ಬೆಂಗಳೂರು, ಜೂನ್ 17: ಸ್ಟಾರ್ಟ್ ಅಪ್ ಯೋಜನೆಯಡಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಅಭಿವೃದ್ಧಿ ಪಡಿಸಿರುವ ನೂತನ ಕಾರ್ವಾನ್ ಗಳಿಗೆ (ಮಿನಿ ಬಸ್) ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಬುಧವಾರ ಚಾಲನೆ ನೀಡಿದರು.
ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಆದರೆ, ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ಈ ಸನ್ನಿವೇಶದಲ್ಲಿ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ರಾಜ್ಯದ ಜಿ.ಡಿ.ಪಿ.ಗೆ ಪ್ರವಾಸೋದ್ಯಮದ ಕೊಡುಗೆ ಶೇಕಡಾ 14 ರಷ್ಟಿದ್ದು, ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಯಡಿಯೂರಪ್ಪ ಹೇಳಿದರು. ಕೋವಿಡ್-19 ನಿಂದಾಗಿ ಪ್ರವಾಸೋದ್ಯಮ ವಲಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದೆ. ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸೂಚನೆ ನೀಡಿದ್ದೇನೆ ಎಂದರು.

ಕೊರೊನಾ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಕಾರವಾನ್ (ಮಿನಿ ಬಸ್) ಪ್ರವಾಸೋದ್ಯಮಕ್ಕೆ ಚಾಲನೆ ನೀಡಲಾಗಿದೆ. ಕಾರವಾನ್ ಪ್ರವಾಸೋದ್ಯಮ ಪರಿಕಲ್ಪನೆಯು ಸ್ವತಂತ್ರ ತಿರುಗಾಟದ ಅನುಭವಕ್ಕಾಗಿ ಅತ್ಯಂತ ಜನಪ್ರಿಯವಾಗಿದೆ. ಪ್ರವಾಸದ ಅವಧಿಯಲ್ಲಿ ಸೂಕ್ತ ರಕ್ಷಣೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಾರವಾನನಲ್ಲಿ ಪ್ರವಾಸ ಕೈಗೊಳ್ಳುವುದು ಸೂಕ್ತವಾಗಿದೆ. ಕಾರವಾನ್ಗಳ ನಿಲುಗಡೆಗೆ ಪ್ರಾಥಮಿಕ ಹಂತದಲ್ಲಿ ರಾಜ್ಯ ಸರ್ಕಾರದ ಸಂಸ್ಥೆಗಳಾದ ಅರಣ್ಯ ವಸತಿ ಮತ್ತು ವಿಹಾರಧಾಮ ಹಾಗೂ ಕೆ.ಎಸ್.ಟಿ.ಡಿ.ಸಿ ಘಟಕಗಳ ಆವರಣದಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು. ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್ಗಳನ್ನು ನಿಯೋಜಿಸಲಾಗುವುದು.
More From GoodReturns

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!



Click it and Unblock the Notifications