ಎಲ್ಲರಿಗೂ ತಿಳಿದಿರುವಂತೆ ಭಾರತವು ಅಭಿವೃದ್ದಿಶೀಲ ದೇಶವಾಗಿದ್ದು, ಮೂಲಭೂತ ಸೌಕರ್ಯ ವಿಚಾರ ಸೇರಿದಂತೆ ಭಾರತದಲ್ಲಿ ಇನ್ನೂ ಹಲವು ವಿಧದಲ್ಲಿ ಅಭಿವೃದ್ದಿ ಕಾರ್ಯಗಳು ಇನ್ನೂ ಆಗಬೇಕಿದ್ದು, ಅದಕ್ಕೆ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ಕೂಡ ನಡೆಯುತ್ತಿದೆ. ಆದರೆ ದೇಶದಲ್ಲಿ ಪ್ರತಿಯೊಬ್ಬನ ಕೆಲಸ ಕಾರ್ಯದ ಅವಧಿಗಳು ಹೆಚ್ಚಬೇಕೆಂದು ಕೆಲವರು ಹೇಳುತ್ತಿದ್ದರೂ ಅಷ್ಟಾಗಿ ಮಹತ್ವ ಪಡೆದುಕೊಂಡಿರಲಿಲ್ಲ. ಯಾಕೆಂದರೆ ಸದ್ಯದ ದೇಶದ ಅಭಿವೃದ್ದಿ ದರ ಉತ್ತಮವಾಗಿದ್ದರೂ ಆರ್ಥಿಕ ತಜ್ಞರ ಪ್ರಕಾರ ಈ ದರವು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅದೂ ಅಲ್ಲದೆ ಇತ್ತೀಚಿಗೆ ಕೆಲಸದ ಅವಧಿಯಲ್ಲೂ ಹೆಚ್ಚಳವಾಗಬೇಕೆಂದು ಇನ್ಫೋಸಿಸ್ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಾತು ಈ ವಾದಕ್ಕೆ ಸಂಬಂಧಿಸಿದ ಚರ್ಚೆಗೆ ಮತ್ತಷ್ಟು ವೇದಿಕೆ ನೀಡಿದಂತಾಗಿತ್ತು. ಕೆಲ ದಿನಗಳ ಹಿಂದೆ ಕೂಡ ನಾರಾಯಣ ಮೂರ್ತಿ ಅವರು ಭಾರತದಲ್ಲಿ ಕೆಲಸದ ಅವಧಿ ಹೆಚ್ಚಬೇಕೆಂದು ತಿಳಿಸಿದ್ದರು. ಈ ಹೇಳಿಕೆಗೆ ಹಲವರಿಂದ ಭಾರೀ ಟೀಕೆಗಳು ಕೂಡ ಕೇಳಿಬಂದಿದ್ದವು. ಸದ್ಯ ನಾರಾಯಣ ಮೂರ್ತಿ ಅವರು ತಮ್ಮ 'ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ' ಎಂಬ ಹಿಂದೆ ನೀಡಿದ್ದ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದು ನಾವು ಕಷ್ಟಪಟ್ಟು ಕೆಲಸ ಮಾಡಬೇಕು ಮತ್ತು ಭಾರತವನ್ನು ನಂಬರ್ ಒನ್ ಮಾಡಲು ಶ್ರಮಿಸಬೇಕು ಎಂದು ಹೇಳಿದ್ದಾರೆ. ಇವರ ಕೆಲಸದ ಅವಧಿಯ ಹೇಳಿಕೆಯು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.
ಏನಿದು ಹೊಸ ವಿವಾದ?
ಭಾರತದಲ್ಲಿ ಕೆಲಸದ ಅವಧಿ ಹೆಚ್ಚಿಸಿಬೇಕೆಂಬ ನಾರಾಯಣ ಮೂರ್ತಿಯವರು ಇದೀಗ ತನ್ನ ನಿಲುವನ್ನು ಮತ್ತೆ ಪುನರುಚ್ಛರಿಸಿದ್ದಾರೆ. ವಾರದಲ್ಲಿ ಕೆಲಸದ ಅವಧಿ 70 ಗಂಟೆಗೆ ವಿಸ್ತರಣೆಯಾಗಬೇಕೆಂದು ಅವರು ಮತ್ತೆ ತಿಳಿಸಿದ್ದಾರೆ. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಅವರು ಕಾರಣ ಕೂಡ ನೀಡಿದ್ದಾರೆ. ಭಾರತವನ್ನು ಜಾಗತಿಕ ನಾಯಕನನ್ನಾಗಿ ಮಾಡುವ ನಿಟ್ಟಿನಲ್ಲಿ ಯುವಜನರು ಹೆಚ್ಚಿನ ಶ್ರಮವನ್ನು ಹಾಕುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಯುವ ಭಾರತೀಯರು ತಮ್ಮ ಉನ್ನತ ಆಕಾಂಕ್ಷೆಗಳನ್ನು ಹೊಂದಿರಬೇಕಿದೆ. ಒಂದು ವೇಳೆ ಭಾರತೀಯರು ತಮ್ಮ ದೇಶಕ್ಕಾಗಿ ಕಷ್ಟಪಟ್ಟು ಕೆಲಸ ಮಾಡುವ ಸ್ಥಿತಿಯಲ್ಲಿಲ್ಲದಿದ್ದರೆ ಮತ್ತಾರು ಕೆಲಸ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇನ್ಫೋಸಿಸ್ ಯಾವಾಗಲೂ ಅತ್ಯುತ್ತಮ ಜಾಗತಿಕ ಕಂಪನಿಗಳೊಂದಿಗೆ ಸ್ಪರ್ಧಿಸುವ ಗುರಿಯನ್ನು ಹೊಂದಿದೆ ಎಂದು ನಾರಾಯಣ ಮೂರ್ತಿ ತಿಳಿಸಿದ್ದಾರೆ. ಅದೂ ಅಲ್ಲದೆ ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರು ಎಡಪಂಥೀಯ ಚಿಂತನೆಯ ಬಗ್ಗೆ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವೇಳೆ ನೆಹರೂ ಅವರ ಸಮಯದಲ್ಲಿ ಬಂಡವಾಳಶಾಹಿ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದರೆ ಆ ವೇಳೆ ಭಾರತದಲ್ಲಿ ಅತ್ಯುತ್ತಮ ರಸ್ತೆಗಳು ಮತ್ತು ರೈಲು ಮಾರ್ಗಗಳ ಸುಧಾರಿತ ಮೂಲಸೌಕರ್ಯಗಳು ನಿರ್ಮಾಣವಾಗುತ್ತಿದ್ದವು. ಅಲ್ಲದೆ ನೆಹರೂ ಅವರು ಅಂದಿನ ಸಮಯದಲ್ಲಿ ಸಹಾನುಭೂತಿಯ ಬಂಡವಾಳಶಾಹಿ ನೀತಿ ಹೊಂದಿದ್ದರು ಎಂದು ತಿಳಿಸಿದರು.

ಭಾರತದ ಜಾಗತಿಕ ಗೌರವಕ್ಕೆ ಕೆಲಸ ಮಾಡಿ: ನಾರಾಯಣ ಮೂರ್ತಿ
ಇದೇ ಹೆಚ್ಚಿನ ಪ್ರತಿಕ್ರಿಯೆ ನೀಡಿದ ನಾರಾಯಣ ಮೂರ್ತಿ, ಇಂದಿನ ಯುವಜನತೆಯು ಭಾರತದ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು. ಇದೇ ವೇಳೆ ನಾರಾಯಣ ಮೂರ್ತಿ ಅವರು ಚೀನಾದ ಉದಾಹರಣೆಯನ್ನು ಕೂಡ ನೀಡಿದ್ದಾರೆ. ಪ್ರತಿಯೊಬ್ಬ ಚೀನಾದ ಕೆಲಸಗಾರನು ಭಾರತೀಯನಿಗಿಂತ 3.5 ಪಟ್ಟು ಹೆಚ್ಚು ಉತ್ಪಾದಕನಾಗಿದ್ದಾನೆ. ನಮ್ಮ ದೇಶದ ಮಹಾನ್ ನಾಯಕರ ದೃಷ್ಟಿಕೋನವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸಲು ನಾವು ಶ್ರಮಿಸಬೇಕು ಎಂದು ಅವರು ಪುನರುಚ್ಛರಿಸಿದರು.
ಚರ್ಚೆಗೆ ಕಾರಣವಾದ ಮೂರ್ತಿ ಹೇಳಿಕೆ
ಇನ್ನು ಈಗಾಗಲೇ ನಾರಾಯಣ ಮೂರ್ತಿ ಅವರ ಕೆಲಸಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆಯು ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಆದರೆ ಸದ್ಯ ಮೂರ್ತಿಯವರು ಚೀನಾದ ಉದಾಹರಣೆಯೊಂದಿಗೆ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಚೀನಾದಲ್ಲಿ ಕೆಲಸದ ಅವಧಿ ಭಾರತಕ್ಕಿಂತ ಹೆಚ್ಚು ಇದ್ದು, ಇದೇ ಕಾರಣದಿಂದ ಚೀನಾ ಅಲ್ಪ ಅವಧಿಯಲ್ಲೇ ಭಾರೀ ಪ್ರಮಾಣದ ಬೆಳವಣಿಗೆ ಸಾಧಿಸಿದೆ. ಇದೇ ರೀತಿಯಲ್ಲಿ ಅಭಿವೃದ್ದಿಯಾಗಲು ಭಾರತ ಕೂಡ ತನ್ನ ದಿನದ ಕೆಲಸದ ಅವಧಿಯನ್ನು ಹೆಚ್ಚಿಸಬೇಕೆಂದು ತಿಳಿಸಿದ್ದಾರೆ. ಇನ್ನೂ ಕೆಲವರು ಮೂರ್ತಿಯವರ ವಾದವನ್ನು ಅಲ್ಲಗಳೆದಿದ್ದಾರೆ. ಇದರಿಂದ ಮಾನಸಿಕ ಆರೋಗ್ಯದ ಮೇಲೆ ಕೂಡ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ನಾರಾಯಣ ಮೂರ್ತಿಯವರ ವಾದವನ್ನು ಅಲ್ಲಗಳೆದಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications