ಈಗಂತು ಹುದ್ದೆಗಳು ಪ್ರತಿಯೊಬ್ಬರಿಗೂ ಕೂಡ ಮುಖ್ಯವಾಗಿವೆ. ಅದರಲ್ಲೂ ಸರ್ಕಾರಿ ಕೆಲಸಗಳಿಗಾಗಿ ಜನರು ಸ್ಪರ್ಧೆಯಲ್ಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕರ್ನಾಟಕದ ಸರ್ಕಾರಿ ಹುದ್ದೆಗಳಲ್ಲಿ ಈ ವರ್ಷ 20,466 ಹುದ್ದೆಗಳು ಖಾಲಿ ಇವೆ ಎಂದು ಹೇಳಲಾಗ್ತಿದೆ. ಇನ್ನು ಅಂಕಿ ಅಂಶಗಳ ಪ್ರಕಾರ ನಾವು ಗಮನಿಸುವುದಾದ್ರೆ ಆಡಳಿತದ ಮೂರನೇ ಒಂದು ಭಾಗದಷ್ಟು ಹುದ್ದೆಗಳು ಖಾಲಿಯಿರುವುದರಿಂದ ನಾಗರಿಕರ ಕೆಲಸಗಳು ಕೂಡ ವಿಳಂಬವಾಗ್ತಿವೆ ಎನ್ನಲಾಗ್ತಿದೆ.
ಈಗಾಗಲೇ ಕರ್ನಾಟಕದಲ್ಲಿ 7.72 ಲಕ್ಷ ಸರ್ಕಾರಿ ಹುದ್ದೆಗಳು ಮಂಜೂರಾಗಿದ್ದು, ಈ ಹುದ್ದೆಗಳಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ ಇವೆ. ಅಲ್ಲದೆ ರಾಜ್ಯ ಕಾಂಗ್ರೆಸ್ ಕೂಡ ಈ ಕುರಿತಾಗಿ 2023ರಲ್ಲಿ ಪ್ರಣಾಳಿಕೆಯನ್ನ ಹೊರಡಿಸಿತ್ತು. ಇನ್ನು ಅದರಲ್ಲಿ ಒಂದು ವರ್ಷದೊಳಗೆ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆಯನ್ನ ಕೂಡ ನೀಡಿತ್ತು. ಇನ್ನೂ ಕೂಡ ಆ ಭರವಸೆ ಈಡೇರಿಲ್ಲ ಎಂಬ ದೂರು ಕೇಳಿ ಬರ್ತಿದೆ.

'ಕೇಸ್ ಟು ಕೇಸ್' ಆಧಾರದ ಮೇಲೆ ನೇಮಕಾತಿಗೆ ಅನುಮತಿ ನೀಡಲಾಗುತ್ತಿದೆ ಎಂದು ಹಣಕಾಸು ಇಲಾಖೆ ಸ್ಪಷ್ಟನೆಯನ್ನ ನೀಡಿದೆ. ಆದಾಗ್ಯೂ, ಗ್ಯಾರಂಟಿ ಯೋಜನೆಗಳಿಗೆ 63,000 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದ ಕಾರಣ, ಹಣಕಾಸಿನ ಒತ್ತಡಗಳು ಕೂಡ ಹೆಚ್ಚುತ್ತಿವೆ. ಹೀಗಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಡಿಯಲ್ಲಿ ಉದ್ಯೋಗ ನೇಮಕಾತಿಗಳು ಕೂಡ ವಿಳಂಬವಾಗಿವೆ.
ಹುದ್ದೆಗಳು ಖಾಲಿಯಿರುವುದರಿಂದ ಸಾರ್ವಜನಿಕ ಕಲೆಸಗಳು ಕೂಡ ವಿಳಂಬವಾಗುತ್ತಿವೆ ಇದರಿಂದಾಗಿ ಭ್ರಷ್ಟಾಚಾರಗಳು ಕೂಡ ಹೆಚ್ಚಾಗುತ್ತಿವೆ ಎಂದು ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಅವರು ಉಡುಪಿ ಜಿಲ್ಲೆಯಲ್ಲಿ ಹೇಳಿದ್ರು. ಇನ್ನು ಈ ಬಗ್ಗೆ ಮಾತನಾಡಿದ ಅವರು ಕೇವಲ ಇಬ್ಬರು ಭೂ ಪರಿವರ್ತನೆ ಅರ್ಜಿಗಳನ್ನ ನಿರ್ವಹಿಸುವುದರಿಂದ 2,000 ರೂ. ವೆಚ್ಚದ ಸೇವೆಗಳು ವಿಳಂಬವಾಗ್ತಿವೆ ಇದರಿಂದಾಗಿ 25,000 ರೂ. ಕೊಟ್ಟು ಕೆಲಸ ಮಾಡಿಸುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.
ಇನ್ನು ಈ ಕುರಿತು ಮೇಲುಕೋಟೆಯ ಸರ್ವೋದಯ ಕರ್ನಾಟಕ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕಳವಳ ವ್ಯಕ್ತಪಡಿಸಿದ್ರು, ಶೇ.65ರಷ್ಟು ಸಿಬ್ಬಂದಿ ಕೊರತೆಯಿಂದ ಕೃಷಿ ಇಲಾಖೆ ಅತ್ಯಂತ ಸಂಕಷ್ಟದಲ್ಲಿದೆ. ಇದರಿಂದಾಗಿ ಸರ್ಕಾರಿ ಉದ್ಯೋಗಿಗಳು ಹೆಚ್ಚು ಕೆಲಸ ಮಾಡುತ್ತಾರೆ, ಆಗಾಗ್ಗೆ 12-15 ಗಂಟೆಗಳ ಕಾಲ ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ. ಹುದ್ದೆಗಳು ಖಾಲಿ ಇರುವುದರಿಂದಾಗಿ ನಾಗರಿಕರು ಭ್ರಷ್ಟಾಚಾರದ ಮೂಲಕ ಕೆಲಸ ಮಾಡಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ ಎಂದರು.
ಹಾಗೆ ನೋಡುವುದಾದ್ರೆ, ಟೈಪಿಸ್ಟ್ಗಳು , ಸ್ಟೆನೋಗ್ರಾಫರ್ಗಳು, ಮತ್ತು ಡ್ರೈವರ್ಗಳು ಸೇರಿದಂತೆ 96,000 ಗ್ರೂಪ್ 'ಸಿ' ಮತ್ತು 'ಡಿ' ಉದ್ಯೋಗಗಳನ್ನು ಹೊರಗುತ್ತಿಗೆ ನೌಕಕರರಿಂದ ಮಾಡಿಸಲಾಗ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ರು.
ಅಲ್ಲದೆ ಈ ಪರಿಸ್ಥಿತಿಯ ಕುರಿತು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಟೀಕೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಅವರು ಸರ್ಕಾರವನ್ನು ಉದ್ಯೋಗ ಸಂಸ್ಥೆಯಾಗಿ ನೋಡಬಾರದು. ಕೆಲವು ಇಲಾಖೆಗಳಿಗೆ ನೇಮಕಾತಿ ಅಗತ್ಯವಿದ್ದರೂ ಕೂಡ ಇನ್ನು ಕೆಲವು ಇಲಾಖೆಗಳಿಗೆ ಇದರ ಅವಶ್ಯಕತೆ ಇರುವುದಿಲ್ಲ ಎಂದು ಆಡಳಿತಾತ್ಮಕವಾಗಿ ಹೆಚ್ಚುತ್ತಿರುವ ವೆಚ್ಚಗಳ ಬಗ್ಗೆ ಒತ್ತಿಹೇಳಿದರು.
ಅಷ್ಟಲ್ಲದೆ ಈ ನೇಮಕಾತಿ ಭರವಸೆಗಳ ಬಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಮೊದಲನೆಯ ಸರ್ಕಾರ ಕಾಂಗ್ರೆಸ್ ಏನಲ್ಲ . ನವೆಂಬರ್ 2022 ರಲ್ಲಿ ಬಸವರಾಜ ಬೊಮ್ಮಾಯಿ ಬಿಜೆಪಿ ಮುಖ್ಯಮಂತ್ರಿ ಆಗಿದ್ದಾಗ, ಒಂದು ವರ್ಷದೊಳಗೆ ಒಂದು ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಯೋಜನೆಯನ್ನು ಘೋಷಿಸಿದ್ದರು ಆದ್ರೆ ಅದು ಕೂಡ ಈಡೇರಲಿಲ್ಲ.
ಇದು ಈ ಸರ್ಕಾರದ ಸಮಸ್ಯೆಯಲ್ಲ ಪ್ರತೀ ಸರ್ಕಾರದ ಆಡಳಿತದ ವೇಳೆ ಕೂಡ ಇಂತಹ ಪರಿಸ್ಥಿತಿಗಳನ್ನ ಜನರು ಎದುರಿಸಿದ್ದಾರೆ. ಅಲ್ಲದೆ ಈಗಲು ಕೂಡ ಕಾಲ ಮೀರಿಲ್ಲ ಈ ಉದ್ಯೋಗಗಳನ್ನ ಭರ್ತಿ ಮಾಡುವ ಮೂಲಕ ನಿರುಧ್ಯೋಗವನ್ನ ಕೂಡ ಕಡಿಮೆ ಮಾಡಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications