ಇತ್ತೀಚೆಗೆ ನಡೆದಿರುವ ಒಡಿಶಾ ರೈಲು ಅಪಘಾತವು ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಅಪಘಾತದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದಾರೆ, ಹಾಗೆಯೇ ಹಲವಾರು ಮಂದಿ ಗಾಯಗೊಂಡಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಈಗಾಗಲೇ ಹಲವಾರು ಸಂಸ್ಥೆಗಳು ಮುಂದಾಗಿದೆ. ಈಗಾಗಲೇ ನಿಯಮ ಸಡಿಲಿಕೆ ಮಾಡಿದ್ದ ಎಲ್ಐಸಿ ಈಗ ರೈಲು ನಿಲ್ದಾಣಗಳಲ್ಲಿ ಸಹಾಯ ಕೇಂದ್ರ ತೆರೆಯಲು ಸಜ್ಜಾಗಿದೆ.
ಭಾರತದ ಅತೀ ದೊಡ್ಡ ವಿಮಾ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಒಡಿಶಾ ರೈಲು ಅಪಘಾತದ ಸಂತ್ರಸ್ತರ ಕುಟುಂಬಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಸಹಾಯ ಕೇಂದ್ರ ತೆರೆಯಲು ಮುಂದಾಗಿದೆ. ಈ ಬಗ್ಗೆ ಇಲ್ಲಿದೆ ಅಧಿಕ ಮಾಹಿತಿ ಮುಂದೆ ಓದಿ...

ಹೌರಾ, ಶಾಲಿಮಾರ್, ಖರಗ್ಪುರ ಮತ್ತು ಮೇದಿನಿಪುರ್ ಸೇರಿದಂತೆ ಹಲವಾರು ರೈಲು ನಿಲ್ದಾಣಗಳಲ್ಲಿ ಎಲ್ಐಸಿಯು ಸಹಾಯ ಕೇಂದ್ರವನ್ನು ತೆರೆಯಲು ನಿರ್ಧಾರ ಮಾಡಿದೆ. ಮಾಹಿತಿ ಪ್ರಕಾರ ಈ ಸಹಾಯ ಕೇಂದ್ರವನ್ನು ಬುಧವಾರ ಆರಂಭ ಮಾಡಲಾಗುತ್ತದೆ. ಒಡಿಶಾ ರೈಲು ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಹಾಯ ಮಾಡುವ ಕಾರ್ಯವನ್ನು ಈ ಸಹಾಯ ಕೇಂದ್ರವು ಮಾಡಲಿದೆ.
ಎಲ್ಐಸಿ ಸಹಾಯ ಕೇಂದ್ರ
ಈ ಬಗ್ಗೆ ಮಾಹಿತಿ ನೀಡಿದ ಎಲ್ಐಸಿಯ ಜೋನಲ್ ಮ್ಯಾನೆಜರ್ (ಈಸ್ಟ್) ಅಜಯ್ ಕುಮಾರ್, "ನಾನು ರೈಲ್ವೆಯಿಂದ ಈ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಪಟ್ಟಿಗಾಗಿ ಕಾಯುತ್ತಿದ್ದೇನೆ. ಈ ಪಟ್ಟಿಯ ಆಧಾರದಲ್ಲಿ ನಾವು ಅವರ ಕುಟುಂಬ ಸದಸ್ಯರನ್ನು ಸಂಪರ್ಕ ಮಾಡಬಹುದಾಗಿದೆ. ಕ್ಲೈಮ್ ಅನ್ನು ಮಾಡಲು ಅವರಿಗೆ ಸಹಾಯ ಮಾಡಲಾಗುತ್ತದೆ," ಎಂದು ಮಾಹಿತಿ ನೀಡಿದ್ದಾರೆ.
"ಅಗತ್ಯ ಬಂದಲ್ಲಿ ಎಲ್ಐಸಿಯು ಇನ್ನಷ್ಟು ಸಹಾಯ ಕೇಂದ್ರಗಳನ್ನು ತೆರೆಯಲು ಸಿದ್ಧವಾಗಿದೆ. ಕ್ಲೈಮ್ ಪ್ರಕ್ರಿಯೆಯಲ್ಲಿ ಇನ್ನಷ್ಟು ಸರಳವಾದ ವಿಧಾನವನ್ನು ಜಾರಿ ಮಾಡಲಾಗುವುದು. ಈ ಮೂಲಕ ಒಡಿಶಾ ರೈಲು ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡುವ ಪ್ರಯತ್ನ ಮಾಡಲಾಗುತ್ತದೆ," ಎಂದು ತಿಳಿಸಿದ್ದಾರೆ.
ಐಆರ್ಡಿಎಐ ಸೂಚನೆ
ಈ ಹಿಂದೆ, ದುರಂತದ ಸಂತ್ರಸ್ತರಿಗೆ ಸಹಾಯ ಮಾಡಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಎಲ್ಲಾ ವಿಮಾ ಕಂಪನಿಗಳಿಗೆ ತಿಳಿಸಿದೆ. ಆಗನ್ ಲೈಫ್, ಡಿಜಿಟಲ್ ವಿಮಾದಾರ ಮತ್ತು ಲಿಬರ್ಟಿ ಜನರಲ್ ಇನ್ಶುರೆನ್ಸ್, ಐಆರ್ಸಿಟಿಸಿ ರೈಲು ಪ್ರಯಾಣಿಕರಿಗೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ನೀಡುತ್ತದೆ. ಇದು ರೈಲು ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಲು ಕೆಲವು ಸೌಲಭ್ಯಗಳನ್ನು ಸ್ಥಾಪಿಸಿರುವ ಇತರ ಎರಡು ವಿಮಾ ಕಂಪನಿಗಳಾಗಿವೆ.
ಈ ಹಿಂದೆ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದ ಬಳಿಕ ಭಾರತದ ವಿಮಾ ದೈತ್ಯ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಲು ಮುಂದಾಗಿದೆ. ಎಲ್ಐಸಿ ತ್ವರಿತ ಕ್ರಮದ ಅಗತ್ಯವನ್ನು ಗುರುತಿಸಿದೆ. ಎಲ್ಐಸಿಯು ಪೀಡಿತ ಕುಟುಂಬಗಳಿಗೆ ಕ್ಲೈಮ್ ಪ್ರಕ್ರಿಯೆಯನ್ನು ಸರಳಗೊಳಿಸಿದೆ.
ಶನಿವಾರ ಸಂಜೆಯ ವೇಳೆಗೆ ಈ ಬಗ್ಗೆ ಭಾರತೀಯ ಜೀವ ವಿಮಾ ನಿಗಮ ಹೇಳಿಕೆಯನ್ನು ನೀಡಿದೆ. "ಬಾಲಸೋರ್ ರೈಲು ಅಪಘಾತದ ಬಗ್ಗೆ ನಮ್ಮ ಸಂತಾಪವನ್ನು ನಾವು ವ್ಯಕ್ತಪಡಿಸುತ್ತೇವೆ. ಈ ರೈಲು ಅಪಘಾತದಿಂದ ಪ್ರಭಾವಕ್ಕೆ ಒಳಗಾದವರ ಪರವಾಗಿ ನಿಲ್ಲಲು ಎಲ್ಐಸಿಯು ಬದ್ಧವಾಗಿದೆ," ಎಂದು ಎಲ್ಐಸಿ ಅಧ್ಯಕ್ಷ ಸಿದ್ಧಾರ್ಥ್ ಮೊಹಾಂತಿ ಪುನರುಚ್ಚರಿಸಿದ್ದಾರೆ.
ಭಾರತೀಯ ಜೀವ ವಿಮಾ ನಿಗಮವು ಎಲ್ಐಸಿ ಪಾಲಿಸಿಗಳು ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ ಪಾಲಿಸಿದಾರರಿಗೆ ರಿಯಾಯಿತಿಗಳನ್ನು ಘೋಷಿಸಿದೆ. ಇನ್ನು ಗಮನಾರ್ಹವಾಗಿ ರಿಜಿಸ್ಟಾರ್ಡ್ ಡೆತ್ ಬೆನಿಫಿಟ್ ಅಗತ್ಯವಿಲ್ಲ. ರೈಲ್ವೇ, ಪೊಲೀಸ್ ಅಥವಾ ಯಾವುದೇ ರಾಜ್ಯ ಮತ್ತು ಕೇಂದ್ರ ಪ್ರಾಧಿಕಾರದಿಂದ ನೀಡಲಾದ ಪಟ್ಟಿಗಳನ್ನು ಸಾವಿನ ಪುರಾವೆಯನ್ನು ಸ್ವೀಕಾರ ಮಾಡಲು ಎಲ್ಐಸಿ ನಿರ್ಧರಿಸಿದೆ.
More From GoodReturns

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Gold Price Today: ಭಾರತದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ದಿಢೀರ್ 12,000 ರೂ. ಹೆಚ್ಚಳ



Click it and Unblock the Notifications