ಬೆಂಗಳೂರು, ಏಪ್ರಿಲ್ 8: ನಮ್ಮ ಮೆಟ್ರೋ 3ನೇ ಹಂತದ ಯೋಜನೆಯು ಕೇಂದ್ರದಿಂದ ಅನುಮತಿಗೆ ಬಾಕಿಯಿರುವಾಗಲೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
106 ಎಕರೆಯಲ್ಲಿ ಹರಡಿರುವ ಒಟ್ಟು 713 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಈಗ ಜಾಗ ಗುರುತಿಸಲಾಗಿದೆ. ಆದರೆ ಗುರುತಿಸಿರುವ ಭೂಮಿ ನೀಡಲು ಹಲವಾರು ಮಂದಿ ಸಿದ್ಧರಿಲ್ಲ.

ಕರ್ನಾಟಕ ಕ್ಯಾಬಿನೆಟ್ ಈ ಯೋಜನೆಗೆ ಅನುಮತಿ ನೀಡಿದೆ. ಆದರೆ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿದೆ. ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಅನುಮತಿ ನಿರೀಕ್ಷಿಸಲಾಗಿದೆ. ನಾವು ಈಗ ಮೊದಲ ಕಾರಿಡಾರ್ನಲ್ಲಿ ಮಾತ್ರ ಆಸ್ತಿಗಳನ್ನು ಗುರುತಿಸಲು ಪ್ರಾರಂಭಿಸಿದ್ದೇವೆ, ಅವುಗಳ ಸ್ವಾಧೀನವನ್ನು ಪ್ರಾರಂಭಿಸಲು ಲೈನ್ಗಾಗಿ ಅದನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ನಮಗೆ ಇಲ್ಲಿ 106 ಎಕರೆ ಬೇಕು, ಅದರಲ್ಲಿ 75 ಎಕರೆ ಡಿಪೋಗೆ ಮಾತ್ರ ಬೇಕಾಗುತ್ತದೆ. ಅದು ಎರಡೂ ಕಾರಿಡಾರ್ಗಳಿಗೆ ಸಾಮಾನ್ಯವಾಗಿರುತ್ತದೆ ಎಂದು ಬಿಎಂಆರ್ಸಿಎಲ್ನ ಭೂ ಸ್ವಾಧೀನ ಕೋಶದ ಪ್ರಧಾನ ವ್ಯವಸ್ಥಾಪಕ ಎಂ ಎಸ್ ಚನ್ನಪ್ಪ ಗೌಡರ್ ಹೇಳಿದ್ದಾರೆ.
ಬಿಎಂಆರ್ಸಿಎಲ್ ನೀಡುವ ಅತ್ಯುತ್ತಮ ಪರಿಹಾರ ಮಾರುಕಟ್ಟೆ ಮೌಲ್ಯದ 200% ರಷ್ಟು ಇರುತ್ತದೆ, ಸಾರ್ವಜನಿಕರು ತಮ್ಮ ಆಸ್ತಿಯನ್ನು ಮೆಟ್ರೋ ಯೋಜನೆಗಳಿಗೆ ನೀಡಲು ಉತ್ಸಾಹದಿಂದ ಮುಂದೆ ಬರುತ್ತಾರೆ. ಆದರೆ, ಪ್ರಸ್ತುತ ಮೂರು ಕುಟುಂಬಗಳು ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.
ಮೂರು ಆಸ್ತಿಗಳ ವಿಷಯದಲ್ಲಿ ಮೆಟ್ರೊ ಯೋಜನೆಗಾಗಿ ಪ್ರತಿಯೊಂದು ಆಸ್ತಿಯ ಒಂದು ಭಾಗವನ್ನು ಮಾತ್ರ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಭೂ ಸ್ವಾಧೀನವು ತಮ್ಮ ಭೂಮಿಯ ಉಳಿದ ಭಾಗದ ಮೌಲ್ಯವನ್ನು ಕಡಿಮೆ ಮಾಡುತ್ತದೆ ಎಂದು ಅವರು ಭಾವಿಸಿದ್ದಾರೆ. ನಾವು ಸಂಪೂರ್ಣ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಬೇಕೆಂದು ಅಥವಾ ಸ್ವಾಧೀನದಿಂದ ಸಂಪೂರ್ಣವಾಗಿ ಕೈಬಿಡಬೇಕೆಂದು ಅವರು ಹೇಳುತ್ತಾರೆ ವಿನಾಯಕ ಲೇಔಟ್ ಮೆಟ್ರೊ ನಿಲ್ದಾಣಕ್ಕೆ ಎರಡು ಪಾಪರ್ಟಿಗಳು ಬೇಕಾಗಿವೆ ಎಂದು ಚನ್ನಪ್ಪ ಗೌಡರ್ ಹೇಳಿದ್ದಾರೆ.
ವಿವಾದ ಉಂಟಾಗಿರುವ ಆಸ್ತಿಗಳು ಒಟ್ಟು 165.65 ಚ.ಮೀ. ಅವು ಮೂರು ನಿರ್ದಿಷ್ಟ ಪ್ಲಾಟ್ಗಳು, 78.18 ಚ.ಮೀ, 40.14 ಚದರ ಮತ್ತು 47.33 ಚ.ಮೀ. ನಷ್ಟಿದೆ. ಈ ಪರಿಸ್ಥಿತಿಯಲ್ಲಿ ಮೆಟ್ರೋ ಏನು ಮಾಡಲು ಯೋಜಿಸುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಬಿಎಂಆರ್ಸಿಎಲ್ ಪ್ರಸ್ತುತ ಪರಿಸ್ಥಿತಿಯನ್ನು ಏನು ಮಾಡಬಹುದೆಂದು ನೋಡಲು ಚಿಂತಿಸುತ್ತಿದೆ ಎಂದು ಮತ್ತೊಬ್ಬ ಬಿಎಂಆರ್ಸಿಎಲ್ ಅಧಿಕಾರಿ ಹೇಳಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) 2028 ರ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಲು ಗಡುವನ್ನು ನಿಗದಿಪಡಿಸಿದೆ. ಯೋಜನೆಯು ಸುಮಾರು 15,611 ಕೋಟಿ ರೂ. ಮೊತ್ತದ್ದಾಗಿದೆ. ಈ ಮಾರ್ಗವು ಚಾಲುಗೊಂಡ ನಂತರ ಬೆಂಗಳೂರು ನಗರದ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಬೃಹತ್ ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ.
ಬೆಂಗಳೂರು ನಗರ ಟ್ರಾಫಿಕ್ ಜಾಮ್ಗೆ ಕುಖ್ಯಾತವಾಗಿದೆ. ಹೀಗಾಗಿ ನಮ್ಮ ಮೆಟ್ರೋದಂತಹ ಸಮೂಹ ಸಾರಿಗೆ ವ್ಯವಸ್ಥೆಯು ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿದೆ. ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತದೆ. ಬೆಂಗಳೂರು ಮೆಟ್ರೋ 3 ಹಂತವು ಹೊರ ವರ್ತುಲ ರಸ್ತೆ (ORR) ಉದ್ದಕ್ಕೂ ಬರಲಿದ್ದು, 44.65 ಕಿಲೋಮೀಟರ್ (ಕಿಮೀ) ದೂರದಲ್ಲಿ ಚಲಿಸುವ ನಿರೀಕ್ಷೆಯಿದೆ.
More From GoodReturns

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications