ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) 2020-21ರ ಹಣಕಾಸು ವರ್ಷದಲ್ಲಿ 1.84 ಲಕ್ಷ ಕೋಟಿ ರೂ.ಗಳ ಪ್ರೀಮಿಯಂ ಸಂಗ್ರಹಿಸಿದ ಹೊಸ ದಾಖಲೆಯನ್ನು ಸೃಷ್ಟಿಸಿದೆ. ಇದು ಕಳೆದ ವರ್ಷಕ್ಕಿಂತ ಶೇಕಡಾ 3.4ರಷ್ಟು ಅಥವಾ ಸುಮಾರು 1.77 ಲಕ್ಷ ಕೋಟಿ ರೂ. ನಷ್ಟಿದೆ ಎಂದು ಹೇಳಿದೆ.
ಕೋವಿಡ್-19 ಸಾಂಕ್ರಾಮಿಕದ ಪರಿಣಾಮ ಜನರು ಹೆಚ್ಚಿನ ಪ್ರೀಮಿಯಂ ಪಾವತಿಗಳನ್ನು ಮಾಡಿದ್ದರ ಜೊತೆಗೆ, ಸರ್ಕಾರಿ ವಿಮಾ ಕಂಪನಿಯು ವರ್ಷದಲ್ಲಿ 1.34 ಲಕ್ಷ ಕೋಟಿ ರೂ. ಕ್ಲೈಮ್ ಹಣವನ್ನು ಪಾವತಿ ಮಾಡಿದೆ.

ಎಲ್ಐಸಿ 1.85 ಲಕ್ಷ ಕೋಟಿ ರೂ.ಗಳ ಪ್ರೀಮಿಯಂನಲ್ಲಿ 56,406 ಕೋಟಿ ರೂ. ವೈಯಕ್ತಿವಾಗಿ ಪಡೆದರೆ, ಕಳೆದ ವರ್ಷ ಪಿಂಚಣಿ ಮತ್ತು ಗ್ರೂಪ್ ಇನ್ಷೂರೆನ್ಸ್ ಯೋಜನೆಗಳ ಅಡಿಯಲ್ಲಿ ಸುಮಾರು 1.27 ಲಕ್ಷ ಕೋಟಿ ರೂ.ಗಳನ್ನು ಗಳಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ಪ್ರೀಮಿಯಂಗಳಿಗಾಗಿ ಎಲ್ಐಸಿಯ ಮಾರುಕಟ್ಟೆ ಪಾಲು ಮಾರ್ಚ್ನಲ್ಲಿ ಶೇಕಡಾ 64.74ರಷ್ಟು ಮತ್ತು ಇಡೀ ಹಣಕಾಸು ವರ್ಷದಲ್ಲಿ ಶೇಕಡಾ 66.18 ರಷ್ಟಿದೆ. ಇದಲ್ಲದೆ, ಎಲ್ಐಸಿ ಗಳಿಸಿದ ಮಾರುಕಟ್ಟೆ ಪಾಲು ಮಾರ್ಚ್ 2021ಕ್ಕೆ ಶೇ. 81.04ರಷ್ಟಿದ್ದು, ಪಾಲಿಸಿಗಳ ಮೂಲಕ ವರ್ಷಕ್ಕೆ ಶೇ. 75 ರಷ್ಟು ಹೊಂದಿದೆ.
ಜೀವ ವಿಮಾ ಕ್ಷೇತ್ರವು ಒಟ್ಟಾರೆಯಾಗಿ 2.78 ಲಕ್ಷ ಕೋಟಿ ರೂ.ಗಳ ಹೊಸ ಪ್ರೀಮಿಯಂಗಳನ್ನು ಸಂಗ್ರಹಿಸಿದೆ. ಇದು 2020-21 ರ ಹಣಕಾಸು ವರ್ಷದ ವಾರ್ಷಿಕ ಆಧಾರದ ಮೇಲೆ ಶೇಕಡಾ 7.5 ರಷ್ಟು ಹೆಚ್ಚಾಗಿದೆ. ಅದರಲ್ಲಿ, ಖಾಸಗಿ ಜೀವ ವಿಮಾ ಕಂಪನಿಗಳು ಹೊಸ ಪ್ರೀಮಿಯಂಗಳನ್ನು 94,103 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದು, ಶೇಕಡಾ 16.3 ರಷ್ಟು ಬೆಳವಣಿಗೆಯನ್ನು ಹೊಂದಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications