ದೇಶಿ ಸ್ಮಾರ್ಟ್ ಫೋನ್ ತಯಾರಕ ಸಂಸ್ಥೆ ಮೈಕ್ರೋಮ್ಯಾಕ್ಸ್ ಮತ್ತೊಮ್ಮೆ ಸ್ಮಾರ್ಟ್ ಫೋನ್ ಕ್ಷೇತ್ರಕ್ಕೆ ಎಂಟ್ರಿ ಕೊಡುತ್ತಿರುವುದಾಗಿ ಘೋಷಿಸಿದೆ. ಮೈಕ್ರೋಮ್ಯಾಕ್ಸ್ ಸಂಸ್ಥೆ ತನ್ನ ಅಧಿಕೃತ ಟ್ವೀಟ್ ಮಾಡಿ ಹೊಸ ಆವೃತ್ತಿ ಸ್ಮಾರ್ಟ್ ಫೋನ್ ನೊಂದಿಗೆ ಮರು ಪ್ರವೇಶ ಪಡೆಯಲು ಸಂಸ್ಥೆ ಬಯಸಿದೆ ಎಂದು ಹೇಳಿದೆ.
ಸಂಸ್ಥೆಯ ಸಹ ಸ್ಥಾಪಕ ರಾಹುಲ್ ಶರ್ಮ ಅವರು ಈ ಬಗ್ಗೆ ಸುಳಿವು ನೀಡಿದ್ದರೂ ಮೈಕ್ರೋಮ್ಯಾಕ್ಸ್ ಸಂಸ್ಥೆ ಇನ್ನೂ ವಿವರಗಳನ್ನು ಹಂಚಿಕೊಂಡಿಲ್ಲ. ಆಗಸ್ಟ್ 15ರಂದು coming back soon ಎಂದು ಟ್ವೀಟ್ ಮಾಡಿದ್ದ ಸಂಸ್ಥೆ ಮತ್ತೆ ಕಾಣಿಸಿಕೊಂಡಿರಲಿಲ್ಲ. ಕೊರೊನಾವೈರಸ್ ಸೋಂಕಿನಿಂದ ಸ್ಮಾರ್ಟ್ ಫೋನ್ ಮಾರಾಟ ಕ್ಷೇತ್ರಕ್ಕೂ ಹೊಡೆತ ಬಿದ್ದರೂ ಕೇಂದ್ರ ಸರ್ಕಾರದ ಸ್ಥಳೀಯ ಸಂಸ್ಥೆಗೆ ಆದ್ಯತೆ ನೀತಿ ಮೂಲಕ ಹಲವು ಕಂಪನಿಗಳು ಮರು ಪ್ರವೇಶದ ಹಾದಿಯಲ್ಲಿವೆ.

ಎಕಾನಾಮಿಕ್ಸ್ ಟೈಮ್ಸ್ ವರದಿ ಪ್ರಕಾರ, ಮೈಕ್ರೋಮ್ಯಾಕ್ಸ್ ಶರ್ಮ ಅವರು ಸಂಸ್ಥೆಯ ಭವಿಷ್ಯದ ಯೋಜನೆ ಬಗ್ಗೆ ಮಾತನಾಡಿ ಸುಮಾರು 500 ಕೋಟಿ ರು ಹೂಡಿಕೆ ಮಾಡಿ ಸ್ಥಳೀಯವಾಗಿ ಹ್ಯಾಂಡ್ ಸೆಟ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವು ಜೊತೆಗಿರಲಿದೆ ಎಂದಿದ್ದಾರೆ. ಚೀನಾದ ಬ್ರ್ಯಾಂಡ್ ಗಳ ಗುಣಮಟ್ಟಕ್ಕೆ ಸ್ಪರ್ಧೆಯೊಡ್ಡಬಲ್ಲ ವಿನ್ಯಾಸ, ಕಾರ್ಯಕ್ಷಮತೆಯನ್ನು ನಮ್ಮ ಉತ್ಪನ್ನಗಳು ಹೊಂದಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
We're #INForIndia with #INMobiles! What about you? #IndiaKeLiye #BigAnnouncement #MicromaxIsBack #AatmanirbharBharat pic.twitter.com/eridOF5MdQ
— Micromax India (@Micromax__India) October 16, 2020
ಕೇಂದ್ರ ಸರ್ಕಾರದ ನೀತಿ ಬದಲಾಗುತ್ತಿದ್ದಂತೆ ಮುಂದಿನ ಆರ್ಥಿಕ ವರ್ಷ ಅಂತ್ಯಕ್ಕೆ ಮೈಕ್ರೋಮ್ಯಾಕ್ಸ್ ಸೇರಿದಂತೆ ಸುಮಾರು 20ಕ್ಕೂ ಅಧಿಕ ಬೃಹತ್ ದೇಶಿ ಉತ್ಪಾದಿತ ಸಂಸ್ಥೆಗಳು ಮರು ಜೀವ ಪಡೆಯಲಿವೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications