ಜನರ ಕೈನಲ್ಲಿ ಹಣವಿಡಲು ಸರ್ಕಾರ ಬಯಸುತ್ತಿದೆ: ನಿರ್ಮಲಾ ಸೀತಾರಾಮನ್

ಜನರ ಕೈನಲ್ಲಿ ಹಣವನ್ನಿಡಲು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಬಜೆಟ್ ಮಂಡನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೇಂದ್ರ ಬಜೆಟ್ ಮಂಡನೆ ಬಳಿಕ ಮಾತನಾಡಿದ ಅವರು ಜನರ ಜೇಬಿಗೆ ಹೆಚ್ಚಿನ ಹಣ ಹಾಕಲು ನಾವು ಬಯಸುತ್ತೇವೆ ಎಂದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಕೆಳ ವರ್ಗದವರ ಕೈನಲ್ಲಿ ಹಣ ಉಳಿಯಬೇಕು ಎಂಬುದು ನಮ್ಮ ಗುರಿಯಾಗಿದೆ.

ಜನರ ಕೈನಲ್ಲಿ ಹಣವಿಡಲು ಸರ್ಕಾರ ಬಯಸುತ್ತಿದೆ: ನಿರ್ಮಲಾ ಸೀತಾರಾಮನ್

ತೆರಿಗೆಯ ಪಾವತಿ ವಿಧಾನಗಳನ್ನು ಸರಳಗೊಳಿಸಿದ್ದೇವೆ. ಜನರು ಹಳೆಯ ಅಥವಾ ಹೊಸ ಮಾದರಿಯಲ್ಲೂ ಆಯ್ಕೆ ಮಾಡಿಕೊಂಡು ತೆರಿಗೆಯನ್ನು ಪಾವತಿ ಮಾಡಬಹುದು ಎಂದರು. ಜನರಿಗೆ ಅನುಕೂಲ ಆಗುವ ರೀತಿಯಲ್ಲಿ ತೆರಿಗೆ ಪದ್ಧತಿಯನ್ನು ಸರಳಗೊಳಿಸಿದ್ದೇವೆ ಎಂದಿದ್ದಾರೆ.

ಬಜೆಟ್‌ನಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಹೆಚ್ಚುವರಿ ಬಂಡವಾಳವನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ ಯುವ ಜನರಿಗೆ ಉದ್ಯೋಗ ನೀಡುವ ಯೋಜನೆಗಳ ಕುರಿತಾಗಿಯೂ ಗಮನಹರಿಸಿದ್ದೇವೆ ಎಂದಿದ್ದಾರೆ.

ಗೊತ್ತು ಗುರಿ ಇಲ್ಲದ ಬಜೆಟ್ ಎಂದ ರಾಹುಲ್‌ ಗಾಂಧಿ

ನಿರುದ್ಯೋಗದ ಸಂಬಂಧ ಬಜೆಟ್‌ನಲ್ಲಿ ಯಾವುದೇ ವಿಚಾರಗಳಿಲ್ಲ. ಹೇಳಿದ್ದನ್ನೇ ಹೇಳಿದ್ದಾರೆ. ಬಜೆಟ್‌ನಲ್ಲಿ ಒಂದು ಗೊತ್ತು ಗುರಿ ಇಲ್ಲದ ಬಜೆಟ್‌ ಇದಾಗಿದೆ ಎಂದು ರಾಹುಲ್‌ ಗಾಂಧಿ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+