ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (MIAL) ಹಗರಣಕ್ಕೆ ಸಂಬಂಧಿಸಿದಂತೆ ಜಿವಿಕೆ ಗ್ರೂಪ್ ಕಂಪೆನಿ ಅಧ್ಯಕ್ಷರಾದ ವೆಂಕಟ ಕೃಷ್ಣ ರೆಡ್ಡಿ ಗುಣಪತಿ ಮತ್ತು ಅವರ ಮಗ ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಜಿ.ವಿ.ಸಂಜಯ್ ರೆಡ್ಡಿ ಅವರ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ.
ಇತ್ತೀಚೆಗೆ ಸಿಬಿಐ ಕೂಡ ಜಿವಿಕೆ ಗ್ರುಪ್ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದೆ. ಈಗ ಆರ್ಥಿಕ ಅಪರಾಧದ ಆರೋಪದ ಮೇಲೆ ಇಡಿ ಪ್ರಕರಣ ದಾಖಲಿಸಿಕೊಂಡು ಜಿವಿಕೆ ಗ್ರುಪ್ ಬೆನ್ನು ಬಿದ್ದಿದೆ. ಜಿವಿಕೆ ಸಮೂಹದ ಪ್ರವರ್ತಕರು ತಮ್ಮ ಕಂಪನಿಗಳಿಗೆ ಹಣಕಾಸು ಒದಗಿಸಲು MIAL ನ ಮೀಸಲು ಹಣ 705 ಕೋಟಿ ರುಪಾಯಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.
ಮುಂಬೈ ವಿಮಾನ ನಿಲ್ದಾಣದ ನವೀಕರಣ ಮತ್ತು ನಿರ್ವಹಣೆಗಾಗಿ MIAL ಜಿವಿಕೆ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ ಜೊತೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ) ಜಂಟಿ ಸಹಭಾಗಿತ್ವ ರೂಪಿಸಿತ್ತು. ಏಪ್ರಿಲ್ 4, 2006 ರಂದು MIAL ಜೊತೆ ಮುಂಬೈ ವಿಮಾನ ನಿಲ್ದಾಣದ ಆಧುನೀಕರಣ, ನಿರ್ವಹಣೆ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಜೊತೆ ಒಪ್ಪಂದ ಮಾಡಿಕೊಂಡಿತ್ತು.

MIAL ನಲ್ಲಿ ಜಿವಿಕೆ ಸಮೂಹದ ಪ್ರವರ್ತಕರು ಎಎಐನ ಅಧಿಕಾರಿಗಳೊಂದಿಗೆ ವಿವಿಧ ಮಾರ್ಗಗಳನ್ನು ಬಳಸಿಕೊಂಡು ಹಣವನ್ನು ವಂಚಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. 395 ಕೋಟಿ ರುಪಾಯಿ ನಷ್ಟಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications