ಭಾರತದ ಅತಿದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಬ್ಯಾಂಕೇತರ ಹಣಕಾಸು(ಎನ್ಬಿಎಫ್ಸಿ) ಕಂಪನಿ ಮುತ್ತೂಟ್ ಫೈನಾನ್ಸ್ 2021ರ ಮಧ್ಯಂತರ ಲಾಭಾಂಶ (ಡಿವಿಡೆಂಡ್) ಘೋಷಣೆ ಮಾಡಿದೆ. ಪ್ರತಿ ಈಕ್ವಿಟಿ ಷೇರಿಗೆ 20 ರೂ. ಡಿವಿಡೆಂಡ್ ಅನ್ನು ನೀಡಲಿದ್ದು, ರೆಕಾರ್ಡ್ ದಿನಾಂಕ ಏಪ್ರಿಲ್ 21, 2021 ಆಗಿದೆ.
ಪ್ರತಿ ಈಕ್ವಿಟಿ ಷೇರಿಗೆ 20 ರೂ.ಗಳ ಮಧ್ಯಂತರ ಲಾಭಾಂಶವನ್ನು ಪಾವತಿಸಲು ಮುತ್ತೂಟ್ ಫೈನಾನ್ಸ್ ಆಡಳಿತ ಮಂಡಳಿ ಅನುಮೋದನೆ ನೀಡಿದ ನಂತರ, ಮುತೂಟ್ ಫೈನಾನ್ಸ್ ಇಂದು ಶೇಕಡಾ 1.19ರಷ್ಟು ಏರಿಕೆ ಕಂಡು 1,173.40 ರೂ. ತಲುಪಿದೆ. ಪ್ರಸ್ತುತ ಮಾರುಕಟ್ಟೆ ಬೆಲೆಯಲ್ಲಿ, ಇದು 1.70% ನಷ್ಟು ಲಾಭಾಂಶವನ್ನು ನೀಡುತ್ತದೆ.

ಘೋಷಣೆಯ ದಿನಾಂಕದಿಂದ 30 ದಿನಗಳಲ್ಲಿ ಮಧ್ಯಂತರ ಲಾಭಾಂಶವನ್ನು ಷೇರುದಾರರಿಗೆ ಪಾವತಿಸಲಾಗುವುದು ಎಂದು ಕಂಪನಿಯು ನಿನ್ನೆ (ಏ. 12) ರಂದು ಬಿಎಸ್ಇ ಫೈಲಿಂಗ್ನಲ್ಲಿ ತಿಳಿಸಿದೆ.
ಡಿಸೆಂಬರ್ 2020 ಕ್ಕೆ ಕೊನೆಗೊಂಡ ಮೂರನೇ ತ್ರೈಮಾಸಿಕದಲ್ಲಿ, ವರ್ಷಾಂತ್ಯದ ಆಧಾರದ ಮೇಲೆ ಒಟ್ಟು ಆದಾಯವು 20% ನಷ್ಟು ಹೆಚ್ಚಳವಾಗಿ 2,777 ಕೋಟಿಗೆ ತಲುಪಿದೆ. ಮುತ್ತೂಟ್ ಫೈನಾನ್ಸ್ ಭಾರತದ ಅತಿದೊಡ್ಡ ಚಿನ್ನದ ಹಣಕಾಸು ಕಂಪನಿಯಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications