ಸರ್ಕಾರಿ ಸ್ವಾಮ್ಯದ BSNL ಸಂಸ್ಥೆ ತನ್ನ ಸಿಬ್ಬಂದಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್ ಎಸ್) ಪ್ಯಾಕೇಜ್ ಅನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿ ಪ್ರಕಟಿಸಿದ ಕೂಡಲೇ ಅದಕ್ಕೆ ಸಿಬ್ಬಂದಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
"ಬಿಎಸ್ಎನ್ಎಲ್ ಸಂಸ್ಥೆಯನ್ನು ದೇಶದ ಅಗ್ರಗಣ್ಯ ಕಂಪೆನಿಯನ್ನಾಗಿಸುವುದೇ ನನ್ನ ಪ್ರಮುಖ ಗುರಿಯಾಗಿದೆ" ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಙಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದರು. ಆದರೆ, ಅದಕ್ಕೆ ಮುನ್ನವೇ ಸಿಬ್ಬಂದಿಗಳು ವಿಆರ್ ಎಸ್ ಪ್ಯಾಕೇಜ್ ಅನ್ನು ಆಯ್ಕೆ ಮಾಡಿಕೊಂಡಿದ್ದರು.
ಬಹುಷಃ ಕೇಂದ್ರ ಸರಕಾರ ಈ ಮಟ್ಟಿನಲ್ಲಿ ಸಿಬ್ಬಂದಿಗಳು ಸ್ವಯಂ ನಿವೃತ್ತಿ ಯೋಜನೆಯನ್ನು ಆಯ್ಕೆಮಾಡಿಕೊಳ್ಳಬಹುದು ಎನ್ನುವ ನಿರೀಕ್ಷೆಯಲ್ಲಿ ಇರಲಿಲ್ಲವೋ ಏನೋ? ಈಗ, ಬಿಎಸ್ಎನ್ಎಲ್ ಸಂಸ್ಥೆಗೆ ಸಿಬ್ಬಂದಿಗಳ ಕೊರತೆ ಕಾಡಲಾರಂಭಿಸಿದೆ.
ಕರ್ನಾಟಕದ ಅಂದಾಜು ಸುಮಾರು ಏಳು ಸಾವಿರ ಸಿಬ್ಬಂದಿಗಳೂ ಸೇರಿ, ಸುಮಾರು ತೊಂಬತ್ತೆರಡು ಸಾವಿರ ಉದ್ಯೋಗಿಗಳಿಗೆ ಸಂಸ್ಥೆಯಲ್ಲಿ ಇಂದು ಕೊನೆಯ ದಿನ. ಕೇಂದ್ರ ಸರಕಾರ ವಿಆರ್ ಎಸ್ ತೆಗೆದುಕೊಳ್ಳುವರಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಪ್ರಕಟಿಸಿತ್ತು.
ಒಂದೂ ಮುಕ್ಕಾಲು ಲಕ್ಷ ಉದ್ಯೋಗಿಗಳನ್ನು ಹೊಂದಿರುವ ಬಿಎಸ್ಎನ್ಎಲ್
ಸುಮಾರು ಒಂದೂ ಮುಕ್ಕಾಲು ಲಕ್ಷ ಉದ್ಯೋಗಿಗಳನ್ನು ಹೊಂದಿರುವ ಬಿಎಸ್ಎನ್ಎಲ್ ಸಂಸ್ಥೆ ನಷ್ಟದ ದಾರಿಯಲ್ಲಿ ಸಾಗುತ್ತಿರುವುದು ಗೊತ್ತಿದ್ದ ವಿಚಾರ. ಭಾರತದ ಟೆಲಿಕಾಂ ಪ್ರಪಂಚದಲ್ಲಿ ಏಕಮೇಮ ಚಕ್ರಾಧಿಪತಿ ರೀತಿಯಲ್ಲಿದ್ದ ಈ ಸಂಸ್ಥೆ, ಬರಬರುತ್ತಾ ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡಲಾಗದೇ ಹಿನ್ನಡೆ ಎದುರಿಸಲಾರಂಭಿಸಿತು.
ಫೆಬ್ರವರಿ ಒಂದರಿಂದ ತೀವ್ರ ಸಿಬ್ಬಂದಿಯ ಕೊರತೆ
ಸಂಸ್ಥೆಯ ಒಟ್ಟು ಸಿಬ್ಬಂದಿಗಳ ಪೈಕಿ ತೊಂಬತ್ತು ಸಾವಿರ ಸಿಬ್ಬಂದಿಗಳು ಸ್ವಯಂ ನಿವೃತ್ತಿ ಯೋಜನೆಯಡಿಯಲ್ಲಿ ಜನವರಿ 31, 2020ರಿಂದ ನಿವೃತ್ತಿ ಹೊಂದಲಿದ್ದಾರೆ. ಹಾಗಾಗಿ, ಫೆಬ್ರವರಿ ಒಂದರಿಂದ ತೀವ್ರ ಸಿಬ್ಬಂದಿಯ ಕೊರತೆ ಕಾಡಲಿದೆ. ಇದರ ಎಫೆಕ್ಟ್ ನೇರವಾಗಿ ಗ್ರಾಹಕರಿಗೆ ಬೀಳುವುದು ಸಹಜ. ಇದು, ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಕೇಂದ್ರದ ಪ್ರಯತ್ನಕ್ಕೂ ಹಿನ್ನಡೆಯಾಗಬಹುದು.
ಸಚಿವ ರವಿಶಂಕರ್ ಪ್ರಸಾದ್
''ಬಿಎಸ್ಎನ್ಎಲ್ ಕೇವಲ ಮೊಬೈಲ್ ಅಥವಾ ಟೆಲಿಫೋನ್ ಸೇವೆ ನೀಡುವ ಕಂಪೆನಿಯಲ್ಲ. ವಿವಿಧ ಯೋಜನೆಗಳಲ್ಲಿ, ಕಾರ್ಯಾಚರಣೆಗಳಲ್ಲಿ ಸರಕಾರ ಅಳವಡಿಸಿಕೊಳ್ಳುವ ತಂತ್ರಗಾರಿಕೆಯ ಬೆನ್ನಲುಬು'' ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದರು. "ಬಿಎಸ್ಎನ್ಎಲ್ ದೇಶದ ಆಸ್ತಿಯಾಗಿದ್ದು, ತಮಿಳುನಾಡಿನಲ್ಲಿ ಜನರು ಪ್ರವಾಹದಿಂದ ಬಳಲುತ್ತಿದ್ದಾಗ ಅಂತಿಮವಾಗಿ ರಕ್ಷಣೆಗೆ ಬಂದಿದ್ದು ಬಿಎಸ್ಎನ್ಎಲ್" ಎಂದು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದರು.
ಒಂದು ಲಕ್ಷ BSNL ಸಿಬ್ಬಂದಿಗಳಿಗೆ ಸಂಸ್ಥೆಯಲ್ಲಿ ಇಂದು ವಿದಾಯದ ದಿನ
"ಒಟ್ಟು 92,700 ಉದ್ಯೋಗಿಗಳು ಸಿಬ್ಬಂದಿಗಳು ಸ್ವಯಂ ನಿವೃತ್ತಿ ಯೋಜನೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಇದರಲ್ಲಿ ಬಿಎಸ್ಎನ್ಎಲ್ ಸಂಸ್ಥೆಯ 78,300 ಮತ್ತು ಎಂಟಿಎನ್ಎಲ್ ಸಂಸ್ಥೆಯ 14,378 ಉದ್ಯೋಗಿಗಳು ಸೇರಿದ್ದಾರೆ. ಈಗಾಗಲೇ ಪೂರ್ಣಗೊಳಿಸಿರುವ ಸೇವೆಯ ವರ್ಷಗಳಿಗೆ ಒಂದು ವರ್ಷಕ್ಕೆ 35 ದಿನದಂತೆ ಹಾಗೂ ಬಾಕಿ ಇರುವ ಸೇವೆಗೆ ವರ್ಷಕ್ಕೆ 25 ದಿನದಂತೆ ವೇತನ ಲೆಕ್ಕ ಹಾಕಿ ಎಕ್ಸ್ ಗ್ರೇಷಿಯಾ ನೀಡಲಾಗುತ್ತದೆ" ಎಂದು ಸಂಸ್ಥೆಯ ಅಧ್ಯಕ್ಷ ಸುನಿಲ್ ಕುಮಾರ್, ಪಿಟಿಐಗೆ ತಿಳಿಸಿದ್ದಾರೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!



Click it and Unblock the Notifications