ಸಣ್ಣ ವಿಡಿಯೋವನ್ನು ಶೇರ್ ಮಾಡುವ ಪ್ಲಾಟ್ಫಾರ್ಮ್ ಆದ ಶೇರ್ಚಾಟ್ ಈಗ ಸಂಸ್ಥೆಯಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ. ಗೂಗಲ್ ಹಾಗೂ ಟೆಮಸೆಕ್ ನೇತೃತ್ವದಲ್ಲಿ ನಡೆಸಲಾಗುವ ಈ ಆಪ್ನಲ್ಲಿ ಕಾರ್ಯನಿರ್ವಹಣೆ ಮಾಡುವ ಸುಮಾರು ಶೇಕಡ 20ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ.
ಶೇರ್ಚಾಟ್ ಸ್ಟಾರ್ಟ್ಅಪ್ ಸಂಸ್ಥೆಯಾಗಿದ್ದು, ಪ್ರಸ್ತುತ ಆರ್ಥಿಕ ಸಂಕಷ್ಟದಲ್ಲಿದೆ. ಹೂಡಿಕೆದಾರರು ಸಂಸ್ಥೆಯಲ್ಲಿನ ವೆಚ್ಚವನ್ನು ಕಡಿತ ಮಾಡಬೇಕು ಎಂದು ಒತ್ತಡವನ್ನು ಹೇರುತ್ತಿದ್ದಾರೆ. ಈ ಕಾರಣದಿಂದಾಗಿ ಸಂಸ್ಥೆಯಲ್ಲಿ ಉದ್ಯೋಗ ಕಡಿತವನ್ನು ಮಾಡಲಾಗುತ್ತಿದೆ. ಈ ಹಿಂದೆ ಹಲವಾರು ಸಂಸ್ಥೆಗಳು ಉದ್ಯೋಗಿಗಳ ಸಂಖ್ಯೆಯನ್ನು ಕಡಿತ ಮಾಡುವ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಉದ್ಯೋಗ ಕಡಿತವನ್ನು ಮಾಡಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಶೇರ್ಚಾಟ್ ಸಿಇಒ ಅಂಕುಶ್ ಸಚ್ದೇವ, "ಪ್ರಸ್ತುತ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಕುಸಿತವು ದೀರ್ಘ ಸಮಯದವರೆಗೆ ಉಳಿಯುವಂತದ್ದು ಎಂದು ಹಲವಾರು ತಜ್ಞರುಗಳ ಅಭಿಪ್ರಾಯವಾಗಿದೆ. ಅದರಿಂದಾಗಿ ನಾವು ಸಂಸ್ಥೆಯಲ್ಲಿ ಉಳಿತಾಯ ಹೆಚ್ಚಿಸಿ, ವೆಚ್ಚವನ್ನು ಕಡಿತ ಮಾಡಬೇಕಾಗುತ್ತದೆ. ಅದಕ್ಕಾಗಿ ಉದ್ಯೋಗ ಕಡಿತವನ್ನು ಮಾಡಲಾಗುತ್ತಿದೆ," ಎಂದು ತಿಳಿಸಿದ್ದಾರೆ.

ಸಂಸ್ಥೆಯ ಮೌಲ್ಯ ಎಷ್ಟಿದೆ, ಉದ್ಯೋಗಳ ಸಂಖ್ಯೆ ಎಷ್ಟಿದೆ?
ಸಂಸ್ಥೆಯ ವೆಬ್ಸೈಟ್ ಪ್ರಕಾರ ಬೆಂಗಳೂರು ಮೂಲದ ಶೇರ್ಚಾಟ್ 40,676 ಕೋಟಿ ರೂಪಾಯಿ (5 ಬಿಲಿಯನ್) ಮೌಲ್ಯವನ್ನು ಹೊಂದಿರುವ ಸಂಸ್ಥೆಯಾಗಿದೆ. ಭಾರತ, ಯುಎಸ್ಎ ಮತ್ತು ಯುರೋಪ್ ಜಾಗತಿಕವಾಗಿ ತನ್ನ ತಂಡವನ್ನು ಹೊಂದಿದೆ. ಸಂಸ್ಥೆಯಲ್ಲಿ ಸುಮಾರು 2,200ರಷ್ಟು ಉದ್ಯೋಗಿಗಳು ಇದ್ದಾರೆ.
ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿತ ಮಾಡುವ ನಿರ್ಧಾರವನ್ನು ಕೈಗೊಂಡ ಬಳಿಕ ಸಂಸ್ಥೆಯು ವೆಬ್ಸೈಟ್ ಅಲ್ಲಿ ಅಪ್ಡೇಟ್ ಮಾಡಿದೆಯೇ ಎಂಬ ಮಾಹಿತಿ ಲಭ್ಯವಾಗಿಲ್ಲ. ಕಳೆದ ವರ್ಷ ಭಾರತದ ಸ್ಟಾರ್ಟ್ಅಪ್ಗಳು 24 ಬಿಲಿಯನ್ ಡಾಲರ್ ಆದಾಯ ಹೆಚ್ಚಿಸಿದೆ.
ಬೇರೆ ಬೇರೆ ಸಂಸ್ಥೆಗಳಲ್ಲಿ ಉದ್ಯೋಗ ಕಡಿತ
ಈಗಾಗಲೇ ಹಲವಾರು ಸಂಸ್ಥೆಗಳಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತಿದೆ. ಇತ್ತೀಚೆಗೆ ಓಲಾ, ಕ್ರಿಪ್ಟೋ ಡಾಟ್ ಕಾಮ್ನಲ್ಲಿ ಉದ್ಯೋಗ ಕಡಿತ ಘೋಷಿಸಲಾಗಿದೆ. ಗೋಲ್ಡ್ಮ್ಯಾನ್ ಸಾಚ್ಸ್, ಅಮೆಜಾನ್, ಟ್ವಿಟ್ಟರ್, ಎಚ್ಪಿ, ಬೈಜೂಸ್, ಮೆಟಾ, ಗೂಗಲ್, ಜೊಮ್ಯಾಟೊ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಕಡಿತ ಘೋಷಣೆ ಮಾಡಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications