ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ವಿಮಾನ ನಿಲ್ದಾಣದ (Mysuru Airport) ಅಭಿವೃದ್ಧಿಗೆ ಕೊನೆಗೂ ಸದಾವಕಾಶ ಬಂದೊದಗಿದೆ. ಹಲವು ವರ್ಷಗಳಿಂದ ನಿಂತಲ್ಲೇ ನಿಂತಿದ್ದ ವಿಸ್ತರಣೆ ಮತ್ತು ಮೇಲ್ದರ್ಜೆಗೇರಿಸುವ ಯೋಜನೆ ಇದೀಗ ಮತ್ತೆ ಆರಂಭಕ್ಕೆ ಮುನ್ನುಡಿ ಇಟ್ಟಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂಸ್ವಾಧೀನ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದ್ದು, ಈ ಹಿನ್ನೆಲೆ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಮತ್ತು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗೂ ವೇಗ ಪಡೆದುಕೊಳ್ಳಲಿದೆ.

ಇದೀಗ ವಿಸ್ತರಣೆ ಕಾಮಗಾರಿ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ ಇದೆ. ಇದರಿಂದ ಮೈಸೂರು ಸುತ್ತಮುತ್ತಲಿನ ಪ್ರದೇಶಗಳ ಸಂಪರ್ಕ, ಪ್ರವಾಸೋದ್ಯಮ ಮತ್ತು ಆರ್ಥಿಕ ಸ್ಥಿತಿಗೆ ಮತ್ತಷ್ಟು ಬೆಂಬಲ ಸಿಗುವ ಸಾಧ್ಯತೆ ಇದೆ.
ನೋಡಲ್ ಏಜೆನ್ಸಿಯಾದ ಕೆಎಸ್ಐಐಡಿಸಿ (ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ), ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣವಾಗಿದೆ ಎಂದು ಖಚಿತಪಡಿಸಿಕೊಂಡ ನಂತರ, ಇದೀಗ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ಹಸ್ತಾಂತರಿಸುವ ನಿರೀಕ್ಷೆಯಿದೆ.
ಮೈಸೂರು ಅಲ್ಲ, ಗ್ರೇಟರ್ ಮೈಸೂರು!
ಮೈಸೂರು ಇನ್ಮೇಲೆ ಗ್ರೇಟರ್ ಮೈಸೂರು ಆಗಿ ವಿಸ್ತರಿಸಲ್ಪಟ್ಟಿದ್ದು ಮತ್ತು ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಯೊಂದಿಗೆ ಮೈಸೂರು ಹೆಚ್ಚಿನ ಹೂಡಿಕೆದಾರರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಸಾಧ್ಯತೆಯಿದೆ. ಇನ್ನು ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ 240 ಎಕರೆ ಭೂಮಿಯ ಅಗತ್ಯವಿದ್ದು, ಕೆಐಎಡಿಬಿ 206.12 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಇನ್ನುಳಿದದ್ದು ಸರ್ಕಾರಿ ಭೂಮಿಯಾಗಿದೆ.
ಕೆಐಎಡಿಬಿಯ ವಿಶೇಷ ಭೂಸ್ವಾಧೀನ ಅಧಿಕಾರಿ (SLO) ಎನ್.ಸಿ ವೆಂಕಟರಾಜು ಅವರು ಈ ಕುರಿತು ಮಾತನಾಡಿದ್ದು, 206.12 ಎಕರೆ ಭೂಮಿಯಲ್ಲಿ 181.12 ಎಕರೆ ಭೂಮಿಯನ್ನು ಭೂಮಾಲೀಕರ ಒಪ್ಪಿಗೆಯೊಂದಿಗೆ ಪಡೆದುಕೊಳ್ಳಲಾಗಿದೆ. ಇನ್ನುಳಿದ 18 ಎಕರೆ ಭೂಮಿಗೆ, ಮರಗಳು ಮತ್ತು ರಚನೆಗಳಿಗೆ ಪರಿಹಾರದ ನೀಡುವ ಉದ್ದೇಶದಿಂದ ಕೆಐಎಡಿಬಿಯ ಪ್ರಧಾನ ಕಚೇರಿಗೆ ಪತ್ರ ಬರೆಯಲಾಗಿದೆ. ಎಲ್ಲಾ ಪರಿಹಾರ ಪ್ರಕ್ರಿಯೆ ಮುಗಿದ ನಂತರ, ಭೂಮಿಯನ್ನು ಎಎಐಗೆ ಹಸ್ತಾಂತರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಮೈಸೂರು ಅಭಿವೃದ್ಧಿಗೆ ವಿಶೇಷ ನಿರ್ಧಾರ!
ರನ್ವೇ ವಿಸ್ತರಣೆ: ಪ್ರಸ್ತುತ 1,740 ಮೀಟರ್ ಉದ್ದದ ರನ್ವೇಯನ್ನು ಮೊದಲ ಹಂತದಲ್ಲಿ 2,300 ರಿಂದ 2,750 ಮೀಟರ್ಗೆ ವಿಸ್ತರಿಸಲು ಪ್ಲಾನ್ ಮಾಡಲಾಗಿದೆ ಎಂದು ಹೇಳಲಾಗಿದೆ. ಇನ್ನು ಈ ವಿಸ್ತರಣೆಯಿಂದ ATR-72 ರಂತಹ ಚಿಕ್ಕ ವಿಮಾನಗಳ ಜೊತೆಗೆ ಬೋಯಿಂಗ್ 737 ಮತ್ತು ಏರ್ಬಸ್ A320 ಯಂತಹ ದೊಡ್ಡ ದೊಡ್ಡ ಜೆಟ್ ವಿಮಾನಗಳು ಸಹ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಕ್ಟೋಬರ್ 6, 2025 ರಂದು ವಿಮಾನ ನಿಲ್ದಾಣದ ಮಾಸ್ಟರ್ ಪ್ಲಾನ್ ಅನ್ನು ದೃಢಪಡಿಸಿದೆ. ಭೂಮಿಯನ್ನು ಹಸ್ತಾಂತಿಸಿದ ಬೆನ್ನಲ್ಲೇ, ನಂತರ ಡಿಪಿಆರ್ ನಿರ್ಧಾರವಾಗಲಿದೆ. ಆ ಬಳಿಕ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗಿದೆ. ಅಂತೂ ಇದೀಗ ಹಲವು ದಿನಗಳ ಕನಸು ಇದೀಗ ಕೊನೆಗೂ ನೆರವೇರುವ ಕಾಲ ಬಂದಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru Airport: ಇರಾನ್-ಇಸ್ರೇಲ್ ಯುದ್ಧ ಪರಿಣಾಮ ಬೆಂಗಳೂರು ಏರ್ಪೋರ್ಟ್ನಲ್ಲಿ 37 ವಿಮಾನಗಳು ರದ್ದು!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!



Click it and Unblock the Notifications