ಡಿಜಿಟಲ್ ವಹಿವಾಟು ಅಧಿಕವಾಗುತ್ತಿದ್ದಂತೆ ಸೈಬರ್ ವಂಚನೆಗಳು ಕೂಡಾ ಹೆಚ್ಚಳವಾಗುತ್ತಾ ಸಾಗುತ್ತಿದೆ. ಅದು ಕೂಡಾ ಮುಖ್ಯವಾಗಿ ಹಿರಿಯ ನಾಗರಿಕರನ್ನು ವಂಚಕರು ಟಾರ್ಗೆಟ್ ಮಾಡಿಕೊಂಡಿದ್ದಾರೆ. ದಕ್ಷಿಣ ಮುಂಬೈನ ವೃದ್ಧರೊಬ್ಬರು ಈ ವಂಚನೆಗೆ ಬಲಿಯಾಗಿದ್ದು, 4 ಕೋಟಿ ರೂಪಾಯಿ ಮೊತ್ತವನ್ನು ಕಳೆದಕೊಂಡಿದ್ದಾರೆ.
ದಕ್ಷಿಣ ಮುಂಬೈನ ವೃದ್ಧರೊಬ್ಬರು 11 ಕೋಟಿ ರೂಪಾಯಿಗಳ ಭವಿಷ್ಯ ನಿಧಿ ಮೊತ್ತವನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಸೈಬರ್ ವಂಚಕರ ನಕಲಿ ಸುದ್ದಿಗೆ ಬಲಿಯಾಗಿ, 4.35 ಕೋಟಿ ರೂಪಾಯಿಗಳ ವಂಚನೆಗೆ ಒಳಗಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. 71 ವರ್ಷದ ವ್ಯಕ್ತಿಯ ಪತ್ನಿ ಕಫ್ ಪರೇಡ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

"ತಮ್ಮ ದೂರಿನಲ್ಲಿ ಮಹಿಳೆಯು, ಈ ವರ್ಷದ ಮೇ ತಿಂಗಳಲ್ಲಿ ಮಹಿಳೆಯೊಬ್ಬರಿಂದ ತನಗೆ ಕರೆ ಬಂದಿತ್ತು. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಿಂದ (ಇಪಿಎಫ್ಒ) ಮಾತನಾಡುತ್ತಿರುವುದಾಗಿ ಕರೆ ಮಾಡಿದವರು ಹೇಳಿಕೊಂಡಿದ್ದಾರೆ. ನಂಬಿಕೆ ಗಳಿಸುವ ನಿಟ್ಟಿನಲ್ಲಿ ದೂರುದಾರ ಮಹಿಳೆಯ ಪತಿಯ ವಿವರವನ್ನು ಕೂಡಾ ಕರೆ ಮಾಡಿದವರು ನೀಡಿದ್ದಾರೆ," ಎಂದು ಪಿಟಿಐ ಅಧಿಕಾರಿಯನ್ನು ಉಲ್ಲೇಖಿಸಿ ವರದಿ ಮಾಡಿದೆ.
ಆಕೆಯ ಪತಿಯ ಕಂಪನಿಯು ತನ್ನ ಇಪಿಎಫ್ ಖಾತೆಯಲ್ಲಿ 20 ವರ್ಷಗಳ ಅವಧಿಗೆ 4 ಲಕ್ಷ ರೂಪಾಯಿಗಳನ್ನು ಡೆಪಾಸಿಟ್ ಮಾಡಿದೆ. ಈಗ ಅವರು 11 ಕೋಟಿ ರೂಪಾಯಿಗಳ ಮೆಚ್ಯೂರಿಟಿ ಮೊತ್ತವನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಕರೆ ಮಾಡಿದವರು ದೂರುದಾರರಿಗೆ ತಿಳಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.
ದೂರುದಾರರ ಪತಿ ಈ ಹಿಂದೆ ಪ್ರಮುಖ ಮಾಹಿತಿ ತಂತ್ರಜ್ಞಾನ (ಐಟಿ) ಸೇವೆಗಳು ಮತ್ತು ಸಲಹಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಿವೃತ್ತಿಯ ನಂತರ, ದಂಪತಿಗಳು ಮೆಚ್ಯೂರಿಟಿಯ ನಂತರ ಹೂಡಿಕೆ ಮಾಡಿದ ಹಣವನ್ನು ಹಿಂಪಡೆದಿದ್ದರು.
ನಂತರ ಕರೆ ಮಾಡಿದವರು ಟಿಡಿಎಸ್, ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿಗೆ ಅಗತ್ಯವಿರುವ ಹಣವನ್ನು ಡೆಪಾಸಿಟ್ ಮಾಡಲು ಮಹಿಳೆಗೆ ಹೇಳಿದರು. ಆಕೆಯನ್ನು ನಂಬಿದ ಮಹಿಳೆ ಕಾಲಕಾಲಕ್ಕೆ ಆಕೆಯ ಸೂಚನೆಯಂತೆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು.
"ಈ ಮೂಲಕ ಆರೋಪಿ ಮಹಿಳೆ ದಂಪತಿಗೆ 4.35 ಕೋಟಿ ರೂಪಾಯಿ ವಂಚಿಸಿದ್ದಾರೆ. ಮೇ ಮತ್ತು ಸೆಪ್ಟೆಂಬರ್ ನಡುವೆ ಬೇರೆ ಬೇರೆ ಕಾರಣವನ್ನು ನೀಡಿ ಮಹಿಳೆಯಿಂದ ವಂಚಕರು ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಆದರೆ ಕರೆ ಮಾಡಿದವರು ಹೆಚ್ಚಿನ ಹಣವನ್ನು ಕೇಳಿದಾಗ, ದಂಪತಿಗಳು ತಮ್ಮ ಬಳಿ ಯಾವುದೇ ಹೆಚ್ಚಿನ ಹಣವಿಲ್ಲ ಎಂದು ಹೇಳಿದರು," ಎಂದು ಅಧಿಕಾರಿ ತಿಳಿಸಿದ್ದಾರೆ.
ನಂತರ ಕರೆ ಮಾಡಿದ ಮಹಿಳೆಯು ಐಟಿ ಇಲಾಖೆಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ತಾವು ವಂಚನೆಗೆ ಒಳಗಾಗಿರುವುದನ್ನು ಮನಗಂಡ ದಂಪತಿ ಮಂಗಳವಾರ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 384 (ಸುಲಿಗೆ), 419 (ವ್ಯಕ್ತಿಯಿಂದ ವಂಚನೆ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆ) ಮತ್ತು 34 (ಹಲವಾರು ಕೃತ್ಯಗಳು), ಐ-ಟಿ ಕಾಯಿದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications