ಹಲವು ಬ್ಯಾಂಕ್ಗಳು ಉದ್ದೇಶಿಸಿರುವ ಎರಡು ದಿನಗಳ ಮುಷ್ಕರದಿಂದಾಗಿ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯವಾಗಬಹುದು ಎಂದು ಕೆನರಾ ಬ್ಯಾಂಕ್ ಹೇಳಿದೆ. ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ತೀರ್ಮಾನವನ್ನು ವಿರೋಧಿಸಿ ಮಾರ್ಚ್ 15-16ರಂದು ಹಲವಾರು ಬ್ಯಾಂಕ್ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ.
ಬ್ಯಾಂಕ್ ಒಕ್ಕೂಟಗಳು ಕರೆ ನೀಡಿರುವ ಮುಷ್ಕರದ ಕುರಿತಾಗಿ ಪ್ರಮುಖ ಆರು ವಿಷಯಗಳು ಈ ಕೆಳಗಿವೆ:

1) ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ಮಾರ್ಚ್ 15 ಮತ್ತು ಮಾರ್ಚ್ 16 ರಂದು ಬ್ಯಾಂಕಿಂಗ್ ಉದ್ಯಮದಲ್ಲಿ ಮುಷ್ಕರಕ್ಕೆ ಕರೆ ನೀಡಿದೆ ಎಂದು ಕೆನರಾ ಬ್ಯಾಂಕ್ ಸ್ಟಾಕ್ ಫೈಲಿಂಗ್ನಲ್ಲಿ ತಿಳಿಸಿದೆ.
2) ಮುಂಬರುವ ಮುಷ್ಕರ ದಿನಗಳಲ್ಲಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೆನರಾ ಬ್ಯಾಂಕ್ ಹೇಳಿದೆ.
3) ಆದಾಗ್ಯೂ, ಮುಷ್ಕರ ಕಾರ್ಯರೂಪಕ್ಕೆ ಬಂದಲ್ಲಿ ಶಾಖೆಗಳು/ ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು ಎಂದು ಬ್ಯಾಂಕ್ ಹೇಳಿದೆ.
4) ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್ಸಿಬಿಇ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್ಐ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ನೌಕರರ ಒಕ್ಕೂಟ (ಐಎನ್ಬಿಇಎಫ್), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (ಐಎನ್ಬಿಒಸಿ), ಬ್ಯಾಂಕ್ ಕಾರ್ಮಿಕರ ರಾಷ್ಟ್ರೀಯ ಸಂಸ್ಥೆ (ಎನ್ಒಬಿಡಬ್ಲ್ಯೂ), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (ನೊಬೊ), ಅಖಿಲ ಭಾರತ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಮುಷ್ಕರದಲ್ಲಿ ಭಾಗಿಯಾಗಲಿವೆ.
5) ಕೇಂದ್ರ ಬಜೆಟ್ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎರಡು ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು.
6) ಸರ್ಕಾರವು ಈಗಾಗಲೇ ಐಡಿಬಿಐ ಬ್ಯಾಂಕ್ನ ಬಹುಪಾಲು ಪಾಲನ್ನು ಎಲ್ಐಸಿಗೆ 2019 ರಲ್ಲಿ ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸಿದೆ. ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications