ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆ ದೇಶದ ಪೂರ್ವ ಭಾಗದ ಮೇಲೆ ಮರುಭೂಮಿಯ ಮಿಡತೆಗಳ ದಾಳಿ ಆ ಪರಿಯಲ್ಲಿ ಆಗಿದೆ. ಕಳೆದ ಶುಕ್ರವಾರ ಅಲ್ಲಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ ನಂತರ ನಂತರ ಪ್ರಧಾನಿ ಇಮ್ರಾನ್ ಖಾನ್ ತುರ್ತು ಪರಿಸ್ಥಿತಿಯ ಘೋಷಣೆ ಮಾಡಿದ್ದಾರೆ.
ಎರಡು ದಶಕಗಳ ನಂತರ ಭೀಕರವಾದ ಮಿಡತೆಗಳ ದಾಳಿಯನ್ನು ಅನುಭವಿಸುತ್ತಿದ್ದೇವೆ. ಈ ಆತಂಕವನ್ನು ಎದುರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ಸಚಿವ್ ಫಿರ್ದೋಸ್ ಅಷಿಕ್ ಅವಾನ್ ಶನಿವಾರ ತಿಳಿಸಿದ್ದಾರೆ.
ಈ ಮರುಭೂಮಿಯ ಮಿಡತೆಗಳು ದೊಡ್ಡ ಸಸ್ಯಾಹಾರಿಗಳು. ನೋಡುವುದಕ್ಕೆ ಹಸಿರು ಮಿಡತೆಗಳ ರೀತಿ ಕಾಣುತ್ತವೆ. ಕಳೆದ ಜೂನ್ ತಿಂಗಳಲ್ಲಿ ಇರಾನ್ ನಿಂದ ಪಾಕಿಸ್ತಾನಕ್ಕೆ ಬಂದಿವೆ. ಈಗಾಗಲೇ ಹತ್ತಿ, ಗೋಧಿ, ಜೋಳ ಮತ್ತಿತರ ಬೆಳೆಗಳನ್ನು ನಾಶಪಡಿಸಿವೆ. ಪೂರಕವಾದ ವಾತಾವರಣ, ಸರ್ಕಾರದ ವಿಳಂಬ ಸ್ಪಂದನೆಯ ಕಾರಣದಿಂದಾಗಿ ಈ ಮಿಡತೆಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿ, ಬೆಳೆ ಇರುವ ಪ್ರದೇಶಗಳ ಮೇಲೆ ದಾಳಿ ನಡೆಸಿವೆ.

ಇವುಗಳ ದಾಳಿ ಅದೆಂಥ ದೊಡ್ಡ ಪರಿಯಲ್ಲಿ ವಿನಾಶಕಾರಿ ಅಂದರೆ, ಪಾಕಿಸ್ತಾನದಲ್ಲಿ ಈಗ ಆಹಾರ ಅಭದ್ರತೆ ಕಾಡುತ್ತಿದೆ. ರಾಷ್ಟ್ರೀಯ ಆಹಾರ ಸುರಕ್ಷತಾ ಸಚಿವ ಮಖ್ದೂಮ್ ಖುಸ್ರೋ ಭಕ್ತಿಯಾರ್ ಮಾತನಾಡಿ, ಮಿಡತೆಗಳು ಈಗ ಪಾಕಿಸ್ತಾನ- ಭಾರತದ ಗಡಿಯಲ್ಲಿ ಇದೆ. ಇದಕ್ಕೂ ಮುನ್ನ ಸಿಂಧ್ ಮತ್ತು ಬಲೂಚಿಸ್ತಾನ್ ನಲ್ಲಿ ಇದ್ದವು ಎಂದಿದ್ದಾರೆ.
ಮೂರು ಲಕ್ಷ ಎಕರೆ ಪ್ರದೇಶದಲ್ಲಿ ಈ ಮಿಡತೆಗಳ ವಿರುದ್ಧ ಕಾರ್ಯಾಚರಣೆ ಮಾಡಲಾಗಿದೆ. ಇಪ್ಪತ್ತು ಸಾವಿರ ಹೆಕ್ಟೇರ್ ನಲ್ಲಿ ಔಷಧ ಸಿಂಪಡಣೆ ಮಾಡಲಾಗಿದೆ. ಬೆಳೆ ಉಳಿಸಿಕೊಳ್ಳುವ ಸಲುವಾಗಿ ವಿವಿಧ ಸಂಘ- ಸಂಸ್ಥೆಗಳು, ಸಶಸ್ತ್ರ ಪಡೆ ಹೀಗೆ ವಿವಿಧ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ.
ಇಪ್ಪತ್ತೇಳು ವರ್ಷಗಳ ಹಿಂದೆ ಪಾಕಿಸ್ತಾನ ಇದೇ ರೀತಿಯಲ್ಲಿ ಮಿಡತೆಗಳ ದಾಳಿ ಎದುರಿಸಿತ್ತು. ಈ ಬಾರಿ ಭಾರತ ಮತ್ತು ಪೂರ್ವ ಆಫ್ರಿಕಾ ದೇಶಗಳ ಮೇಲೂ ಈ ಮಿಡತೆಗಳ ಪರಿಣಾಮ ಆಗುತ್ತಿದೆ.
ಭಾನುವಾರದಂದು ಸೋಮಾಲಿಯಾದಲ್ಲೂ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಸೋಮಾಲಿಯಾ ಜನರ ಮತ್ತು ಸಾಕು ಪ್ರಾಣಿಗಳ ಆಹಾರ ಮೂಲವೇ ಆತಂಕದಲ್ಲಿ ಇದೆ ಎಂದು ಅಲ್ಲಿನ ಕೃಷಿ ಸಚಿವಾಲಯ ಹೇಳಿಕೆ ನೀಡಿದೆ. ಈ ಮಿಡತೆಗಳು ಭಾರೀ ಪ್ರಮಾಣದಲ್ಲಿ ಕೃಷಿ ವ್ಯವಸ್ಥೆಗೆ ನಷ್ಟ ಉಂಟು ಮಾಡಿವೆ. ಹಸಿವೆ ತಂದೊಡ್ಡುತ್ತಿದೆ.
ಪಂಜಾಬ್ ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಪಾಕಿಸ್ತಾನ ಭಾಗದಲ್ಲಿ ಕಾಣಿಸಿಕೊಂಡಿರುವ ಮಿಡತೆಯ ಪರಿಣಾಮ ಪಂಜಾಬ್ ಮೇಲೆ ಹೇಗೆ ಆಗಬಹುದು ಎಂದು ವಿವರಿಸಿದ್ದರು.
ಇತ್ತ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವ ಪಾಕಿಸ್ತಾನ ಮಿಡತೆಗಳಿಂದ ಸೃಷ್ಟಿಯಾಗಿರುವ ಬಿಕ್ಕಟಿನಿಂದ ಆಚೆ ಬರುವುದಕ್ಕೆ ಏಳುನೂರಾ ಮೂವತ್ತು ಕೋಟಿ ಪಾಕಿಸ್ತಾನಿ ರುಪಾಯಿಗಳನ್ನು ಮೀಸಲಿಟ್ಟಿದೆ. ಈಗಾಗಲೇ ಸಿಂಧ್, ದಕ್ಷಿಣ ಪಂಜಾಬ್ ಮತ್ತು ಖೈಬರ್ ಪಂಖ್ತುಖ್ವಾದಲ್ಲಿ ಲಕ್ಷಾಂತರ ರುಪಾಯಿ ಬೆಳೆ ನಷ್ಟ ಆಗಿದೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications