ಮುಂದಿನ ಮೂರು ವರ್ಷಗಳ ಅವಧಿಗೆ, ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಯಾವುದೇ ಕೆಲಸಗಳಿಗೆ ಬಿಡ್ ಸಲ್ಲಿಸದಂತೆ, ಎಂಟು ಕಂಪೆನಿಗಳಿಗೆ ನಿಷೇಧ ಹೇರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆದೇಶ ಹೊರಡಿಸಿದೆ.
"ಸತತ ಎಚ್ಚರಿಕೆಯ ನಂತರವೂ ಈ ಸಂಸ್ಥೆಗಳ ಗುಣಮಣ್ಣ ಸುಧಾರಿಸದೇ ಇರುವುದು, ವಹಿಸಿಕೊಂಡ ಕೆಲಸಗಳನ್ನು ಸರಿಯಾದ ಸಮಯದಲ್ಲಿ ಪೂರ್ಣಗೊಳಿಸದೇ ಇದ್ದಿದ್ದರಿಂದ, ಎಂಟು ಕಂಪೆನಿಗಳಿಗೆ ನಿಷೇಧ ಹೇರಲಾಗಿದೆ" ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
"ಹಿಂದಿನ ಎಲ್ಲಾ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಿ ಎಂಟು ಸಂಸ್ಥೆಗಳು/ಗುತ್ತಿಗೆದಾರರನ್ನು ಮೂರು ವರ್ಷದ ಅವಧಿಗೆ ಯಾವುದೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬಿಡ್ ನಲ್ಲಿ ಭಾಗವಹಿಸದಂತೆ ನಿಷೇಧ ಹೇರಲಾಗಿದೆ' ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
"ಶೋಕಾಸ್ ನೋಟಿಸ್ ನೀಡಿ, ವಹಿಸಿಕೊಂಡ ಕೆಲಸಗಳನ್ನು ಪೂರ್ಣಗೊಳಿಸಲು ಅವರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೂ, ಅವರಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ" ಎಂದು ಸಚಿವರು ಹೇಳಿದ್ದಾರೆ.
ಎಂಟು ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್
"ಮೂರು ವರ್ಷಕ್ಕೆ ಎಂಟು ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್ ಮಾಡಲಾಗಿದೆ. ಇದು ಮೊದಲ ಪಟ್ಟಿ, ಮುಂದಿನ ದಿನಗಳಲ್ಲಿ ಉದ್ದೇಶಪೂರ್ವಕವಾಗಿ ಸುಸ್ಥಿದಾರರಾಗುತ್ತಿರುವ ಸಂಸ್ಥೆಗಳಿಗೆ ನಿಷೇಧ ಹೇರಲಾಗುವುದು" ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಬ್ಬರು ಹೇಳಿದ್ದಾರೆ.
ಬೋನಸ್ ಕೂಡಾ ಘೋಷಿಸಲಾಗುವುದು
"ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹೆದ್ದಾರಿ ಕಾಮಗಾರಿಗಳನ್ನು ಮುಗಿಸಿದರೆ, ಅಂತಹ ಸಂಸ್ಥೆಗಳಿಗೆ, ಮುಂದಿನ ಪ್ರಾಜೆಕ್ಟ್ ಗಳಿಗೆ ಆದ್ಯತೆ ನೀಡಲಾಗುವುದು ಮತ್ತು ಬೋನಸ್ ಕೂಡಾ ಘೋಷಿಸಲಾಗುವುದು" ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ಯಾನ್ ಗೊಂಡ ಎಂಟು ಸಂಸ್ಥೆಗಳು/ಗುತ್ತಿಗೆದಾರರ ಪಟ್ಟಿ. ಮುಂದಿನ ಸ್ಲೈಡಿನಲ್ಲಿ:
ನಿಷೇಧಗೊಂಡ 8 ಸಂಸ್ಥೆಗಳ ಪಟ್ಟಿ - 1
ರಾಷ್ಟ್ರೀಯ ಹೆದ್ದಾರಿ ಪ್ರಾಜೆಕ್ಟ್ ನಿಂದ ನಿಷೇಧಗೊಂಡ 8 ಸಂಸ್ಥೆಗಳ ಪಟ್ಟಿ - 1
1. ಎಸ್ ಆರ್ ಇ ಐ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್
2. ಟ್ರಾನ್ಸ್ ಸ್ಟ್ರಾಯ್ ಇಂಡಿಯಾ
3. ಮಧುಕಾನ್ ಪ್ರಾಜೆಕ್ಟ್ಸ್
4. ಮಧುಕಾನ್ ಗ್ರಾನೈಟ್ಸ್
ಪ್ರಾಜೆಕ್ಟ್ ನಿಂದ ನಿಷೇಧಗೊಂಡ 8 ಸಂಸ್ಥೆಗಳ ಪಟ್ಟಿ - 2
ರಾಷ್ಟ್ರೀಯ ಹೆದ್ದಾರಿ ಪ್ರಾಜೆಕ್ಟ್ ನಿಂದ ನಿಷೇಧಗೊಂಡ 8 ಸಂಸ್ಥೆಗಳ ಪಟ್ಟಿ - 2
5. ಒಜೆಎಸ್ಸಿ ಮಾಸ್ಕೋ
6. ಗುಜರಾತ್ ಕನ್ಸ್ಟ್ರಕ್ಷನ್ ಕಂಪೆನಿ
7. ಜಾನ್ಸನ್ ಎಂಟರ್ಪ್ರೈಸಸ್
8. ಪ್ರತಿಭಾ ಕನ್ಸ್ಟ್ರಕ್ಷನ್ ಇಂಜಿನಿಯರ್ಸ್
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications