ನಿವ್ವಳ ನೇರ ತೆರಿಗೆ ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ ನಿಂದ ಆಗಸ್ಟ್ ತಿಂಗಳ ಮಧ್ಯೆ ಕಳೆದ ವರ್ಷಕ್ಕಿಂತ 31.1% ಕಡಿಮೆ ಆಗಿವೆ. ಇಲ್ಲಿಯ ತನಕ 1.92 ಲಕ್ಷ ಕೋಟಿ ರುಪಾಯಿಗಿಂತ ಸ್ವಲ್ಪ ಹೆಚ್ಚಿನ ಮೊತ್ತ ಸಂಗ್ರಹವಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಲೋಕಸಭೆಯಲ್ಲಿ ನೀಡಿದ ದತ್ತಾಂಶಗಳಿಂದ ತಿಳಿದುಬಂದಿದೆ.
ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಗೆ ನಿವ್ವಳ ನೇರ ತೆರಿಗೆ ಸಂಗ್ರಹವು 2.79 ಲಕ್ಷ ಕೋಟಿ ರುಪಾಯಿಗಿಂತ ಹೆಚ್ಚಿಗೆ ಆಗಿತ್ತು. ಇದೇ ಅವಧಿಯ ನಿವ್ವಳ ಪರೋಕ್ಷ ತೆರಿಗೆ ಸಂಗ್ರಹವು 11.23% ಇಳಿಕೆ ಆಗಿ, 3.42 ಲಕ್ಷ ಕೋಟಿ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 3.86 ಲಕ್ಷ ಕೋಟಿ ರುಪಾಯಿ ಸಂಗ್ರಹ ಆಗಿತ್ತು.
"ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದಲ್ಲಿ 2020- 21ರ ಆರ್ಥಿಕ ವರ್ಷದಲ್ಲಿ ಇಳಿಕೆ ಹಾದಿಯಲ್ಲಿ ಸಗಟು ಜಿಎಸ್ ಟಿ ಸಂಗ್ರಹ ಸಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಹೇರಿದ ಲಾಕ್ ಡೌನ್ ಮತ್ತು ಸರ್ಕಾರವು ತೆರಿಗೆ ಪಾವತಿದಾರರಿಗೆ ನೀಡಿದ ವಿನಾಯಿತಿಗಳಿಂದ ಹೀಗಾಗಿದೆ" ಎಂದು ಅನುರಾಗ್ ಠಾಕೂರ್ ಲಿಖಿತ ಉತ್ತರದಲ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ತೆರಿಗೆ ನಿಯಮಗಳನ್ನು ಉತ್ತಮಗೊಳಿಸುವುದಕ್ಕೆ ಸರ್ಕಾರ ಹಲವು ಬಗೆಯಲ್ಲಿ ಪ್ರಯತ್ನಿಸಿದೆ. ಕಂಪ್ಯೂಟರ್ ಮೂಲಕವೇ ಸಿದ್ಧವಾಗುವ ಹಾಗೂ ವಿಶ್ಲೇಷಿಸುವ ವರದಿಗಳನ್ನು ರಾಜ್ಯ ಹಾಗೂ ಕೇಂದ್ರ ತೆರಿಗೆ ಅಧಿಕಾರಿಗಳ ಜತೆಗೆ ಹಂಚಿಕೊಳ್ಳಲಾಗಿದೆ. ತೆರಿಗೆ ಕದಿಯುತ್ತಿರುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications