ಮೆಟ್ರೋ ಪ್ರಯಾಣ ದರ(Metro fare hike)ಏರಿಕೆಯಿಂದ ಮೆಟ್ರೊ (Metro) ಪ್ರಯಾಣಿಕರು ದಿನದಿಂದ ದಿನಕ್ಕೆ ಕಡಿಮೆಯಾಗತ್ತಲೇ ಇದೆ. ಹೌದು,2017ರ ಬಳಿಕ ಇದೇ ಮೊದಲ ಬಾರಿಗೆ ಪ್ರಯಾಣ ದರ ಏರಿಕೆ ಮಾಡಲಾಗಿದ್ದು,ಫೆಬ್ರವರಿ 9ರ ಭಾನುವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಲೇ ಇವೆ..
ಜನವರಿ ತಿಂಗಳಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಕಂಡಿತ್ತು.ಆದ್ರೆ ಇದೀಗ ಫೆಬ್ರವರಿಯ ಎರಡನೇ ವಾರದಲ್ಲಿ ಪ್ರಯಾಣ ದರಗಳನ್ನು ಪರಿಷ್ಕರಿಸಿ ಕಡಿಮೆ ಮಾಡಲಾಗಿತ್ತು ಆದರೂ ಸಹ ನಮ್ಮ ಮೆಟ್ರೋದಲ್ಲಿ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.13 ರಷ್ಟು ಇಳಿಕೆ ಕಂಡುಬಂದಿದೆ.

ಫೆಬ್ರವರಿ 9ರ ದರ ಹೆಚ್ಚಳಕ್ಕೆ ಮುಂಚಿನ ತಿಂಗಳಿನಲ್ಲಿ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು 8.2 ಲಕ್ಷ ಜನರು ಇದ್ದರು.ನಂತರದ 20 ದಿನಗಳಲ್ಲಿ ಈ ಸಂಖ್ಯೆ ಸುಮಾರು 7.1 ಲಕ್ಷಕ್ಕೆ ಇಳಿದಿದೆ ಶೇ. 13 ರಷ್ಟು ಇಳಿಕೆಯಾಗಿದೆ.
ಜನವರಿಯಲ್ಲಿ 2.5 ಕೋಟಿ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಿದ್ದರೆ, ಫೆಬ್ರವರಿಯಲ್ಲಿ ಈ ಸಂಖ್ಯೆ 2 ಕೋಟಿಗೆ ಇಳಿದಿದ್ದು, ಫೆಬ್ರವರಿಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 20 ರಷ್ಟು ಇಳಿಕೆ ಕಂಡು ಬಂದಿದೆ.
ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ಅಂಕಿ ಅಂಶಗಳು ಮಾಹಿತಿಯನ್ನು ತಿಳಿಸಿವೆ.
ನಮ್ಮ ಮೆಟ್ರೋ ಪ್ರಯಾಣ ದರದ ಏರಿಕೆಯಲ್ಲಿ ಸರಾಸರಿ ದರ ಏರಿಕೆ ಶೇ. 46 ಎಂದು ಬಿಎಂಆರ್ಸಿಎಲ್ ಹೇಳಿಕೊಂಡಿದ್ದರೂ ಇನ್ನೂ ಕೆಲವು ವಿಭಾಗಗಳಲ್ಲಿ ದರ ಹೆಚ್ಚಳ ಶೇ. 110 ರವರೆಗೆ ಇದೆ ಎಂದು ಪ್ರಯಾಣಿಕರು ಆರೋಪ ಮಾಡುತ್ತಿದ್ದಾರೆ.
ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ,ಕೆಲವು ಮಾರ್ಗದಲ್ಲಿ ದರ ಹೆಚ್ಚಳವನ್ನು ಕಡಿಮೆ ಮಾಡಲಾಗಿದೆ. ಆದರೆ, ದೀರ್ಘ ದೂರದ ಪ್ರಯಾಣಿಕರು ದರ ಮ್ಯಾಟ್ರಿಕ್ಸ್ ಮರುಪರಿಶೀಲನೆಯಿಂದ ತಮಗೆ ಯಾವುದೇ ಅನಉಕೂಲಗಳು ಆಗಿಲ್ಲ ಎಂದು ಆರೋಪಿಸಿದ್ದಾರೆ.
ದರ ಪರಿಷ್ಕರಣೆಯ ನಂತರ, ನಮ್ಮ ಮೆಟ್ರೋದ ಮೂಲ ದರವನ್ನು 10 ರೂ. ಮತ್ತು ಗರಿಷ್ಠ ದರ 90 ರೂ. ಎಂದು ನಿಗದಿಪಡಿಸಲಾಗಿದೆ. ದರ ಮ್ಯಾಟ್ರಿಕ್ಸ್ಗಳ ಪುನರ್ರಚನೆ ಹೊರತಾಗಿಯೂ, ಪ್ರಯಾಣಿಕರ ಸಂಖ್ಯೆ ಇನ್ನೂ ದಕ್ಷಿಣ ದಿಕ್ಕಿನತ್ತ ಇರುತ್ತದೆ.
ಫೆಬ್ರವರಿ 23 ರಂದು 4.9 ಲಕ್ಷಕ್ಕಿಂತ ಸ್ವಲ್ಪ ಹೆಚ್ಚು ಪ್ರಯಾಣಿಕರ ಸಂಖ್ಯೆ ದಾಖಲಾಗಿದೆ. ಹೆಚ್ಚಳದ ನಂತರ, ದೈನಂದಿನ ಪ್ರಯಾಣಿಕರ ಸಂಖ್ಯೆ 8 ಲಕ್ಷವನ್ನು ಎರಡು ಬಾರಿ ಮಾತ್ರ ದಾಟಿದೆ. ಫೆಬ್ರವರಿ 10 ಮತ್ತು 24 ರಂದು ಶುಲ್ಕ ಹೆಚ್ಚಳದಿಂದಾಗಿ ಸಾವಿರಾರು ಪ್ರಯಾಣಿಕರು ತಮ್ಮ ಖಾಸಗಿ ವಾಹನಗಳು ಅಥವಾ ನಗರ ಬಸ್ಗಳ ಕಡೆಗೆ ಮುಖವನ್ನು ಮಾಡಿದ್ದಾರೆ.
ಮೆಟ್ರೋ ಬಳಸುವ ವಿದ್ಯಾರ್ಥಿಗಳಿಗೂ ಸಹ ದರ ಏರಿಕೆಯ ಬಿಸಿ ತಟ್ಟಿದ್ದು, ಅವರೂ ಕೂಡ ಮೆಟ್ರೋ ಸಂಚಾರವನ್ನು ಮಾಡಲು ಹೀದೇಟು ಹಾಕುತ್ತಿದ್ದಾರೆ.
ಪ್ರಯಾಣಿಕರ ಸಂಖ್ಯೆಯ ಕುರಿತು ಬಿಎಂಆರ್ಸಿಎಲ್ ಯಾವ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಳಿದಾಗ, ಎಂಡಿ ಮಹೇಶ್ವರ ರಾವ್ ನಾವು ಪ್ರಯಾಣಿಕರ ಡೇಟಾವನ್ನು ವಿಶ್ಲೇಷಿಸುತ್ತಿದ್ದೇವೆ ಮತ್ತು ಪ್ರಯಾಣಿಕರ ಮೇಲಿನ ಪರಿಣಾಮವನ್ನು ಗಮನವರಿಸುತ್ತೇವೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಮೆಟ್ರೋ ದರ ಏರಿಕೆಯನ್ನು ಬಿಎಂಆರ್ಸಿಎಲ್ ಮರುಪರಿಶೀಲಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿ "ನನಗೆ ಯಾವುದೇ ಪ್ರತಿಕ್ರಿಯೆಗಳಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದರ ಏರಿಕೆಯಿಂದ ತೊಂದರೆಗೊಳಗಾದವರ ಕುಂದುಕೊರತೆಗಳನ್ನು ಪರಿಹರಿಸಲು ಏಕೆ ಸಮಯ ತೆಗೆದುಕೊಳ್ಳುತ್ತಿವೆ ಎಂದು ಪ್ರಯಾಣಿಕರು ಪ್ರಶ್ನೆ ಮಾಡುತ್ತಿದ್ದಾರೆ.
ಕೈಗೆಟುಕುವ ಪ್ರಯಾಣವನ್ನಾಗಿ ಮಾಡುವ ಮೂಲಕ ನಗರದ ಜನದಟ್ಟಣೆಯನ್ನು ಕಡಿಮೆ ಮಾಡುವುದು ಮೆಟ್ರೋದ ಪ್ರಾಥಮಿಕ ಉದ್ದೇಶವಾಗಿತ್ತು. ಆದರೆ ಸರ್ಕಾರಗಳು ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ನಮ್ಮ ಮೆಟ್ರೋದಲ್ಲಿ ಪ್ರಯಾಣಕ್ಕಾಗಿ ವಿದ್ಯಾರ್ಥಿಗಳು ತಿಂಗಳಿಗೆ 3,500 ರೂ. ಪಾವತಿಸುವ ಸ್ಥಿತಿಯಲ್ಲಿಲ್ಲ. ಇದು ಪೋಷಕರ ಮೇಲೆ ಹೊರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಮ್ಮ ಮೆಟ್ರೋದಲ್ಲಿ ದರ ಹೆಚ್ಚಳದ ಪರಿಷ್ಕೃತ ದರವನ್ನು ನೋಡಿದ ಜನರು, ಮೆಟ್ರೋಗಿಂತ ಬಿಎಂಟಿಸಿ ಬಸ್, ಖಾಸಗಿ ವಾಹನಗಳೇ ಉತ್ತಮ ಎಂದು ಹೇಳುತ್ತಿದ್ದಾರೆ.ಮೆಟ್ರೋದಲ್ಲಿ ಖಾಲಿ ಖಾಲಿ ಸೀಟುಗಳು ಇದೇ ಮೊದಲ ಭಾರೀ ಕಂಡು ಬರುತ್ತಿದೆ. ಮೆಟ್ರೋದಲ್ಲಿ ಪ್ರಯಾಣ ಮಾಡಲು ಜನರು ಹಿಂದೆ ಮುಂದೆ ನೋಡುತ್ತಿದ್ದಾರೆ.
ಬಿಎಂಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಮೆಟ್ರೋ ದರ ಏರಿಕೆ ಆಗಿರುವುದರಿಂದ ಪ್ರಯಾಣಿಕರು ಬಿಎಂಟಿಸಿ ಬಸ್ ಕಡೆಗೆ ಮುಖ ಮಾಡುತ್ತಿದ್ದಾರೆ.ಫೆಬ್ರವರಿ 3ರ ಸೋಮವಾರ ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ 36.62 ಲಕ್ಷ. ಫೆಬ್ರವರಿ 10ರ ಸೋಮವಾರ ಇದು 37.22 ಲಕ್ಷಕ್ಕೆ ಏರಿಕೆಯಾಗಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications