ಆರ್ಬಿಐ ಹಣಕಾಸು ವಹಿವಾಟಿನಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಳವನ್ನು ಘೋಷಣೆ ಮಾಡಿದೆ. ಇದಾದ ಬಳಿಕ ಹಲವಾರು ದೇಶಗಳು ದ್ವಿಪಕ್ಷೀಯ ರೂಪಾಯಿ ವಿನಿಮಯದಲ್ಲಿ ಆಸಕ್ತಿಯನ್ನು ತೋರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮೈಂಡ್ಮೈನ್ ಶೃಂಗಸಭೆ 2022ರಲ್ಲಿ ಮಂಗಳವಾರ ಮಾತನಾಡಿದ ನಿರ್ಮಲಾ ಸೀತಾರಾಮನ್, "ರೂಪಾಯಿ ಈಗ ಹಳೆಯ ವಿಧಾನದಲ್ಲಿ ಇಲ್ಲ. ಈಗ ಹೊಸ ತಂತ್ರಜ್ಞಾನಕ್ಕೆ ರೂಪಾಯಿ ಒಗ್ಗಿಕೊಂಡಿದೆ. ಈ ಗಂಭೀರ ಪರಿಸ್ಥಿತಿಯಲ್ಲಿ ಆರ್ಬಿಐ ತಂತ್ರಜ್ಞಾನದ ಬಳಕೆಗೆ ಆದ್ಯತೆ ನೀಡುವುದು ಉತ್ತಮ ನಿರ್ಧಾರ," ಎಂದು ತಿಳಿಸಿದ್ದಾರೆ.
"ರೂಪಾಯಿಯ ವಿನಿಮಯದಲ್ಲಿ ಹಲವಾರು ದೇಶಗಳು ಆಸಕ್ತಿ ಹೊಂದಿದೆ," ಎಂದು ಪುನರುಚ್ಛರಿಸಿದ್ದಾರೆ. "ಕೊರೊನಾ ಸಾಂಕ್ರಾಮಿಕ ಬಳಿಕ ಭಾರತವು ಹಲವಾರು ಹೊಸ ಪರಿಹಾರಗಳನ್ನು ಹೊಂದಿದೆ. ನಾವು ಭಾರತೀಯ ಆರ್ಥಿಕತೆ ವಿಚಾರದಲ್ಲಿ ಹೆಚ್ಚು ಬಹಿರಂಗವಾಗಿ ಮಾತನಾಡುತ್ತೇವೆ. ರಾಷ್ಟ್ರಗಳ ನಡುವೆ ಡಿಜಿಟಲ್ ಮೂಲಕ ಸಂಬಂಧ ವೃದ್ಧಿ ಮಾಡಲು ನಾವು ಸಿದ್ಧವಿದ್ದೇವೆ," ಎಂದು ಕೂಡಾ ತಿಳಿಸಿದ್ದಾರೆ.
"ದೇಶದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದು ಹೊರ ಬರುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿ ಗುರಿಗಾಗಿ ಸೇವೆ ಮಾಡುವಂತೆ ಆಗಬೇಕು. ಅದಕ್ಕಾಗಿ ಇಂಡಸ್ಟ್ರೀಗೆ ಮೊದಲು ಏನು ಬೇಕಾಗಿದೆ ಎಂದು ಭಾರತ ತಿಳಿಯಬೇಕಾಗಿದೆ," ಎಂದು ಕೂಡಾ ಕೇಂದ್ರ ವಿತ್ತ ಸಚಿವೆ ತಿಳಿಸಿದ್ದಾರೆ.
ದೇಶದ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳು
"ಇಂಡಸ್ಟ್ರೀಯಲ್ಲಿ ಇಳಿದು ಕೆಲಸ ಮಾಡಲು, ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುವಂತಹ ವಿದ್ಯಾರ್ಥಿಗಳನ್ನು ಬೆಳೆಸುವಂತಹ ಅಗತ್ಯ ಪ್ರಸ್ತುತವಿದೆ. ಹಲವಾರು ಸಂಸ್ಥೆಗಳು ಈ ಕಾರ್ಯವನ್ನು ಮಾಡುತ್ತಿದೆ. ಯಾಕೆಂದರೆ ಸರ್ಕಾರವು ಸಂಸ್ಥೆಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದೆ. ಸಂಸ್ಥೆಗಳು ಸರ್ಕಾರಕ್ಕೆ ಮಾಹಿತಿಯನ್ನು ನೀಡುತ್ತಿದೆ," ಎಂದು ಕೂಡಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತದಲ್ಲಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳು ವಿಶ್ವದಾದ್ಯಂತ ಅದೆಷ್ಟೋ ಸಂಸ್ಥೆಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಪ್ರಸ್ತುತ ಹಲವು ವಿಚಾರಗಳಿಗೆ ಭಾರತ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಪ್ರಮುಖವಾಗಿ ಭವಿಷ್ಯದಲ್ಲಿ ಭಾರತಕ್ಕೆ ಅಗತ್ಯವಾದ ಇಂಡಸ್ಟ್ರೀಗಳ ನಿರ್ವಹಣೆ ವಿಚಾರದಲ್ಲಿ ಭಾರತ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಬೇರೆ ದೇಶಗಳ ಮೇಲೆ ಅವಲಂಬಿತವಾದ ಕಾರಣದಿಂದಾಗಿ ಸರಬರಾಜು ವ್ಯತ್ಯಯವಾದಾಗ ಭಾರತದ ಉದ್ಯಮಗಳಿಗೆ ತೊಂದರೆ ಉಂಟಾಗುತ್ತದೆ," ಎಂದು ಕೇಂದ್ರ ವಿತ್ತ ಸಚಿವೆ ವಿವರಿಸಿದ್ದಾರೆ.
ಹಣದುಬ್ಬರ ಪ್ರಸ್ತುತ ಪ್ರಮುಖ ಆದ್ಯತೆ ಏನಲ್ಲ ಎಂದಿದ್ದ ಸೀತಾರಾಮನ್
ಇತ್ತೀಚೆಗೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ ಕೆಲವು ವಾರಗಳಿಂದ ಹಣದುಬ್ಬರವು ಇಳಿಕೆಯಾಗುತ್ತಿದೆ. ಹಾಗಿರುವಾಗ ಪ್ರಸ್ತುತ ಭಾರತದಲ್ಲಿ ಹಣದುಬ್ಬರವು ಪ್ರಮುಖ ಆದ್ಯತೆ ಏನಲ್ಲ ಎಂದು ಹೇಳಿದ್ದಾರೆ. "ಪ್ರಸ್ತುತ ಉದ್ಯೋಗ ಸೃಷ್ಟಿ ಮಾಡುವುದು ಹಾಗೂ ಆದಾಯವನ್ನು ಸರಿಯಾದ ರೀತಿಯಲ್ಲಿ ಹಂಚಿಕೆ ಮಾಡುವುದು ಮಾತ್ರ ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕಳೆದ ಹಲವಾರು ವಾರಗಳಿಂದ ಹಣದುಬ್ಬರವು ಕಡಿಮೆಯಾಗಿದೆ. ಆದ್ದರಿಂದ ಹಣದುಬ್ಬರ ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆ ಏನಲ್ಲ," ಎಂದು ಸ್ಪಷ್ಟಪಡಿಸಿದ್ದರು.
ಆಗಸ್ಟ್ನಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಣದುಬ್ಬರ ಪ್ರಮುಖ ಆದ್ಯತೆ ಏನಲ್ಲ ಎಂದು ಹೇಳಿದ್ದರು. ಆದರೆ ಆಗಸ್ಟ್ನಲ್ಲಿ ಚಿಲ್ಲರೆ ಹಣದುಬ್ಬರವು ಏರಿಕೆಯಾಗಿದೆ. ಸತತ ಮೂರು ತಿಂಗಳುಗಳ ಕಾಲ ಇಳಿಕೆಯಾಗಿದ್ದ ರಿಟೇಲ್ ಹಣದುಬ್ಬರವು ಆಗಸ್ಟ್ ತಿಂಗಳಿನಲ್ಲಿ ಮತ್ತೆ ಹೆಚ್ಚಳವಾಗಿದೆ. ಆಹಾರ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿದೆ. ಈ ನಡುವೆ ಆಗಸ್ಟ್ನಲ್ಲಿ ರಿಟೇಲ್ ಹಣದುಬ್ಬರವು ಶೇಕಡ 7ಕ್ಕೆ ಏರಿಕೆಯಾಗಿದೆ. ಆಗಸ್ಟ್ನಲ್ಲಿ ಆಹಾರ ಹಣದುಬ್ಬರವು ಶೇಕಡ 7.62ಕ್ಕೆ ಹೆಚ್ಚಳವಾಗಿದೆ. ಜುಲೈನಲ್ಲಿ ಆಹಾರ ಹಣದುಬ್ಬರವು ಶೇಕಡ 6.69ರಷ್ಟಿತ್ತು. ಇನ್ನು ಕಳೆದ ವರ್ಷ ಅಂದರೆ 2021ರಲ್ಲಿ ಆಹಾರ ಹಣದುಬ್ಬವು ಶೇಕಡ 3.11 ರಷ್ಟಿತ್ತು. ಅದಕ್ಕೆ ಹೋಲಿಕೆ ಮಾಡಿದಾಗ ಈ ವರ್ಷ ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Renault Duster 2026: ಕಡಿಮೆ ಬೆಲೆಗೆ ಉತ್ತಮ ಕಾರು; 10.49 ಲಕ್ಷ ಬೆಲೆಯಲ್ಲಿ ಹೊಸ ರೆನಾಲ್ಟ್ ಡಸ್ಟರ್-ವಿಶೇಷತೆ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ



Click it and Unblock the Notifications