ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಅಗತ್ಯ ಕ್ರಮ: ಡಿ.ಕೆ ಶಿವಕುಮಾರ್

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಹೌದು,ರಾಜ್ಯ ಸರ್ಕಾರವು ಹಳೆಯ ಪಿಂಚಣಿ ಯೋಜನೆ (OPS) ಅನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆಯನ್ನು ನೀಡಿದ್ದಾರೆ.

ಈ ಕುರಿತು ಗುರುವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು,ಹಳೆಯ ಪಿಂಚಣಿ ಯೋಜನೆಯಡಿಯಲ್ಲಿ ಸರ್ಕಾರಿ ಉದ್ಯೋಗಿ ನಿವೃತ್ತಿಯ ನಂತರ ಮಾಸಿಕ ಪಿಂಚಣಿಗೆ ಅರ್ಹರಾಗಿರುತ್ತಾರೆ. ಸಮಿತಿಯ ವರದಿಯನ್ನು ಅಧ್ಯಯನ ಮಾಡಿದ ನಂತರ ಅದನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಒಪಿಎಸ್ ಜಾರಿಗೆ ಕ್ರಮ: ಡಿ.ಕೆ ಶಿವಕುಮಾರ್

OPS ಅನುಷ್ಠಾನದ ಕುರಿತು ಅಂಜುಮ್ ಪರ್ವೇಜ್ ನೇತೃತ್ವದಲ್ಲಿ ಈಗಲೇ ಸಮಿತಿ ರಚಿಸಲಾಗಿದೆ. ನಮ್ಮ ಸರ್ಕಾರ ವರದಿಯನ್ನು ಅಧ್ಯಯನ ಮಾಡಿದ ನಂತರ ಅದನ್ನು ಕಾರ್ಯ ರೂಪಕ್ಕೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ನಮ್ಮ ಪಕ್ಷವು ನಮ್ಮ ಪ್ರಣಾಳಿಕೆಯಲ್ಲಿ OPS ಅನುಷ್ಠಾನದ ಬಗ್ಗೆ ಭರವಸೆ ನೀಡುತ್ತದೆ. ನಾವು ಅದಕ್ಕೆ ಬದ್ಧರಾಗಿದ್ದೇವೆ. ನಾವು ಆ ಕೆಲಸವನ್ನು ಮಾಡ್ಡೇ ಮಾಡುತ್ತೇವೆ ಆದರೆ ಅದಕ್ಕೆ ಸಮಯ ಮತ್ತು ತಾಳ್ಮೆ ಬೇಕು ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರರು ಸರ್ಕಾರದ ರಥ ಎಳೆಯುತ್ತಾರೆ ಎಂಬುದನ್ನು ಒತ್ತಿ ಹೇಳಿದ ಸಚಿವರು, ರಚನಾತ್ಮಕ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರ ಸಂಘವನ್ನು ಶ್ಲಾಘಿಸಿದರು. "ಸರ್ಕಾರಿ ಕೆಲಸವು ಒಂದು ದೊಡ್ಡ ಜವಾಬ್ದಾರಿಯಾಗಿದೆ ಮತ್ತು ನೀವು ಅದನ್ನು ಚೆನ್ನಾಗಿ ನಿರ್ವಹಿಸಬೇಕು. ಸರ್ಕಾರಿ ನೌಕರರು ದೇವಾಲಯಗಳಲ್ಲಿನ ಅರ್ಚಕರಂತೆ. ದೇವರೊಂದಿಗೆ ಸಂವಹನ ನಡೆಸಲು ಜನರಿಗೆ ಪುರೋಹಿತರು ಬೇಕು. ನಾನು ಕೂಡ 38 ವರ್ಷಗಳಿಂದ ಸರ್ಕಾರಿ ನೌಕರರಂತೆ ಕೆಲಸ ಮಾಡುತ್ತಿದ್ದೇನೆ" ಎಂದು ಅವರು ಹೇಳಿದರು.

ರಾಜ್ಯ ಸರ್ಕಾರವು ಎಲ್ಲಾ ವರ್ಗದ ಜನರನ್ನು ನೋಡಿಕೊಳ್ಳುತ್ತದೆ. ಸಮಾಜದ ಎಲ್ಲಾ ವರ್ಗದವರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ಒಂದೇ. ನಮ್ಮ ಸರ್ಕಾರ ಕೋಟ್ಯಂತರ ಜನರಿಗೆ ಅನುಕೂಲವಾಗುವಂತೆ ಖಾತರಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿ, ನಿಮ್ಮ ಬೇಡಿಕೆಯೂ ನಮ್ಮ ಪ್ರಣಾಳಿಕೆಯಲ್ಲಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಹಳೆಯ ಪಿಂಚಣಿ ಯೋಜನೆಯಡಿಯಲ್ಲಿ, ಸರ್ಕಾರಿ ಉದ್ಯೋಗಿಯೊಬ್ಬರು ನಿವೃತ್ತಿಯ ನಂತರ ಮಾಸಿಕ ಪಿಂಚಣಿಗೆ ಅರ್ಹರಾಗಿರುತ್ತಾರೆ. ಮಾಸಿಕ ಪಿಂಚಣಿ ಸಾಮಾನ್ಯವಾಗಿ ವ್ಯಕ್ತಿಯು ಕೊನೆಯದಾಗಿ ಪಡೆದ ಸಂಬಳದ ಅರ್ಧದಷ್ಟು ಇರುತ್ತದೆ.

ಹೊಸ ಪಿಂಚಣಿ ಯೋಜನೆಯಡಿಯಲ್ಲಿ, ನೌಕರರು ತಮ್ಮ ಸಂಬಳದ ಒಂದು ಭಾಗವನ್ನು ಪಿಂಚಣಿ ನಿಧಿಗೆ ಕೊಡುಗೆ ನೀಡುತ್ತಾರೆ. ಅದರ ಆಧಾರದ ಮೇಲೆ, ಅವರು ನಿವೃತ್ತಿಯ ನಂತರ ಒಂದು ಬಾರಿಯ ಒಟ್ಟು ಮೊತ್ತವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.

ಒಪಿಎಸ್ ಜಾರಿಗೆ ಕ್ರಮ

ಹೊಸ ಪಿಂಚಣಿ ಯೋಜನೆಯನ್ನು ರದ್ದು ಮಾಡಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು ಎಂಬ ಎಂಬುದು ಸರ್ಕಾರಿ ನೌಕರರ ಪ್ರಮುಖ ಅವರ ಬೇಡಿಕೆ. ಅದಕ್ಕಾಗಿ ಅಂಜುಂ ಪರ್ವೇಜ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರ್ಚುವಲ್ ರೂಪದಲ್ಲಿ ಪಾಲ್ಗೊಂಡ ಅವರು 'ಎನ್‌ಪಿಎಸ್‌ ಸಮಿತಿಯೊಂದಿಗೆ ಅಂತಿಮ ಸಭೆ ನಡೆಸಲಾಗಿದೆ. ಅವರು ನೀಡುವ ವರದಿಯನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಒಪಿಎಸ್ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು.

1 ಕೋಟಿ ವಿಮೆ ಸೌಲಭ್ಯ

ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ 1 ಕೋಟಿ ವಿಮೆ ಸೌಲಭ್ಯ ಹಾಗೂ ಕಡಿಮೆ ಬಡ್ಡಿಯಲ್ಲಿ ಸಾಲಸೌಲಭ್ಯ ನೀಡುವ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಿ ಜಾರಿಗೆ ತರಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+