ರಾಜ್ಯದ ರೈತರಿಗೆ ಇದೋ ಬಂತು ಸಿಹಿಸುದ್ದಿ! ಸೌರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಯೋಜನೆಯ ಭಾಗವಾಗಿ ಕುಸುಮ್-ಸಿ ಸೋಲಾರ್ ಯೋಜನೆ ಚಾಲನೆ ಮಾಡಲಿದೆ. ಇದರಿಂದ ರೈತರಿಗೆ ವಿದ್ಯುತ್ ಉಳಿತಾಯದ ಜೊತೆಗೆ ಹೆಚ್ಚಿನ ಅನುಕೂಲ ಆಗುತ್ತದೆ. ಸಬ್ಸಿಡಿ ಸೌರಶಕ್ತಿ ಚಾಲಿತ ನೀರಾವರಿ ಪಂಪ್ಗಳೊಂದಿಗೆ ರೈತರಿಗೆ ಬೆಂಬಲ ನೀಡಲು ಸರ್ಕಾರ ಮುಂದಾಗಿದೆ. ಇದೇ ಜೂ.11 ರಂದು ಕುಸುಮ್-ಸಿ ಯೋಜನೆಯನ್ನು ಉದ್ಘಾಟನೆ ಮಾಡಲಾಗುವುದು. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು,ರಾಜ್ಯ ಸರ್ಕಾರ ಸೌರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಈ ಕ್ರಮವನ್ನು ಕೈಗೊಂಡಿದದೆ. ಇದು ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (PM-Kusum)ಯೋಜನೆಯ ಒಂದು ಭಾಗವಾಗಿದೆ.ಜೂನ್ 11 ರಂದು ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಕುಸುಮ್-ಸಿ ಯೋಜನೆಯ ಅನುಷ್ಠಾನವನ್ನು ಉದ್ಘಾಟನೆಯನ್ನು ಮಾಡಲಾಗುತ್ತದೆ.

ಈ ಸೌರ ವಿದ್ಯುತ್ ಯೋಜನೆಯು ಅಸ್ತಿತ್ವದಲ್ಲಿರುವ ಗ್ರಿಡ್-ಸಂಪರ್ಕಿತ ಕೃಷಿ ಪಂಪ್ಗಳನ್ನು ಸೌರಶಕ್ತಿ ಚಾಲಿತಗೊಳಿಸಲು ಅನುಮತಿ ನೀಡಲಾಗುತ್ತದೆ.ಈ ಸೌರ ಶಕ್ತಿಯನ್ನು ಅಳವಡಿಕೆಯಿಂದಾಗಿ ರೈತರು ವಿದ್ಯುತ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮತ್ತು ಹೆಚ್ಚುವರಿ ಸೌರಶಕ್ತಿಯನ್ನು ವಿದ್ಯುತ್ ವಿತರಣಾ ಕಂಪನಿಗಳಿಗೆ ಮಾರಾಟ ಮಾಡುವ ಮೂಲಕ ಹೆಚ್ಚುವರಿ ಆದಾಯವನ್ನು ಗಳಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ಇದು ಪಂಪ್-ಮಟ್ಟದ ಸೌರಶಕ್ತಿ ಚಾಲಿತೀಕರಣ ಮತ್ತು ಫೀಡರ್-ಮಟ್ಟದ ಸೌರಶಕ್ತಿ ಚಾಲಿತೀಕರಣ ಎರಡಕ್ಕೂ ಬೆಂಬಲವನ್ನು ಮಾಡುತ್ತದೆ. ಅಲ್ಲಿ ಒಂದೇ ಸೌರ ವಿದ್ಯುತ್ ಸ್ಥಾವರವು ಬಹು ಪಂಪ್ಗಳಿಗೆ ಶಕ್ತಿಯನ್ನು ನೀಡುತ್ತದೆ.
ಸೌರಫಲಕಗಳನ್ನು ಅಳವಡಿಸಲು ಖಾಸಗಿ ಭೂಮಿಯನ್ನು ಖರೀದಿಸುವಲ್ಲಿನ ಅಡೆತಡೆಗಳು ಇವೆ ಎಂದು ಇಂಧನ ಸಚಿವರು ಒಪ್ಪಿಕೊಂಡಿದ್ದಾರೆ.
ಸರ್ಕಾರಿ ಭೂಮಿ ಲಭ್ಯವಿರುವಲ್ಲೆಲ್ಲಾ ಫಲಕಗಳನ್ನು ಅಳವಡಿಸಲಾಗುತ್ತಿದೆ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಭೂಮಿಯನ್ನು ಹುಡುಕಿ ಕೆಲಸ ಪ್ರಾರಂಭಿಸಲು ನಿರ್ದೇಶವನನ್ನು ಸಹ ಇಂಧನ ಸಚಿವರು ಮಾಡಿದ್ಧಾರೆ. ಪಂಚಾಯತ್ಗಳು ಲಭ್ಯವಿರುವ ಭೂಮಿಯನ್ನು ಉಪಯುಕ್ತತಾ ಕಾರ್ಯಗಳಿಗೆ ಬಳಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸೌರಶಕ್ತಿ ಚಾಲಿತ ಎರಡನೇ ಲೈಫ್ ಬ್ಯಾಟರಿಗಳ ಸಂಗ್ರಹ ಸಂಯೋಜಿತ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರವನ್ನು ಉದ್ಘಾಟಿಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ (ಬೆಸ್ಕಾಮ್) ಜರ್ಮನ್ ಅಂತರರಾಷ್ಟ್ರೀಯ ಸಹಕಾರ ನಿಗಮ (GIZ) ನೊಂದಿಗೆ ಈ ಸೌಲಭ್ಯಗಳನ್ನು ರಚಿಸಲಾಗುತ್ತದೆ.
ಬಳಸಿದ ಬ್ಯಾಟರಿಗಳನ್ನು ಚಾರ್ಜಿಂಗ್ ಸ್ಟೇಷನ್ನಲ್ಲಿ ನವೀಕರಿಸಿ ಬಳಸಲಾಗುತ್ತಿರುವುದರಿಂದ ಪರಿಸರದ ಮೇಲಿನ ಪರಿಣಾಮ ಕಡಿಮೆಯಾಗಿದೆ ಎಂದು ಹೇಳಿದರು. ದೇಶದಲ್ಲಿ ಇದು ಮೊದಲನೆಯದು ಮತ್ತು ರಾಜ್ಯದ ವಿದ್ಯುತ್ ವಾಹನ ನೀತಿಯ ಭಾಗವಾಗಿ ಇದನ್ನು ಸ್ಥಾಪಿಸಲಾಗಿದೆ. ಕರ್ನಾಟಕವು 5,880 ವಿದ್ಯುತ್ ಚಾರ್ಜಿಂಗ್ ಸ್ಟೇಷನ್ಗಳನ್ನು ಹೊಂದಿದ್ದು, ಅವುಗಳಲ್ಲಿ 4462 ಬೆಂಗಳೂರಿನಲ್ಲಿಯೇ ಇವೆ.
ಕೆಐಎಯ ಹೊಸ ಸೌಲಭ್ಯ; 23 ವಾಹನಗಳನ್ನು ಚಾರ್ಜ್ ಮಾಡಬಹುದು
ಕೆಐಎಯ ಹೊಸ ಸೌಲಭ್ಯವು ಏಕಕಾಲದಲ್ಲಿ 23 ವಾಹನಗಳನ್ನು ಚಾರ್ಜ್ ಮಾಡಬಹುದು. ಮೊದಲ ಹಂತದಲ್ಲಿ, ಎಂಟು ವಾಹನಗಳು ಪರ್ಯಾಯ ವಿದ್ಯುತ್ (ಎಸಿ) ಯೊಂದಿಗೆ ಚಾರ್ಜ್ ಮಾಡಲು ಸಾಧ್ಯವಾಗುತ್ತದೆ. ಹಗಲಿನಲ್ಲಿ ವೇಳೆಯಲ್ಲಿ ಉತ್ಪಾದಿಸುವ ಸೌರಶಕ್ತಿಯನ್ನು ಸಂಗ್ರಹಿಸಲು ಕೇಂದ್ರದಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಲಾಗಿದೆ, ಇದನ್ನು ರಾತ್ರಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಪ್ರಸ್ತುತ ಘಟಕವು ಶೇ. 60 ನೇರ ಶಕ್ತಿ ಮತ್ತು ಶೇ.30 ಸೌರಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಪ್ರತಿ ಚಾರ್ಜಿಂಗ್ ಘಟಕವು 10 ನವೀಕರಿಸಿದ ಬ್ಯಾಟರಿಗಳನ್ನು ಹೊಂದಿದ್ದು, 5-6 ವರ್ಷಗಳ ಜೀವಿತಾವಧಿಯನ್ನು ಹೊಂದಿದೆ ಎಂದು ಬೆಸ್ಕಾಮ್ ಅಧಿಕಾರಿಯೊಬ್ಬರು ಮಾಹಿತಿಯನ್ನು ವಿವರಿಸಿದ್ದಾರೆ.
ಈ ಚಾರ್ಜಿಂಗ್ ಸೌಲಭ್ಯವು ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವ ಕ್ಯಾಬ್ಗಳು ಮತ್ತು ಖಾಸಗಿ ವಾಹನಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಪ್ರತಿದಿನ ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ 10,000 ಕ್ಕೂ ಹೆಚ್ಚು ಕ್ಯಾಬ್ಗಳು ಸಂಚರಿಸುತ್ತವೆ ಮತ್ತು ಅವುಗಳಲ್ಲಿ ಹಲವು ವಿದ್ಯುತ್ ಚಾಲಿತ ವಾಹನಗಳಾಗಿವೆ. ನಗರದಲ್ಲಿ ಶೀಘ್ರದಲ್ಲೇ ಇಂತಹ ಹೆಚ್ಚಿನ ಚಾರ್ಜಿಂಗ್ ಕೇಂದ್ರಗಳು ಬರಲಿವೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications