ಮುಂಬೈ, ಜೂನ್ 6: ಕೊರೊನಾವೈರಸ್ ಲಾಕ್ಡೌನ್ ಪರಿಣಾಮವಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಎಲ್ಲ ಕ್ಷೇತ್ರಗಳಿಗೂ ಬಿಸಿ ತಟ್ಟುತ್ತಿದೆ. ಅದರಲ್ಲೂ ಈ ಪರಿಸ್ಥಿತಿಯಲ್ಲಿ ಅನೇಕ ಬ್ಯಾಂಕುಗಳು ಗ್ರಾಹಕರಿಗೆ ಸಾಲ ವಿತರಿಸಲು ಹಿಂದೇಟು ಹಾಕುತ್ತಿವೆ.
ಇದಕ್ಕೆ ಕಾರಣ, ಲಾಕ್ಡೌನ್ ಪರಿಣಾಮವಾಗಿ ಲಕ್ಷಾಂತರ ಜನ ಉದ್ಯೋಗ ನಷ್ಟ ಅನುಭವಿಸಿದ್ದಾರೆ. ಇನ್ನೂ ಕೆಲವರು ಸಂಬಳ ಕಡಿತದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಬೇಡಿಕೆ ಕುಸಿದಿದ್ದು, ಉತ್ಪಾದನಾ ಚಟುವಟಿಕೆ ಮೇಲೆ ಕರಿನೆರಳು ಬಿದ್ದಿದೆ. ಸಾಲ ಮರುಪಾವತಿ ವಿಷವಾಗಿ ಅನೇಕ ಬ್ಯಾಂಕುಗಳು ಇಂತಹ ಕಠಿಣ ಸಮಯದಲ್ಲಿ ಸಾಲ ನೀಡಲು ಮುಂದೆ ಬರುತ್ತಿಲ್ಲ.
ಇದಕ್ಕೆ ತಾಜಾ ಉದಾಹರಣೆಯೇ ಇಂದು ಗೃಹ ಸಾಲ ವಲಯದಲ್ಲಿ ಎದ್ದಿರುವ ಒಂದು ದೊಡ್ಡ ಸುದ್ದಿ. ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಗೃಹ ಸಾಲ ವಿತರಿಸಲು ಹಣಕಾಸು ಸಂಸ್ಥೆಗಳು ಹಿಂದೇಟು ಹಾಕುತ್ತಿವೆ.
ಸಾಲರಿ ಸ್ಲಿಪ್ಗಳನ್ನು ಕೇಳುತ್ತಿದ್ದಾರೆ
ಲಾಕ್ಡೌನ್ ಮೊದಲು ಮಂಜೂರಾದ ಗೃಹ ಸಾಲಗಳನ್ನು ಈಗ ವಿತರಿಸಲು ಕೆಲ ಹಣಕಾಸು ಸಂಸ್ಥೆಗಳು ಮೀನಾಮೇಷ ಎಣಿಸುತ್ತಿವೆ ಎಂದು ಸೋಮವಾರ ಕೆಲ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಸಾಲಗಾರರಿಂದ ಹೊಸದಾಗಿ ಸಾಲರಿ ಸ್ಲಿಪ್ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳುತ್ತಿವೆ ಎಂದು ತಿಳಿದು ಬಂದಿದೆ.
ಉದ್ಯೋಗ ನಷ್ಟ ಅನುಭವಿಸುತ್ತಿದ್ದಾರೆ
ಲಾಕ್ಡೌನ್ ಪರಿಣಾಮವಾಗಿ ಅನೇಕ ಕಡೆ ಲಕ್ಷಾಂತರ ಜನ ಉದ್ಯೋಗ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಬ್ಯಾಂಕುಗಳು ದೀರ್ಘಾವಧಿಯ ಸಾಲಗಳು ಸೇರಿದಂತೆ ಎಲ್ಲ ಬಗೆಯ ಸಾಲಗಳನ್ನು ನೀಡಲು ಹಿಂದೇಟು ಹಾಕುತ್ತಿವೆ. ಗೃಹ ಸಾಲ ಮಂಜೂರಾದರೂ ಸಾಲಗಾರರಿಂದ ಉದ್ಯೋಗ ಖಾತ್ರಿಯ ಬಗ್ಗೆ ಅವಶ್ಯಕ ದಾಖಲೆಗಳನ್ನು ಕೇಳುತ್ತಿದ್ದಾರೆ. ಮಂಜೂರಾದ ಸಾಲಗಳೆಲ್ಲವನ್ನೂ ಮರುಮೌಲ್ಯಮಾಪನ ಮಾಡುತ್ತಿವೆ.
ಗೃಹ ಸಾಲದ ಬೆಳವಣಿಗೆ 0.6% ರಷ್ಟು ಕುಸಿದಿದೆ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಮಾರ್ಚ್ 27 ರಿಂದ ಏಪ್ರಿಲ್ 24 ರವರೆಗೆ ಗೃಹ ಸಾಲದ ಬೆಳವಣಿಗೆ 0.6% ರಷ್ಟು ಕುಸಿದಿದೆ ಎಂದು ತೋರಿಸಿದೆ. ಸೆಂಟರ್ ಫಾರ್ ಮಾನಿಟರಿಂಗ್ ಆಫ್ ಇಂಡಿಯನ್ ಎಕಾನಮಿ (ಸಿಎಮ್ಐಇ) ಬಿಡುಗಡೆ ಮಾಡಿದ ಅಂಕಿಅಂಶವು, ಮೇ 3 ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ನಿರುದ್ಯೋಗ ದರವು 27.1% ಕ್ಕೆ ಏರಿದೆ. ಏಪ್ರಿಲ್ನಲ್ಲಿ ಸುಮಾರು 1.2 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಹೀಗಾಗಿ ಅನೇಕ ಬ್ಯಾಂಕುಗಳು ಎಲ್ಲ ಬಗೆಯ ಸಾಲ ನೀಡಲು ಹಿಂದೇಟು ಹಾಕುತ್ತಿವೆ.
ಮರುಪಾವತಿ ಸಾಮರ್ಥ್ಯವನ್ನು ಅರ್ಥ ಮಾಡಿಕೊಳ್ಳುತ್ತಿದ್ದೇವೆ
ಐಡಿಬಿಐ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಜೋರ್ಟಿ ಎಂ ಚಾಕೊ ಅವರು ಹೇಳುವ ಪ್ರಕಾರ, ಸಾಲಗಾರರ ಮರುಪಾವತಿ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಲು ಬ್ಯಾಂಕ್ಗಳು ಗೃಹ ಸಾಲ ವಿತರಣೆಯನ್ನು ಮೌಲ್ಯಮಾಪನ ಮಾಡುತ್ತಿವೆ. ಸಾಲಕ್ಕೆ ಸಂಬಂಧಿಸಿದ ಅಪಾಯಗಳು ಕೋವಿಡ್ -19 ಕಾರಣದಿಂದಾಗಿ ಸಾಕಷ್ಟು ಬದಲಾವಣೆಗೆ ಒಳಗಾಗಿದೆ ಮತ್ತು ಅಂತಹ ಅಪಾಯಗಳನ್ನು ನೋಡಿಕೊಳ್ಳಲು ನಾವು ಕಾನೂನುಗಳನ್ನು ಬಿಗಿಗೊಳಿಸಿದ್ದೇವೆ ಎನ್ನುತ್ತಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications