ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಬಳಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುತ್ತಿದೆ. ಈ ಅವರ ಕಂಚಿನ ಪ್ರತಿಮೆಗೆ ಅಂದಾಜು 1.11 ಕೋಟಿ ರೂಪಾಯಿ ಆಗುತ್ತದೆ. ಕಾಂಕ್ರೀಟ್ ಪ್ರತಿಮೆಗೆ ಬದಲಾಗಿ ಹೊಸ ಪ್ರತಿಮೆ ನಿರ್ಮಾಣವಾಗಲಿದೆ.
ಸುಭಾಷ್ ನಗರ ಜಂಕ್ಷನ್ ಅಥವಾ ರಾಜೀವ್ ಗಾಂಧಿ ಚೌಕ ಎಂದು ಕರೆಯಲಾಗುವ, ಈ ಜಂಕ್ಷನ್ ಭಾಗಶಃ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಡಿಯಲ್ಲಿ ಬರುತ್ತದೆ.

15ನೇ ಹಣಕಾಸು ಆಯೋಗದ ಕಾರ್ಯಕ್ರಮದಡಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕೈಗೆತ್ತಿಕೊಂಡ 25 ಜಂಕ್ಷನ್ಗಳಲ್ಲಿ ಸುಭಾಷ್ ನಗರವೂ ಒಂದಾಗಿದೆ. ಏಳು ಮೀಟರ್ ಪ್ರತಿಮೆಯ ವೆಚ್ಚವನ್ನು ಬಿಬಿಎಂಪಿ ತನ್ನ ಸ್ವಂತ ಹಣವನ್ನು ಬಳಸಿ ಭರಿಸಲಿದೆ.
ಈ ಹಿಂದೆ ಜಂಕ್ಷನ್ನಲ್ಲಿ ಸ್ಥಾಪಿಸಲಾಗಿದ್ದ ಕಾಂಕ್ರೀಟ್ ಪ್ರತಿಮೆಯನ್ನು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ನಾವು ಈಗ ಕಂಚಿನ ಪ್ರತಿಮೆಯನ್ನು ಸ್ಥಾಪಿಸುತ್ತಿದ್ದೇವೆ," ಎಂದು ಅಧಿಕಾರಿಯೊಬ್ಬರು ಹೇಳಿದರು.
ಈ ಕೆಲಸವನ್ನು ಪಾಲಿಕೆಯ ಟ್ರಾಫಿಕ್ ಇಂಜಿನಿಯರಿಂಗ್ ಸೆಲ್ಗೆ ವಹಿಸಲಾಗಿದೆ. ಸಿಂಗಲ್ ಬಿಡ್ಡರ್ ಆಗಿದ್ದ ಕಲ್ಯಾಣ್ ಇನ್ಫ್ರಾ ಪ್ರಾಜೆಕ್ಟ್ಸ್ಗೆ ನೀಡಲಾಗಿದೆ. ಆದರೂ 2023 ರ ಮಧ್ಯದಲ್ಲಿ ಬಿಬಿಎಂಪಿ ಟೆಂಡರ್ಗಳನ್ನು ಕರೆದಿದ್ದು ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಟ್ವೀಟ್ನಲ್ಲಿ ಈ ಕ್ರಮವನ್ನು ಟೀಕಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ. ಆದರೆ ನಮ್ಮ ನೆಲ ಮತ್ತು ಸಂಸ್ಕೃತಿಯನ್ನು ಅವಮಾನಿಸಿದರೂ ಅವರ ರಾಜಕೀಯ ಯಜಮಾನರನ್ನು ಮೆಚ್ಚಿಸಲು ಎಲ್ಲಾ ಹಣ ಲಭ್ಯವಿದೆ ಎಂದು ಹೇಳಿದ್ದಾರೆ.
More From GoodReturns

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Rapido Ownly: ರ್ಯಾಪಿಡೋದಿಂದ ಹೊಸ ಫುಡ್ ಡೆಲಿವರಿ ಆಪ್ ಲಾಂಚ್! ಏನಿದರ ವಿಶೇಷತೆ?

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!



Click it and Unblock the Notifications