Liquor: ಬೆಂಗಳೂರಿನ ಕೆಲವು ಭಾಗಗಳಲ್ಲಿ ಮದ್ಯ ನಿಷೇಧ, ವಿವರ

ಬೆಂಗಳೂರು, ಸೆಪ್ಟೆಂಬರ್‌ 14: ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ವಾರಾಂತ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಹಾಗೂ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 14ರಿಂದ 16ರವರೆಗೆ ನಗರದ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಬಾರ್‌ಗಳು, ರೆಸ್ಟೋರೆಂಟ್‌ಗಳು, ವೈನ್ ಶಾಪ್‌ಗಳು, ಪಬ್‌ಗಳು ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL) ಔಟ್‌ಲೆಟ್‌ಗಳಲ್ಲಿ ಮದ್ಯ ಮಾರಾಟವನ್ನು ನಿರ್ಬಂಧಿಸುತ್ತದೆ. ಆದಾಗ್ಯೂ, ಇದು CL-4 (ಕ್ಲಬ್‌ಗಳು) ಮತ್ತು CL-6A (ಸ್ಟಾರ್ ಹೋಟೆಲ್‌ಗಳು) ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ವಿನಾಯಿತಿ ನೀಡುತ್ತದೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ಮದ್ಯ ನಿಷೇಧ, ವಿವರ

ಉತ್ತರ ಮತ್ತು ಪೂರ್ವ ಬೆಂಗಳೂರಿನ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ 6 ರಿಂದ ಭಾನುವಾರ ಬೆಳಿಗ್ಗೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಪ್ರದೇಶಗಳಲ್ಲಿ ಜೆಸಿ ನಗರ, ಆರ್‌ಟಿ ನಗರ, ಹೆಬ್ಬಾಳ, ಸಂಜಯ್ ನಗರ, ಡಿಜೆ ಹಳ್ಳಿ, ಭಾರತಿ ನಗರ ಮತ್ತು ಪುಲಕೇಶಿನಗರ ಸೇರಿವೆ.

ಇದಲ್ಲದೆ, ಪೂರ್ವ ಮತ್ತು ಈಶಾನ್ಯ ಬೆಂಗಳೂರಿನ ಎಂಟು ಪೊಲೀಸ್ ಠಾಣೆ ವ್ಯಾಪ್ತಿಯ ಅಂಗಡಿಗಳಲ್ಲಿ ಭಾನುವಾರ ಬೆಳಿಗ್ಗೆ 6 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಕಮರ್ಷಿಯಲ್ ಸ್ಟ್ರೀಟ್, ಭಾರತಿ ನಗರ, ಶಿವಾಜಿನಗರ, ಪುಲಕೇಶಿನಗರ, ಹಲಸೂರು, ಯಲಹಂಕ, ಯಲಹಂಕ ನ್ಯೂ ಟೌನ್ ಮತ್ತು ವಿದ್ಯಾರಣ್ಯಪುರದಲ್ಲಿ ಮದ್ಯ ನಿಷೇಧ ಆದೇಶ ಜಾರಿಯಲ್ಲಿರುತ್ತದೆ.

ಸಂಚಾರ ಮಾರ್ಗ ಬದಲಾವಣೆ:

ಬೆಂಗಳೂರು ನಗರ ಯಲಹಂಕ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಸೆ. 15 ರಂದು ಯಲಹಂಕ ಉಪನಗರ, ಸಿಂಗಪುರ, ಚಿಕ್ಕಬೆಟ್ಟಹಳ್ಳಿ, ದೊಡ್ಡಬೆಟ್ಟಹಳ್ಳಿ ವಿದ್ಯಾರಣ್ಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿರುವ ಅಂದಾಜು 100 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ಬೆಳಿಗ್ಗೆ 09-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೂ ನಡೆಯಲಿದ್ದು, ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯು ಎರಡು ಮಾರ್ಗದಲ್ಲಿ ಪ್ರತ್ಯೇಕವಾಗಿ ನಡೆಯಲಿದ್ದು, ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಮೇಲ್ಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ.

ಮೆರವಣಿಗೆ- 1 ಸಂಭ್ರಮ್ ಕಾಲೇಜ್ ಜಂಕ್ಷನ್ನಿಂದ ಪ್ರಾರಂಭವಾಗಿ ಅಲ್ಲಾಳಸಂದ್ರ ಕೆರೆಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಅಂತ್ಯಗೊಳ್ಳಲಿದೆ.

ಮೆರವಣಿಗೆ- 2 ಸಿಂಗಪುರ ಲೇಔಟ್ ನಿಂದ ಪ್ರಾರಂಭವಾಗಿ ದೊಡ್ಡಬೊಮ್ಮಸಂದ್ರ ಕೆರೆಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಅಂತ್ಯಗೊಳ್ಳಲಿದೆ.

ಆದ್ದರಿಂದ ಎರಡು ಮೆರವಣಿಗೆಯ ಸಂದರ್ಭದಲ್ಲಿ ಈ ಕೆಳಕಂಡ ಸಂಚಾರ ಮಾರ್ಪಡುಗಳನ್ನು ಮಾಡಲಾಗಿರುತ್ತದೆ.

ಸಂಚಾರ ನಿರ್ಬಂಧ:

ಬಿಇಎಲ್ ಸರ್ಕಲ್ ಗಂಗಮ್ಮ ಸರ್ಕಲ್ ಕಡೆಯಿಂದ ಯಲಹಂಕ ಮಾರ್ಗಕ್ಕೆ ಎಂಎಸ್ ಪಾಳ್ಯ ಮುಖಾಂತರ ಉನ್ನಿಕೃಷ್ಣನ್ ರಸ್ತೆ - ಜೆಲ್ಲಿ ಮಿಷನ್ ಜಿಕೆವಿಕೆ ಬ್ಯಾಕ್ ಗೇಟ್ - ತಿರುಮಲ ಡಾಬಾ - ಅಟ್ಟೂರು ಜಂಕ್ಷನ್ ಮದರ್ ಡೈರಿ ಸರ್ಕಲ್ ಮುಖಾಂತರ ಯಲಹಂಕ ಕಡೆಗೆ ಬರುವ ಬಿಎಂಟಿಸಿ ಬಸ್, ಭಾರಿ ವಾಹನಗಳನ್ನು ಮೆರವಣಿಗೆಯ ಸಂಚರಿಸುವ ಮಾರ್ಗದಲ್ಲಿ ಬೆಳಿಗ್ಗೆ 09-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ನಿರ್ಬಂದಿಸಲಾಗಿದೆ.

ನಿರ್ಭಂದಿಸಿದ ಸಂಚಾರಕೆ ಪರ್ಯಾಯ ಮಾರ್ಗಗಳು:

ಜಾಲಹಳ್ಳಿ, ಪೀಣ್ಯ ಕಡೆಯಿಂದ ಯಲಹಂಕ ಕಡೆಗೆ ಬರುವ ಬಿಎಂಟಿಸಿ ಬಸ್‌ಗಳು ಹಾಗೂ ಸಾರ್ವಜನಿಕರ ವಾಹನಗಳು ಗಂಗಮ್ಮ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ಬಿಇಎಲ್ ಸರ್ಕಲ್ ಜಂಕ್ಷನ್ ಮೂಲಕ ಸಂಚರಿಸಿ ಎಡ ತಿರುವು ಪಡೆದು ದೊಡ್ಡಬೊಮ್ಮಸಂದ್ರ ಆರ್ಚ್ ನಂಜಪ್ಪ ಸರ್ಕಲ್ ತಿಂಡ್ಲು ಗ್ರಾಮದ ರಸ್ತೆ ಜಿಕೆವಿಕೆ ಡಬಲ್ ರಸ್ತೆ ಕ್ರಾಸ್ ಎಡ ತಿರುವು - ಜಿಕೆವಿಕೆ ಬ್ಯಾಕ್ ಗೇಟ್ ಬಲ ತಿರುವು ಉನ್ನಿಕೃಷ್ಣನ್ ಮುಖ್ಯ ರಸ್ತೆ ಮಾರ್ಗವಾಗಿ ಹೋಗಬಹುದಾಗಿರುತ್ತದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+