2 ಬಿಲಿಯನ್ ಡಾಲರ್ ವಂಚನೆ ಮಾಡಿರುವ ಪ್ರಮುಖ ಆರೋಪಿ, ವಜ್ರಾಭರಣ ವ್ಯಾಪಾರಿಯೂ ಆಗಿರುವ ನೀರವ್ ಮೋದಿಯನ್ನು ಮುಂಬೈನ ವಿಶೇಷ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಮನವಿಯ ಮೇರೆಗೆ ಪರಾರಿಯಾದ ಆರ್ಥಿಕ ಅಪರಾಧಿ' ಎಂದು ಘೋಷಿಸಿದೆ. ಮದ್ಯದ ದೊರೆ ವಿಜಯ್ ಮಲ್ಯ ನಂತರ, ನೀರವ್ ಮೋದಿ ಈ ಅಪರಾಧಕ್ಕೆ ಒಳಗಾದವರಲ್ಲಿ ಎರಡನೆಯವರು. ಕಳೆದ ವರ್ಷ, 2018ರಲ್ಲಿ ಇಂತಹುದೇ ಆರೋಪಕ್ಕೆ ಮಲ್ಯ ಒಳಗಾಗಿದ್ದರು.
ಪಿಎಂಎಲ್ಎ (ಪ್ರಿವೆಂನ್ಶನ್ ಆಫ್ ಮನಿ ಲಾಂಡರಿಂಗ್) ಎನ್ನುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿ.ಸಿ.ಬರ್ಡೆ ಅವರು ಡೈಮಂಟೈರ್ ಮತ್ತು ಇಡಿಯ ವಕೀಲರ ವಾದಗಳನ್ನು ಆಲಿಸಿದ ನಂತರ ನೀರವ್ ಮೋದಿಯನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಘೋಷಿಸಿದ್ದಾರೆ.

ಫೆಬ್ರವರಿ 2018ರ ಪಿಎನ್ಬಿ ಹಗರಣದಲ್ಲಿ ನೀರವ್ ಮೋದಿ ಮತ್ತು ಅವರ ಚಿಕ್ಕಪ್ಪ ಮೆಹುಲ್ ಚೋಕ್ಸಿ ಪ್ರಮುಖ ಆರೋಪಿಗಳಾಗಿದ್ದು, 2018 ಜನವರಿಯಲ್ಲಿ ಭಾರತವನ್ನು ತೊರೆದ ನಂತರ ಈ ಪ್ರಕರಣವು ಬೆಳಕಿಗೆ ಬಂದಿತ್ತು.
2019 ರ ಮಾರ್ಚ್ ನಲ್ಲಿ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದ್ದರೂ, ಇನ್ನೂ ಹಸ್ತಾಂತರ ಪ್ರಕ್ರಿಯೆ ಬಾಕಿ ಇದೆ. ಮೆಹುಲ್ ಚೋಕ್ಸಿ ಆಂಟಿಗುವಾದ ಪೌರತ್ವವನ್ನು ಪಡೆದಿದ್ದರೂ, ಆತನನ್ನು ಭಾರತಕ್ಕೆ ಮರಳಿ ತರಲು ಪ್ರಯತ್ನಗಳು ನಡೆಯುತ್ತಿವೆ.
ಇಡಿಯ ಪ್ರಕಾರ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರೊಂದಿಗೆ 14,000 ಕೋಟಿ ರುಪಾಯಿಗಳ ವಂಚನೆ ಹಗರಣದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕಾರಿಗಳ ಸಹಭಾಗಿತ್ವ ಕೂಡಾ ಇತ್ತು ಎಂದು ವಂಚನೆ ಪತ್ರಗಳಲ್ಲಿ ಆರೋಪಿಸಲಾಗಿದೆ.
ಎಫ್ಇಒ ಕಾಯ್ದೆಯ ಅಡಿಯಲ್ಲಿ, 100 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ವಂಚನೆಯನ್ನು ಒಳಗೊಂಡ ಒಬ್ಬ ಅಪರಾಧಿಯ ವಿರುದ್ದ ವಾರಂಟ್ ಜಾರಿಗೆ ಬಂದಿದ್ದು, ಆ ವ್ಯಕ್ತಿಯು ದೇಶವನ್ನು ತೊರೆದು, ಆತ ತನ್ನ ದೇಶಕ್ಕೆ ಮರಳಲು ನಿರಾಕರಿಸಿದಲ್ಲಿ ಅಂತಹ ವ್ಯಕ್ತಿಯನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಘೋಷಿಸಬಹುದಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications