ರಾಮ್ ದೇವ್ ಇಂಟರ್ ನ್ಯಾಷನಲ್ ಕಂಪೆನಿಯ ಮೂವರ ವಿರುದ್ಧ ಈಚೆಗೆ ಸಿಬಿಐನಿಂದ ದೂರು ದಾಖಲಾಗಿದೆ. ಆರು ಬ್ಯಾಂಕ್ ಗಳ ಒಕ್ಕೂಟದಿಂದ 411 ಕೋಟಿ ರುಪಾಯಿ ಸಾಲ ಮಾಡಿ, ಈಗಾಗಲೇ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಸ್ಟೇಟ್ ಬ್ಯಾಂಕ್ ಇಂಡಿಯಾವು ಸಿಬಿಐ ಬಳಿ ದೂರು ಒಯ್ಯುವ ಮುನ್ನವೇ ಆ ಮೂವರು ದೇಶ ಬಿಟ್ಟುಹೋಗಿದ್ದರು ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ರಾಮ್ ದೇವ್ ಇಂಟರ್ ನ್ಯಾಷನಲ್ ಕಂಪೆನಿಯು ಪಶ್ಚಿಮ ಏಷ್ಯಾ ಮತ್ತು ಯುರೋಪ್ ರಾಷ್ಟ್ರಗಳಿಗೆ ಬಾಸ್ಮತಿ ಅಕ್ಕಿಯನ್ನು ರಫ್ತು ಮಾಡುತ್ತದೆ. ಅದರ ನಿರ್ದೇಶಕರು ನರೇಶ್ ಕುಮಾರ್, ಸುರೇಶ್ ಕುಮಾರ್ ಮತ್ತು ಸಂಗೀತಾ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಪ್ರಕಾರ, ಕಂಪೆನಿಗೆ 173 ಕೋಟಿ ರುಪಾಯಿಗೂ ಹೆಚ್ಚು ನಷ್ಟವಾಗಿದೆ.
ಯಾವ್ಯಾವ ಬ್ಯಾಂಕ್ ಗಳಿಂದ ಸಾಲ?
ಕಂಪೆನಿಗೆ ಮೂರು ಮಿಲ್ಲಿಂಗ್ ಘಟಕಗಳಿವೆ. ಅದನ್ನು ಹೊರತುಪಡಿಸಿ, ಎಂಟು ಬೇರ್ಪಡಿಸುವ ಹಾಗೂ ಗ್ರೇಡಿಂಗ್ ಘಟಕಗಳು ಕರ್ನಲ್ ಜಿಲ್ಲೆಯಲ್ಲಿವೆ. ಇದರ ಜತೆಗೆ ವ್ಯಾಪಾರ- ವಹಿವಾಟಿಗಾಗಿ ಸೌದಿ ಅರೇಬಿಯಾ, ದುಬೈನಲ್ಲಿ ಕಚೇರಿಗಳಿವೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ದೂರಿನಲ್ಲಿ ತಿಳಿಸಿದೆ. ಅಂದ ಹಾಗೆ ಸಾಲ ನೀಡಿರುವ ಬ್ಯಾಂಕ್ ಗಳ ಒಕ್ಕೂಟದಲ್ಲಿ ಎಸ್ ಬಿಐ ಹೊರತುಪಡಿಸಿ ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕಾರ್ಪೊರೇಷನ್ ಬ್ಯಾಂಕ್ ಒಳಗೊಂಡಿವೆ ಎಂದು ತಿಳಿಸಲಾಗಿದೆ.
ಶೋಧ ಕಾರ್ಯಾಚರಣೆ ನಡೆದಿಲ್ಲ
ಸದ್ಯಕ್ಕೆ ಕೊರೊನಾ ಲಾಕ್ ಡೌನ್ ಇರುವುದರಿಂದ ಸಿಬಿಐನಿಂದ ಯಾವುದೇ ಶೋಧ ಕಾರ್ಯಾಚರಣೆ ನಡೆದಿಲ್ಲ. ಆರೋಪಿಗಳು ವಿಚಾರಣೆಗಾಗಿ ಬಾರದಿದ್ದಲ್ಲಿ ಸಮನ್ಸ್ ನೀಡಲಾಗುತ್ತದೆ ಹಾಗೂ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಬಿಐನಿಂದ ಮಾಹಿತಿ ನೀಡಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಪ್ರಕಾರ, ಜನವರಿ 27, 2016ಕ್ಕೆ ಈ ಖಾತೆಯು ನಾನ್ ಪರ್ಫಾರ್ಮಿಂಗ್ ಅಸೆಟ್ (NPA) ಆಗಿದೆ.
ಬ್ಯಾಲೆನ್ಸ್ ಶೀಟ್ ತಿರುಚಲಾಗಿದೆ
ಅದಾಗಿ ಏಳರಿಂದ ಒಂಬತ್ತು ತಿಂಗಳ ನಂತರ ಆಸ್ತಿಗಳನ್ನು ಜಂಟಿ ಪರಿಶೀಲನೆ ಮಾಡಲಾಗಿದೆ. ವಿಚಾರಣೆ ವೇಳೆ ಗೊತ್ತಾಗಿದ್ದು ಏನೆಂದರೆ, ಸಾಲ ಪಡೆದವರು ನಾಪತ್ತೆಯಾಗಿದ್ದಾರೆ ಮತ್ತು ದೇಶವನ್ನು ಬಿಟ್ಟಿದ್ದಾರೆ ಎಂಉ ಫೆಬ್ರವರಿ 25, 2020ರಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹಳೆ ಘಟಕದಿಂದ ಎಲ್ಲ ಯಂತ್ರಗಳನ್ನೂ ಸಾಲಗಾರರು ತೆಗೆದುಬಿಟ್ಟಿದ್ದಾರೆ ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ತಿರುಚಿ, ಅದರ ಆಧಾರದಲ್ಲಿ ಸಾಲ ಪಡೆದುಕೊಂಡಿದ್ದಾರೆ ಎಂದು ಕೂಡ ದೂರಿನಲ್ಲಿ ತಿಳಿಸಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications