ಕೊರೊನಾವೈರಸ್ ಸೋಂಕು ತಡೆಗಟ್ಟಲು ವಿಧಿಸಿರುವ ಲಾಕ್ಡೌನ್ನಿಂದಾಗಿ ಈ ವರ್ಷ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟು ನಷ್ಟವಾಗಲಿದೆ. ಭಾರತದ ರುಪಾಯಿಗಳಲ್ಲಿ ಸುಮಾರು 85,419 ಕೋಟಿ ನಷ್ಟಗೊಳ್ಳಲಿದೆ. ಇದರ ಜೊತೆಗೆ 29 ಲಕ್ಷಕ್ಕೂ ಹೆಚ್ಚು ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ಹೇಳಲಾಗಿದೆ.
ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಸ್ಥೆ (IATA) ಶುಕ್ರವಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಪ್ರಯಾಣಿಕರ ವಿಮಾನಯಾನ ಸೇವೆಯ ಮೇಲೆ ಮೂರು ತಿಂಗಳ ನಿರ್ಬಂಧ ಹೇರಿದರೆ, ನಷ್ಟದ ಪ್ರಮಾಣ ಹೆಚ್ಚಾಗುತ್ತದೆ. 2019 ಕ್ಕೆ ಹೋಲಿಸಿದರೆ, ದೇಶದಲ್ಲಿ ಪ್ರಯಾಣಿಕರ ಸಂಖ್ಯೆ 8.98 ಕೋಟಿಗಳಷ್ಟು ಇಳಿಯುತ್ತದೆ. ಅಂದರೆ ಸುಮಾರು 47 ಪರ್ಸೆಂಟ್ ಕಡಿತವಾಗುತ್ತದೆ. ಇದ್ರಿಂದಾಗಿ ವಿಮಾನಯಾನ ಕಂಪನಿಗಳಿಗೆ 1,122.1 ಕೋಟಿ ಡಾಲರ್ ನಷ್ಟವಾಗಲಿದ್ದು, 29,32,900 ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದೆ.

ಎಐಟಿಎ ಈ ಹಿಂದೆ ಏಪ್ರಿಲ್ 14 ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಭಾರತದಲ್ಲಿ ಪ್ರಯಾಣಿಕರ ಸಂಖ್ಯೆ 36 ಪರ್ಸೆಂಟ್ರಷ್ಟು ಕುಸಿಯುತ್ತದೆ, ಇದರಿಂದಾಗಿ 884 ಮಿಲಿಯನ್ ಡಾಲರ್ ಆದಾಯ ನಷ್ಟ ಮತ್ತು 22.47 ಲಕ್ಷ ಜನರ ಉದ್ಯೋಗ ನಷ್ಟವಾಗಲಿದೆ ಎಂದು ಸೂಚಿಸಿತ್ತು.
ಇದರ ಜೊತೆಗೆ ವಿಮಾನಯಾನ ಕಂಪನಿಗಳು ತಮ್ಮ ಅಸ್ತಿತ್ವವನ್ನು ಉಳಿಸಲು ಹೆಣಗಾಡುತ್ತಿವೆ. ಸರ್ಕಾರ ಅವರಿಗೆ ಸಹಾಯ ಮಾಡದಿದ್ದರೆ ಅನೇಕ ವಿಮಾನಯಾನ ಸಂಸ್ಥೆಗಳು ಮುಚ್ಚಿಹೋಗಬಹುದು ಎಂದು ಎಚ್ಚರಿಸಿದೆ. ಆದಾಯ ನಷ್ಟದಲ್ಲಿ ಭಾರತವು ಜಪಾನ್ ಮತ್ತು ಆಸ್ಟ್ರೇಲಿಯಾ ನಂತರದಲ್ಲಿದ್ದು, ಭಾರೀ ಸಂಖ್ಯೆಯಲ್ಲಿ ಉದ್ಯೋಗ ಕಡಿತವಾಗಲಿದೆ ಎಂದಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications