ಕಳೆದ 2025ರಲ್ಲಿ ಕರ್ನಾಟಕ ಸರ್ಕಾರ (Karnataka Govt) ಉದ್ಯೋಗಸ್ಥ ಮಹಿಳೆಯ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿತ್ತು. ಅದೇನೆಂದರೆ ಋತುಚಕ್ರದ ರಜೆ (Menstrual Leave). ಹೌದು, ಸರ್ಕಾರಿ, ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಿ, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಮಧ್ಯೆ ವಿದ್ಯಾರ್ಥಿನಿಯರು (Students) ಕೂಡಾ ರಜೆಗಾಗಿ ಒತ್ತಾಯಿಸುತ್ತಿದೆ. ಅಲ್ಲದೇ ಸರ್ಕಾರ ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಂತಿಮ ವರದಿಗಾಗಿ ಕಾಯಲಾಗುತ್ತಿದೆ.

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್!
ಕಾಲೇಜು ವಿದ್ಯಾರ್ಥಿನಿಯರಿಗೆ ಶೀಘ್ರದಲ್ಲೇ ಶುಭ ಸುದ್ದಿಯೊಂದು ಹೊರಬೀಳುವ ಸಾಧ್ಯತೆ ಇದೆ. ಉದ್ಯೋಗಸ್ಥ ಮಹಿಳೆಯರಿಗೆ ವರ್ಷದಲ್ಲಿ 12 ದಿನಗಳ ವೇತನ ಸಹಿತ ಮುಟ್ಟಿನ ರಜೆ ಘೋಷಿಸಿದ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರ ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿನಿಯರಿಗೂ ಈ ಸೌಲಭ್ಯ ವಿಸ್ತರಿಸಲು ಮುಂದಾಗಿದೆ. ಮುಖ್ಯಮಂತ್ರಿಗಳಿಂದ ಅನುಮೋದನೆಯೊಂದು ಸಿಕ್ಕರೆ, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಈಗಾಗಲೇ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಮೂಲಕ ಮಹತ್ವದ ಆದೇಶ ತೆಗೆದುಕೊಂಡಿದೆ. ಆದ್ರೆ ಇದೀಗ ಈ ನಿರ್ಧಾರವನ್ನು ವಿದ್ಯಾರ್ಥಿನಿಯರಿಗೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದು ಕಾಲೇಜು ಹೋಗುವ ವಿದ್ಯಾರ್ಥಿನಿಯರಿಗೆ ಬಹು ಅನುಕೂಲವಾಗಲಿದೆ ಎಂದು ಆಶಿಸಲಾಗಿದೆ. ಸದ್ಯ ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆಯಿತ್ತಿದೆ.
ಪ್ರಸ್ತುತ ನಿಯಮ ಏನು?
ಅಸ್ತಿತ್ವದಲ್ಲಿರುವ ನೀತಿಯ ಪ್ರಕಾರ, ಉದ್ಯೋಗಸ್ಥ ಮಹಿಳೆಯರು ವರ್ಷಕ್ಕೆ 12 ದಿನಗಳ ವೇತನ ಸಹಿತ ಮುಟ್ಟಿನ ರಜೆಗೆ ಅರ್ಹರಾಗಿದ್ದಾರೆ. ಅಂದರೆ ಪ್ರತಿ ತಿಂಗಳಿಗೆ ಒಂದು ದಿನ ಋತುಚಕ್ರದ ಸಮಯದಲ್ಲಿ ರಜೆ ಮಾಡಬಹುದು. ಅಲ್ಲದೇ ಈ ದಿನ ವೇತನ ಕೂಡಾ ನೀಡಲಾಗುತ್ತದೆ. ಈ ನಿಯಮವು ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳಿಗೂ ಅನ್ವಯವಾಗುತ್ತದೆ. ಆದರೆ, ಈ ಆದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಸೇರಿಸದ ಕಾರಣ, ವಿದ್ಯಾರ್ಥಿನಿಯರಿಗೂ ಇದೇ ಸೌಲಭ್ಯ ನೀಡಬೇಕೆಂಬ ಬೇಡಿಕೆ ವ್ಯಾಪಕವಾಗಿದೆ.
ಇದೀಗ ಈ ಮನವಿಗಳನ್ನು ಪರಿಶೀಲಿಸಿ, ಸ್ಪಂದಿಸಿರುವ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು, ಈ ವಿಷಯವನ್ನು ಗಂಭೀರವಾಗಿ ಪರಿಶೀಲಿಸಲಾಗಿದೆ. "ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ಸಿಗುತ್ತಿರುವಾಗ ಕಾಲೇಜು ವಿದ್ಯಾರ್ಥಿನಿಯರನ್ನು ಏಕೆ ಹೊರಗಿಡಬೇಕು ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಇದರ ಆದೇಶದ ಬಗ್ಗೆ ಯೋಚಿಸುತ್ತಿದೆ" ಎಂದು ಅವರು ತಿಳಿಸಿದ್ದಾರೆ.
ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ವಿಸ್ತರಿಸಲು ತಾವು ವೈಯಕ್ತಿಕವಾಗಿ ಸಿದ್ಧರಾಗಿರುವುದಾಗಿ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. "ಇನ್ನು ಮುಖ್ಯಮಂತ್ರಿಗಳು ಅನುಮೋದನೆ ನೀಡಿದರೆ, ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಲು ನಾವು ಸಿದ್ಧರಿದ್ದೇವೆ," ಎಂದು ಅವರು ಹೇಳಿದ್ದು, ಅಂತಿಮ ನಿರ್ಧಾರ ಬಹಳ ಬೇಗ ಹೊರಬೀಳಲಿದೆ ಎಂಬ ಸುಳಿವನ್ನೂ ಈ ಮೂಲಕ ನೀಡಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications