ್ಗೆ ಉಲ್ಲೇಖಿಸಿದ ವಿಜಯಭಾಸ್ಕರ್, "ಸೆಪ್ಟೆಂಬರ್ 14 ರಂದು ಸಿಗಂದೂರಿನಿಂದ ಕೋಲಾರಕ್ಕೆ ಕೆಎಸ್ಆರ್ಟಿಸಿ ಬಸ್ ತೆರಳಿತ್ತು. ನಾಲ್ವರು ಮಹಿಳೆಯರು ಬಸ್ ಹತ್ತಿ ತಮ್ಮ ಸೀಟುಗಳನ್ನು ಕಾಯ್ದಿರಿಸಿದ್ದರು. ಎಂದಿನಂತೆ ಕಂಡಕ್ಟರ್ ರಾಮಣ್ಣ ರಿಸರ್ವೇಶನ್ ಟಿಕೆಟ್ ಪರಿಶೀಲಿಸಿ ಟಿಕೆಟ್ ಚಾರ್ಟ್ನಲ್ಲಿ ಗುರುತು ಮಾಡಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು," ಎಂದು ಹೇಳಿದ್ದಾರೆ.
"ಬಸ್ ರಿಪ್ಪನ್ಪೇಟೆ ದಾಟುತ್ತಿದ್ದಾಗ ತಪಾಸಣಾ ತಂಡ ಟಿಕೆಟ್ ಪರಿಶೀಲನೆ ಆರಂಭಿಸಿದ್ದು, ರಿಸರ್ವೇಶನ್ ಟಿಕೆಟ್ ನೀಡಿ ಒಳಗೆ ಬಂದ ನಾಲ್ವರು ಮಹಿಳೆಯರಿಗೆ 'ಶೂನ್ಯ ಟಿಕೆಟ್' ನೀಡದಿರುವುದು ಕಂಡು ಬಂದಿದೆ. ಕಂಡಕ್ಟರ್ಗೆ ಅಪರಾಧದ ಮೆಮೋ ನೀಡಲಾಗಿದೆ," ಎಂದು ತಿಳಿಸಿದರು. ಇಂತಹ ಹಲವಾರು ಪ್ರಕರಣಗಳು ನಡೆದಿದೆ ಎಂದು ಕೂಡಾ ಉಲ್ಲೇಖಿಸಿದ್ದಾರೆ.
"ಕಂಡಕ್ಟರ್ಗಳನ್ನು ಅಮಾನತುಗೊಳಿಸಿ ಬೇರೆ ಬಸ್ ಡಿಪೋಗೆ ವರ್ಗಾಯಿಸಬಹುದು. ಕಂಡಕ್ಟರ್ ತನ್ನ ನಿರಂತರ ಅಭ್ಯಾಸದಿಂದಾಗಿ ಶೂನ್ಯ ಟಿಕೆಟ್ಗಳನ್ನು ನೀಡಲಿಲ್ಲ. ತಮ್ಮ ವೈಯಕ್ತಿಕ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲ," ಎಂದು ಹೇಳಿದ ವಿಜಯಭಾಸ್ಕರ್, "ಕಂಡಕ್ಟರ್ಗಳು ಹೊಸ ಯೋಜನೆಗೆ ಒಗ್ಗಿಕೊಳ್ಳುವವರೆಗೆ ಅವರ ವಿರುದ್ಧ ಕ್ರಮ ಕೈಗೊಳ್ಳಬಾರದು. ಅವರಿಗೆ ಎಚ್ಚರಿಕೆ ನೀಡಬೇಕು ಮತ್ತು ಅವರ ಹಳೆಯ ಅಭ್ಯಾಸಗಳು ಬದಲಾಗುವವರೆಗೆ ಬಿಡಬೇಕು," ಎಂದು ಒತ್ತಾಯಿಸಿದರು.
More From GoodReturns

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications