ಕಳೆದ ವರ್ಷ 2022ರಲ್ಲಿ ವೆಚ್ಚ ಕಡಿತದ ನೆಪದಲ್ಲಿ ಉದ್ಯೋಗ ಕಡಿತವನ್ನು ಆರಂಭ ಮಾಡಿದ, ಟ್ವಿಟ್ಟರ್ ಸಂಸ್ಥೆಯು ಈ ವರ್ಷ ಮತ್ತೆ ಉದ್ಯೋಗ ಕಡಿತವನ್ನು ಮಾಡಿದೆ. ಎಲಾನ್ ಮಸ್ಕ್ ಮಾಲೀಕತ್ವದ ಟ್ವಿಟ್ಟರ್ನಲ್ಲಿ ವೆಚ್ಚ ಕಡಿತ ಮಾಡುವ ನಿಟ್ಟಿನಲ್ಲಿ ಮತ್ತೆ 50 ಮಂದಿಯನ್ನು ವಜಾಗೊಳಿಸಲಾಗಿದೆ. ಎಲಾನ್ ಮಸ್ಕ್ ಟ್ವಿಟ್ಟರ್ ಸಂಸ್ಥೆಯನ್ನು ಖರೀದಿ ಮಾಡಿ, ಅದರ ಸಿಇಒ ಆದ ಬಳಿಕ ಸಂಸ್ಥೆಯಲ್ಲಿ ಉದ್ಯೋಗಿಗಳ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿದಿದೆ. ಶೇಕಡ 70ರಷ್ಟು ಉದ್ಯೋಗ ಕಡಿತವಾಗಿದೆ.
ಲಭ್ಯವಾದ ಮಾಹಿತಿ ಪ್ರಕಾರ ಈ ಬಾರಿ ಮಾಡಲಾಗುವ ಉದ್ಯೋಗ ಕಡಿತವು ಮುಖ್ಯವಾಗಿ ಇಂಜಿಯರಿಂಗ್ ತಂಡಕ್ಕೆ ಪ್ರಭಾವ ಬೀರಲಿದೆ. ಈ ತಂಡದಲ್ಲಿ ಜಾಹೀರಾತು ತಂತ್ರಜ್ಞಾನ, ಪ್ರಾಥಮಿಕ ಟ್ವಿಟ್ಟರ್ ಆಪ್ ನಿರ್ವಹಣಾ ತಂಡಗಳು ಕೂಡಾ ಸೇರ್ಪಡೆಯಾಗುತ್ತದೆ. ಈ ಹಿಂದೆಯೂ ಟ್ವಿಟ್ಟರ್ ಬೇರೆ ಬೇರೆ ವಿಭಾಗಗಳಲ್ಲಿ ಉದ್ಯೋಗ ಕಡಿತವನ್ನು ಮಾಡಿದೆ. ಟ್ವಿಟ್ಟರ್ ಪ್ರಸ್ತುತ ಸರಿಸುಮಾರು 2000 ಮಂದಿ ಉದ್ಯೋಗಿಗಳನ್ನು ಸಂಸ್ಥೆಯಲ್ಲಿ ಹೊಂದಿದೆ.

ಟ್ವಿಟ್ಟರ್ನಲ್ಲಿ ನಡೆದ ಏರಿಳಿತಗಳು
2022ರ ನವೆಂಬರ್ ತಿಂಗಳಿನಲ್ಲಿ ವಿಶ್ವದ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದ (ಪ್ರಸ್ತುತ ಎರಡನೇ ಸ್ಥಾನ) ಎಲಾನ್ ಮಸ್ಕ್ ಟ್ವಿಟ್ಟರ್ ಅನ್ನು 44 ಬಿಲಿಯನ್ ಡಾಲರ್ಗೆ ಖರೀದಿ ಮಾಡಿದ್ದಾರೆ. ಅದಾದ ಬಳಿಕ ವೆಚ್ಚ ಕಡಿತ ಮಾಡುವ ನಿಟ್ಟಿನಲ್ಲಿ ಟ್ವಿಟ್ಟರ್ 3,700 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಇನ್ನು ಹಲವಾರು ದೇಶಗಳಲ್ಲಿ ಟ್ವಿಟ್ಟರ್ ತನ್ನ ಕಚೇರಿಯನ್ನು ಕೂಡಾ ಬಂದ್ ಮಾಡಿದೆ. ಕೆಲವು ಕಚೇರಿಗಳಲ್ಲಿ ಬಾಡಿಗೆಯನ್ನು ಕೂಡಾ ನೀಡಿಲ್ಲ.
ಪ್ರಸ್ತುತ ಭಾರತದಲ್ಲಿ ಟ್ವಿಟ್ಟರ್ನ ಮೂರು ಕಚೇರಿಗಳ ಪೈಕಿ ಎರಡು ಕಚೇರಿಗಳನ್ನು ಮುಚ್ಚಲಾಗಿದೆ. ಈ ಕಚೇರಿಗಳಲ್ಲಿ ಇದ್ದ 200ಕ್ಕೂ ಅಧಿಕ ಉದ್ಯೋಗಿಗಳನ್ನು ಈ ಬದಲಾವಣೆಯಿಂದಾಗಿ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇನ್ನು ಕೆಲವು ಮಾಧ್ಯಮಗಳು ಈ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಆಯ್ಕೆ ನೀಡಲಾಗಿದೆ ಎಂದು ವರದಿ ಮಾಡಿದೆ. ಕಳೆದ ವರ್ಷದಲ್ಲಿ ಸಂಸ್ಥೆಯಲ್ಲಿ ಭಾರೀ ನಷ್ಟ ಉಂಟಾಗಿದೆ. ಮುಖ್ಯವಾಗಿ ಜಾಹೀರಾತು ವಿಭಾಗದಲ್ಲಿ ನಷ್ಟ ಕಂಡುಬಂದಿದೆ.
ಟ್ವಿಟ್ಟರ್ ಬೆಳವಣಿಗೆ ಕುಸಿತ ಮತ್ತು ಬೇರೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾ, ಟಿಕ್ಟಾಕ್ ಜೊತೆ ಸ್ಪರ್ಧೆ ಅಧಿಕವಾಗುತ್ತಿದ್ದಂತೆ ಟ್ವಿಟ್ಟರ್ಗೆ ಹಲವಾರು ಸವಾಲುಗಳು ಎದುರಾಗಿದೆ. ತಮ್ಮ ಜಾಹೀರಾತಿನಲ್ಲಿ ಅಧಿಕ ಪಾರದರ್ಶಕತೆ, ಪ್ರತಿಫಲದ ಬಗ್ಗೆ ಅಧಿಕ ಒತ್ತನ್ನು ಜಾಹೀರಾತುದಾರರು ಕೋರಿದಾಗ, ಸಂಸ್ಥೆಯ ಆದಾಯಕ್ಕೆ ಇನ್ನಷ್ಟು ಪೆಟ್ಟು ಬಿದ್ದಿದೆ. ಈ ಬೆಳವಣಿಗೆಗಳ ನಡುವೆ ವಿಶ್ವದ ಅತೀ ಶ್ರೀಮಂತ ವ್ಯಕ್ತಿ ಅನಿಸಿಕೊಂಡಿದ್ದ ಎಲಾನ್ ಮಸ್ಕ್ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.
More From GoodReturns

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications