ಉದ್ಯೋಗಿಗಳಿಗೆ ಸಹಾಯ ಆಗಲೆಂದೇ ಹೊಸ ಇಪಿಎಫ್(ನೌಕರರ ಭವಿಷ್ಯ ನಿಧಿ) ನಿಯಮ ಜಾರಿಗೆ ಬರಲಿದ್ದು, ಹೆಚ್ಚುವರಿ 50 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೆರವಾಗಲಿದೆ. ಯಾರಿಗೆ ಪಿಎಫ್(ಭವಿಷ್ಯ ನಿಧಿ) ಹಣ ಕಡಿತಗೊಳಿಸಲಾಗುತ್ತಿಲ್ಲ ಅಂತವರಿಗೆ ಈ ಹೊಸ ನಿಯಮದಿಂದ ಅನುಕೂಲವಾಗಲಿದೆ.
ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಮಿಕ ಸಚಿವಾಲಯವು ಹೊಸ ನಿಯಮವನ್ನು ಜಾರಿಗೆ ತರಲು ಅಧಿಸೂಚನೆ ಹೊರಡಿಸಿದೆ. ಇದು 2020 ಜನವರಿ 1 ರಿಂದ ಜಾರಿಯಾಗಲಿದ್ದು, ಪ್ರಸ್ತುತ ಉದ್ಯೋಗಿಗಳ ಜೊತೆಗೆ ಹೆಚ್ಚುವರಿಯಾಗಿ 50 ಲಕ್ಷ ಉದ್ಯೋಗಿಗಳಿಗೆ ವರದಾನವಾಗಲಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ಯಾರಿಗೆ ಇನ್ನೂ ಪಿಎಫ್ ಕಡಿತಗೊಳಿಸಲಾಗುತ್ತಿಲ್ಲ, ಅಂತವರಿಗೆ ಭವಿಷ್ಯ ನಿಧಿ ಯೋಜನೆಯನ್ನು ವಿಸ್ತರಿಸಲು ಕಾರ್ಮಿಕ ಸಚಿವಾಲಯವು ಮುಂದಾಗಿದೆ.
ಇಪಿಎಫ್ ನಿಯಮಗಳ ಪ್ರಕಾರ ಯಾವುದೇ ಸಂಸ್ಥೆ, ಕಚೇರಿ 20ಕ್ಕೂ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿದ್ದಲ್ಲಿ ಪಿಎಫ್ ಅನ್ವಯವಾಗುತ್ತದೆ. ಆದರೆ ಈಗ ನಿಯಮ ಬದಲಾವಣೆಯಿಂದ 10 ಜನರು ಕೆಲಸ ಮಾಡುವ ಕಚೇರಿಗಳಲ್ಲಿಯೂ ಪಿಎಫ್ ಕಡಿತಗೊಳಿಸಬೇಕು.
ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಕಾರ್ಮಿಕ ಇಲಾಖೆಗಳಲ್ಲಿನ ಬದಲಾವಣೆಗೆ ಸಂಸತ್ತಿನಿಂದ ಯಾವುದೇ ಅನುಮೋದನೆ ಅಗತ್ಯವಿಲ್ಲ. ಇದೇ ರೀತಿಯಲ್ಲಿ 2008ರಲ್ಲಿ ಇಪಿಎಫ್ಒ ಅನುಮೋದಿಸಿತು. ಹೊಸದಾಗಿ ರೂಪುಗೊಂಡ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ನಲ್ಲಿಯೂ ಹೊಸ ನಿಯಮ ಅನ್ವಯವಾಗಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications