ಹಣದುಬ್ಬರ ಹಾಗೂ ಜಾಗತಿಕವಾಗಿ ಆರ್ಥಿಕ ಹಿಂಜರಿತದ ಆತಂಕದ ನಡುವೆ ಹಲವಾರು ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಕಡಿತವನ್ನು ಮಾಡುತ್ತಿದೆ. ಪ್ರತಿ ದಿನ ಒಂದಲ್ಲ ಒಂದು ಸಂಸ್ಥೆಯಲ್ಲಿ ಉದ್ಯೋಗ ಕಡಿತದ ಬಗ್ಗೆ ಸುದ್ದಿಯಾಗುತ್ತಿದೆ. ಈಗ ಮೈಕ್ರೋಸಾಫ್ಟ್ ಸಂಸ್ಥೆಯು ಇಂದು (ಬುಧವಾರ ಅಂದರೆ ಜನವರಿ 18ರಂದು) ಸಂಸ್ಥೆಯಲ್ಲಿ ಶೇಕಡ 5ರಷ್ಟು ಮಂದಿಯನ್ನು ಕೆಲಸದಿಂದ ವಜಾಗೊಳಿಸಲಿದೆ ಎಂದು ವರದಿ ಹೇಳಿದೆ.
ಮೈಕ್ರೋಸಾಫ್ಟ್ ಜಾಗತಿಕವಾಗಿ ಆರ್ಥಿಕ ಸ್ಥಿತಿ ಕೆಟ್ಟದಾಗಿರುವ ಕಾರಣದಿಂದಾಗಿ ಸಂಸ್ಥೆಯಲ್ಲಿ ಉದ್ಯೋಗ ಕಡಿತ ಮಾಡುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ತನ್ನ ಇಂಜಿನಿಯರಿಂಗ್ ಡಿವಿಜನ್ನಲ್ಲಿ ಬುಧವಾರವೇ ಉದ್ಯೋಗಿಗಳ ವಜಾಗೊಳಿಸಲು ಸಂಸ್ಥೆಯು ಆರಂಭಿಸಲಿದೆ. ಈ ಹಿಂದೆಯೇ ಸಂಸ್ಥೆಯಲ್ಲಿ ಉದ್ಯೋಗ ಕಡಿತದ ಬಗ್ಗೆ ಮಾಹಿತಿ ಲಭಿಸಿತ್ತು.
ಆದರೆ ಈ ಬಗ್ಗೆ ಸಂಸ್ಥೆಯು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಈ ಸುದ್ದಿ ಬರೀ ವದಂತಿ ಎಂದು ಹೇಳಿಕೊಂಡಿದೆ. ಆದರೆ ಸಂಸ್ಥೆಯಲ್ಲಿ ಕಳೆದ ವರ್ಷದಲ್ಲಿ ಎರಡು ಬಾರಿ ಸುಮಾರು 220,000ಕ್ಕೂ ಅಧಿಕ ಮಂದಿಯನ್ನು ಉದ್ಯೋಗದಿಂದ ವಜಾಗೊಳಿಸಿದೆ ಎಂದು ವರದಿಯು ಉಲ್ಲೇಖಿಸಿದೆ. ಯುಎಸ್ನಲ್ಲಿ ಒಟ್ಟಾಗಿ 1,22,000 ಉದ್ಯೋಗ ಕಡಿತ ಮಾಡಿದ್ದರೆ, ಜಾಗತಿಕವಾಗಿ ಬೇರೇಡೆ 99,000 ಮಂದಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ.

ಮಾರುಕಟ್ಟೆಯಲ್ಲಿ ತನ್ನ ಉತ್ಪನ್ನಗಳ ಮಾರಾಟ ಕುಸಿತವಾದಂತೆ, ವೆಚ್ಚವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಸಂಸ್ಥೆಯು ಈ ಕ್ರಮವನ್ನು ಕೈಗೊಂಡಿದೆ. ಈ ಹಿಂದೆ ಎಚ್ಪಿ ಸಂಸ್ಥೆಯ ಉತ್ಪನ್ನದ ಮಾರಾಟವು ಕಡಿಮೆಯಾದಾಗ ಸಂಸ್ಥೆಯು ಉದ್ಯೋಗ ಕಡಿತದ ಹಾದಿ ತುಳಿದಿತ್ತು.
ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಕೆಲವೇ ಮಂದಿಯನ್ನು ಸಂಸ್ಥೆಯಿಂದ ವಜಾಗೊಳಿಸಲಾಗುತ್ತದೆ ಎಂದು ಸಂಸ್ಥೆಯು ಹೇಳಿತ್ತು. ಅಕ್ಟೋಬರ್ನಲ್ಲಿ ಮೈಕ್ರೋಸಾಫ್ಟ್ ಬೇರೆ ಬೇರೆ ಡಿವಿಜನ್ನಲ್ಲಿ ಒಟ್ಟಾಗಿ ಒಂದು ಸಾವಿರ ಮಂದಿಯನ್ನು ಉದ್ಯೋಗದಿಂದ ವಜಾಗೊಳಿಸಿದೆ ಎಂದು ವರದಿಯಾಗಿತ್ತು. ಇನ್ನು ಈಗ ಮೈಕ್ರೋಸಾಫ್ಟ್ನಲ್ಲಿ ಸುಮಾರು ಶೇಕಡ 5ರಿಂದ 10ರವರೆಗೆ ಉದ್ಯೋಗ ಕಡಿತ ನಿರೀಕ್ಷೆಯಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications