ಬೆಂಗಳೂರು, ಸೆಪ್ಟೆಂಬರ್ 5: ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಂದು ಬೆಂಗಳೂರು ಇನ್ ಫ್ಯಾಂಟ್ರಿ ರಸ್ತೆಯ ನಂ.4, 5, ಮತ್ತು 6ರ ನಿವೇಶನದಲ್ಲಿ ಆದಾಯ ತೆರಿಗೆ ಇಲಾಖೆಯ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಅದೇ ಸ್ಥಳದಲ್ಲಿ ಶಿಲಾನ್ಯಾಸದ ಫಲಕವನ್ನೂ ಸಚಿವೆ ಅನಾವರಣ ಮಾಡಿದರು. ಬೆಂಗಳೂರು ಕೇಂದ್ರ ಲೋಕಸಭಾಕ್ಷೇತ್ರದ ಮಾನ್ಯ ಸಂಸತ್ ಸದಸ್ಯ ಪಿ.ಸಿ. ಮೋಹನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ತರುಣ್ ಬಜಾಜ್, ಸಿಬಿಡಿಟಿಯ ಅಧ್ಯಕ್ಷ ಜೆ.ಬಿ. ಮೊಹಾಪಾತ್ರ ಮತ್ತು ಸಿಬಿಐಸಿಯ ಅಧ್ಯಕ್ಷ ಎಂ. ಅಜಿತ್ ಕುಮಾರ್ ಅವರೂ ಉಪಸ್ಥಿತರಿದ್ದರು. ಇಲ್ಲಿ ನಿರ್ಮಾಣವಾಗಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿ ಕಟ್ಟಡವು ನೆಲಮಹಡಿ ಮತ್ತು 18 ಮಹಡಿಗಳನ್ನು ಮತ್ತು ನೆಲಮಾಳಿಗೆಯಲ್ಲಿ ವಾಹನ ನಿಲುಗಡೆಯ ಸೌಲಭ್ಯ ಒಳಗೊಂಡಿರುತ್ತದೆ.

ಕಟ್ಟಡವು ಗರಿಷ್ಠ ನೈಸರ್ಗಿಕ ಬೆಳಕನ್ನು ಬಳಸಿಕೊಳ್ಳುತ್ತದೆ ಮತ್ತು ಗೃಹ ಶ್ರೇಯಾಂಕ IV ಅನುಗುಣವಾಗಿರುತ್ತದೆ. ಈ ಕಟ್ಟಡವು ವಿದ್ಯುತ್ ಉತ್ಪಾದನೆಗೆ ಸೌರ ಫಲಕಗಳನ್ನು ಒಳಗೊಂಡಿರುತ್ತದೆ ಮತ್ತು ಮಳೆ ನೀರು ಕೊಯ್ಲು ವ್ಯವಸ್ಥೆಯಿಂದ ವಿನ್ಯಾಸಿತವಾಗಿದೆ. ಎರಡು ಕೊಳಾಯಿ ವ್ಯವಸ್ಥೆಯೊಂದಿಗೆ ಮರುಬಳಕೆಯ ನೀರನ್ನು ಕೈತೋಟಕ್ಕೆ ಬಳಸಲಾಗುತ್ತದೆ. ಮ್ಯಾಗ್ನೆಟಿಕ್ ಫಿಲ್ಟರ್ ಸಹಿತವಾದ ಕೇಂದ್ರೀಕೃತ ವಾಯು ಸ್ವಚ್ಛತೆ ವ್ಯವಸ್ಥೆ, ಮತ್ತು ಯುವಿ- ಕಿರಣ ಕ್ರಿಮಿನಾಶಕವನ್ನು ಒಳಗೊಂಡಿದೆ. ಕಟ್ಟಡವನ್ನು ಸಿಪಿಡಬ್ಲ್ಯುಡಿಯ ಬೆಂಗಳೂರು ಯೋಜನಾ ವೃತ್ತ ನಿರ್ಮಿಸುತ್ತದೆ.

ಈ ಸುಸಜ್ಜಿತ ಕಟ್ಟಡದಲ್ಲಿ ಸಾರ್ವಜನಿಕರ ಕುಂದುಕೊರತೆಯನ್ನು ಆದ್ಯತೆಯ ಮೇಲೆ ನಿವಾರಿಸಲು ಪ್ರತ್ಯೇಕವಾದ ಸಾರ್ವಜನಿಕ ಸಂಪರ್ಕ ಕಚೇರಿ ಮತ್ತು ತೆರಿಗೆ ಪಾವತಿದಾರರಿಗೆ ಸರದಿಗಾಗಿ ಕಾದು ಕುಳಿತುಕೊಳ್ಳುವ ಆವರಣವೂ ಇರುತ್ತದೆ. ಇದು ಯಾವುದೇ ತೊಡಕು ರಹಿತ ತೆರಿಗೆದಾರರ ಸೇವೆಗಳನ್ನು ಒದಗಿಸಲು ಆದಾಯಕರ ಸೇವಾ ಕೇಂದ್ರವನ್ನು ಹೊಂದಿರುತ್ತದೆ. ಕೇಂದ್ರ ಸ್ಥಾನದಲ್ಲಿರುವ ಈ ಕಚೇರಿ ಕಟ್ಟಡವು ತೆರಿಗೆದಾರ ಸ್ನೇಹಿಯಾಗಿದೆ. ಕಟ್ಟಡದ ವಿನ್ಯಾಸ ಮತ್ತು ಜಾಗದ ಹಂಚಿಕೆಯು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅನುಕೂಲಕರವಾದ ಕಾರ್ಯ ವಾತಾವರಣವನ್ನು ಒದಗಿಸುತ್ತದೆ.
More From GoodReturns

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications