ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ. ಕಳೆದ 4 ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ರಾಜ್ಯದ ಯಜಮಾನಿಯರ ಆಕ್ರೋಶಕ್ಕೆ ಕಾರಣವಾಗಿದೆ.ಇದೀಗ ಸಚಿವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ.
ಈ ಕುರಿತು ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಹಣ ಬಾಕಿ ಉಳಿದಿದೆ. ಈ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ, ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು. ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ರೈತ ಸಂಪರ್ಕ ಕೇಂದ್ರಗಳು ರೈತರಿಗೆ ಅನುಕೂಲವಾಗಿದೆ. ಕೃಷಿಯ ಬಗ್ಗೆ ಅಧಿಕಾರಿಗಳು ರೈತರಿಗೆ ಹೇಳಿದ್ದಾರೆ.
ಪ್ರತಿಯೊಬ್ಬರಿಗೂ ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು,ಅಧಿಕಾರಿಗಳು ರೈತರು ಹಾಗೂ ಸರ್ಕಾರದ ಮಧ್ಯೆ ಸೇತುವೆಯಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಹಣ ಪಡೆಯಲು ಇರುವಂತಹ ಅರ್ಹತಾ ಮಾನದಂಡಗಳು
ಸ್ಥಿರ ನಿವಾಸಿ: ಅರ್ಜಿ ಸಲ್ಲಿಸುವ ಮಹಿಳೆ ಕರ್ನಾಟಕದ ಸ್ಥಿರ ನಿವಾಸಿಯಾಗಿರಬೇಕು.
ಕುಟುಂಬದ ಮುಖ್ಯಸ್ಥೆ: ಅರ್ಜಿ ಸಲ್ಲಿಸುವ ಮಹಿಳೆ ಕುಟುಂಬದ ಮುಖ್ಯಸ್ಥೆಯಾಗಿ ಗುರುತಿಸಲ್ಪಟ್ಟಿರಬೇಕು.
ಆರ್ಥಿಕ ಸ್ಥಿತಿ: ಅರ್ಜಿ ಸಲ್ಲಿಸುವ ಮಹಿಳೆ ಬellow Poverty Line (BPL), Antyodaya ಅಥವಾ Above Poverty Line (APL) ಕುಟುಂಬದ ಸದಸ್ಯೆಯಾಗಿರಬೇಕು.
ಆದಾಯ ಮಿತಿ: ಅರ್ಜಿ ಸಲ್ಲಿಸುವ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ ₹2 ಲಕ್ಷಕ್ಕಿಂತ ಕಡಿಮೆ ಇರಬೇಕು.
ಭೂಮಿಯ ಮಾಲಿಕತ್ವ: ಅರ್ಜಿ ಸಲ್ಲಿಸುವ ಮಹಿಳೆ ಅಥವಾ ಅವರ ಕುಟುಂಬದ ಸದಸ್ಯರ ಬಳಿ ಯಾವುದೇ ಭೂಮಿಯ ಮಾಲಿಕತ್ವ ಇರಬಾರದು.
ಸರ್ಕಾರಿ ಉದ್ಯೋಗಿಗಳು: ಸರ್ಕಾರಿ ಉದ್ಯೋಗಿಗಳು, ಆದಾಯ ತೆರಿಗೆ ಪಾವತಿಸುವವರು ಅಥವಾ GST ರಿಟರ್ನ್ಸ್ ಸಲ್ಲಿಸುವವರು ಅರ್ಹರಾಗುವುದಿಲ್ಲ.
ಮಹಿಳೆಯ ಪತಿ ಆದಾಯ ತೆರಿಗೆ: ಅರ್ಜಿ ಸಲ್ಲಿಸುವ ಮಹಿಳೆಯ ಪತಿ ಆದಾಯ ತೆರಿಗೆ ಪಾವತಿಸುವವರು ಅಥವಾ GST ರಿಟರ್ನ್ಸ್ ಸಲ್ಲಿಸುವವರು ಇದ್ದರೆ, ಅವರು ಈ ಯೋಜನೆಗೆ ಅರ್ಹರಾಗುವುದಿಲ್ಲ.
ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು, ನೀವು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೆಳಗಿನ ವಿವರಗಳನ್ನು ಗಮನಿಸಿ:
ಅರ್ಜಿ ಸಲ್ಲಿಸುವ ವಿಧಾನಗಳು
. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ
- ಸೇವಾ ಸಿಂಧು ಗ್ಯಾರಂಟಿ ಯೋಜನೆ ಪೋರ್ಟಲ್ಗೆ ಭೇಟಿ ನೀಡಿ: https://sevasindhugs.karnataka.gov.in/index.html
- ಗೃಹ ಲಕ್ಷ್ಮೀ ಯೋಜನೆ ಆಯ್ಕೆಯನ್ನು ಆಯ್ಕೆಮಾಡಿ.
- ಪಾಪ್-ಅಪ್ ಬಾಕ್ಸ್ನಲ್ಲಿ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- 'ಸಬ್ಮಿಟ್' ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಅರ್ಜಿ ಫಾರ್ಮ್ ನಂಬರ್ ಅನ್ನು ಭವಿಷ್ಯದಲ್ಲಿ ಉಲ್ಲೇಖಿಸಲು ಗಮನಿಸಿ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ
ನಿಮ್ಮ ಹತ್ತಿರದ: ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕಚೇರಿಗಳು, ಬಾಪುಜಿ ಸೇವಾ ಕೇಂದ್ರಗಳು ಅಥವಾ ನಾಡ ಕಚೇರಿಗಳಿಗೆ ಭೇಟಿ ನೀಡಿ.
ಅರ್ಜಿ ಫಾರ್ಮ್ ಅನ್ನು ಪಡೆದು: ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಿ.
ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್: ಅರ್ಜಿ ಸಲ್ಲಿಸುವ ಮಹಿಳೆಯ ಮತ್ತು ಅವರ ಪತಿಯ (ಅಸ್ತಿತ್ವದಲ್ಲಿದ್ದರೆ) ಆಧಾರ್ ಕಾರ್ಡ್.
ರೇಷನ್ ಕಾರ್ಡ್: BPL, APL ಅಥವಾ Antyodaya ಕಾರ್ಡ್.
ಮೊಬೈಲ್ ಸಂಖ್ಯೆ: ಅಧಾರ್ ಲಿಂಕ್ ಮಾಡಿರುವ ಮೊಬೈಲ್ ಸಂಖ್ಯೆ.
ಬ್ಯಾಂಕ್ ವಿವರಗಳು: ಅಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ ವಿವರಗಳು.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications