ಬೆಂಗಳೂರು, ಜುಲೈ 13: ಬೆಂಗಳೂರು ಮೂಲದ ಮೈಂಡ್ಟ್ರೀ ತನ್ನ ಮೊದಲ ತ್ರೈಮಾಸಿಕ ವರದಿಯನ್ನು ಇಂದು ಪ್ರಕಟಿಸಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ343.40 ಕೋಟಿ ರು ಗೆ ಹೋಲಿಸಿದರೆ ತೆರಿಗೆಯ ನಂತರದ ಲಾಭದಲ್ಲಿ (PAT) 471.60 ಕೋಟಿ ರು ಗಳಷ್ಟು ವಾರ್ಷಿಕವಾಗಿ (YoY) 37.3 ರಷ್ಟು ಏರಿಕೆಯಾಗಿದೆ ಎಂದು ವರದಿ ಮಾಡಿದೆ.
ಎಕನಾಮಿಕ್ಸ್ ಟೈಮ್ಸ್ ವಿಶ್ಲೇಷಕರ ಸಮೀಕ್ಷೆಯು PAT ಅಂಕಿಅಂಶವನ್ನು 480 ಕೋಟಿ ರೂ ಎಂದು ನಿರೀಕ್ಷಿಸಿತ್ತು. ಆದರೆ, 343.40 ಕೋಟಿ ರು ಬಂದಿದ್ದು, ನಿರೀಕ್ಷೆಯಂತೆ ಲಾಭ ಬಂದಿಲ್ಲ.
ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ 2,291.70 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ತ್ರೈಮಾಸಿಕದಲ್ಲಿ ಆದಾಯವು 36.2 ರಷ್ಟು ಏರಿಕೆಯಾಗಿ 3,121.10 ಕೋಟಿ ರೂಪಾಯಿಗಳಿಗೆ ತಲುಪಿದೆ.

ತ್ರೈಮಾಸಿಕದಲ್ಲಿ ಎಬಿಟ್ ಮಾರ್ಜಿನ್ 19.2 ರಷ್ಟು ಬಂದಿದೆ, ಮಾರ್ಚ್ನಲ್ಲಿ ಶೇಕಡಾ 18.9 ಬಂದಿತ್ತು ಮತ್ತು ಕಳೆದ ವರ್ಷದ ಜೂನ್ ತ್ರೈಮಾಸಿಕದಲ್ಲಿ ಶೇಕಡಾ 17.7 ರಷ್ಟು ಬಂದಿತ್ತು.
ನಗದು ಮತ್ತು ಹೂಡಿಕೆಯು ಸಾರ್ವಕಾಲಿಕ ಗರಿಷ್ಠ $500 ಮಿಲಿಯನ್ನಲ್ಲಿದೆ ಎಂದು ಮೈಂಡ್ಟ್ರೀ ಬಿಎಸ್ಇಗೆ ತಿಳಿಸಿದೆ.
ಬೆಂಗಳೂರು ಮೂಲದ ಮೈಂಡ್ಟ್ರೀ ಹಾಗೂ L&T ಇನ್ಫೋಟೆಕ್ ವಿಲೀನವಾಗುತ್ತಿದೆ. ವಿಲೀನ ಪ್ರಕ್ರಿಯೆಗೆ ಉಭಯ ಸಂಸ್ಥೆಗಳ ನಿರ್ದೇಶಕರ ಮಂಡಳಿ ಅನುಮೋದನೆ ನೀಡಿವೆ. ಮೈಂಡ್ಟ್ರೀಯ ನಿರ್ದೇಶಕರ ಮಂಡಳಿ ಶುಕ್ರವಾರದಂದು ಸಭೆ ಸೇರಿ ಲಾರ್ಸೆನ್ ಮತ್ತು ಟೂಬ್ರೊ (L&T) ಜೊತೆಗೆ ವಿಲೀನಕ್ಕೆ ಸಮ್ಮತಿ ಸೂಚಿಸಿದ್ದಾರೆ. L&T ಇನ್ಫೋಟೆಕ್, ಮೈಂಡ್ಟ್ರೀ ವಿಲೀನವನ್ನು ಪ್ರಕಟಿಸಿದ ಬಳಿಕ ಸಂಯೋಜಿತ ಘಟಕವನ್ನು "LTIMindtree" ಎಂದು ಕರೆಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೈಂಡ್ ಟ್ರೀ ಸ್ಥಾಪನೆ, ಹೂಡಿಕೆ 1999ರಲ್ಲಿ ಐಟಿ ದಿಗ್ಗಜ ಅಶೋಕ್ ಸೂಟಾ ಅವರು, ಸಿದ್ಧಾರ್ಥ, ಸುಬ್ರತಾ ಬಾಗ್ಚಿ, ರೊಸ್ತೋವ್ ರಾವಣನ್ ಮತ್ತು ಕೆಕೆ ನಟರಾಜನ್ ಅವರೊಂದಿಗೆ ಸೇರಿ ಮೈಂಡ್ ಟ್ರೀ ಸ್ಥಾಪಿಸಿದಾಗ ಸಿದ್ಧಾರ್ಥ ಅವರು ಸಹ ಸಂಸ್ಥಾಪಕರಾದರು. ಅದರ ಸ್ಥಾಪನೆಯ ಆರಂಭದಲ್ಲಿ ಮೈಂಡ್ ಟ್ರೀಯ ಶೇ 6.6ರಷ್ಟು ಷೇರುಗಳನ್ನು ಖರೀದಿಸಲು ಸಿದ್ಧಾರ್ಥ ಅವರು 44 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರು. 2011ರಲ್ಲಿ ಅವರು 85 ಕೋಟಿ ರೂ (ಶೇ 5.57) ಮತ್ತು 40 ಕೋಟಿ ರೂ (ಶೇ 2.05) ಮೊತ್ತದ ಷೇರುಗಳನ್ನು ಪುನಃ ಖರೀದಿಸಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. 2012ರಲ್ಲಿ ಮೈಂಡ್ ಟ್ರೀಯಲ್ಲಿ ಹೆಚ್ಚುವರಿ ಶೇ 6.48ರಷ್ಟು ಷೇರು ಖರೀದಿಸಲು ಮತ್ತೆ 171 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರು. ಇದು ಹೆಚ್ಚೆಂದರೆ ವಾರ್ಷಿಕ ಶೇ 20.43ರಷ್ಟು ಆದಾಯ ಹಿಂದಕ್ಕೆ ನೀಡುತ್ತಿತ್ತು. ಕೊನೆಗೆ ಅವರು ಎಲ್ ಆಂಡ್ ಟಿಗೆ ಷೇರುಗಳನ್ನು ಮಾರಾಟ ಮಾಡಿದರು.
"ನಾವು ದೃಢವಾದ ಆದಾಯದ ಬೆಳವಣಿಗೆ, ಉತ್ತಮ ಮಾರ್ಜಿನ್ ಮತ್ತು ದಾಖಲೆಯ ಆದೇಶ ಪುಸ್ತಕದೊಂದಿಗೆ FY23 ಗೆ ಬಲವಾದ ಆರಂಭವನ್ನು ವರದಿ ಮಾಡಲು ಉತ್ಸುಕರಾಗಿದ್ದೇವೆ, ನಮ್ಮ ಮುಂದುವರಿದ ಉದ್ಯಮ-ಪ್ರಮುಖ ಬೆಳವಣಿಗೆಯ ಆವೇಗವನ್ನು ಪ್ರದರ್ಶಿಸುತ್ತದೆ" ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ, ದೇಬಾಶಿಸ್ ಚಟರ್ಜಿ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications