ಎನ್ ಎಂಸಿ ಹೆಲ್ತ್ ಸ್ಥಾಪಕ ಬಿ.ಆರ್. ಶೆಟ್ಟಿ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ತೆರಳದಂತೆ ವಲಸೆ ಅಧಿಕಾರಿಗಳು ಶನಿವಾರ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಈ ಬೆಳವಣಿಗೆ ಬಗ್ಗೆ ಮಾಹಿತಿ ಇರುವವರು ಭಾನುವಾರ ತಿಳಿಸಿದ್ದಾರೆ.
ಬಿ.ಆರ್. ಶೆಟ್ಟಿ ಶನಿವಾರ ಹೇಳಿಕೆಯೊಂದನ್ನು ನೀಡಿ, ಯುಎಇಗೆ ಮರಳುವ ಯೋಜನೆ ಇದೆ ಎಂದು ಹೇಳಿದ್ದರು. ಆಸ್ಪತ್ರೆಯ ಸಾಲವು ವಿಪರೀತ ಹೆಚ್ಚಾಗಿರುವುದನ್ನು ಮುಚ್ಚಿಟ್ಟು, ಆ ದೇಶವನ್ನು ಬಿಟ್ಟು ಬರಲಾಗಿದೆ ಎಂಬ ಆರೋಪವನ್ನು ಅವರು ನಿರಾಕರಿಸಿದ್ದರು. ಇನ್ನು ಬಿ.ಆರ್. ಶೆಟ್ಟಿ ಅವರ ಪತ್ನಿಗೆ ಅಬುಧಾಬಿಗೆ ಪ್ರಯಾಣಿಸಲು ಅನಮತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
"ನಮ್ಮ ಬಳಿ ಕೆಲವು ಸೂಚನೆಗಳಿವೆ, ಆದ್ದರಿಂದ ಈ ಸಮಯದಲ್ಲಿ ಪ್ರಯಾಣಿಸಲು ಬಿಡುವುದಕ್ಕೆ ಸಾಧ್ಯವಿಲ್ಲ ಎಂದು ಅವರಿಗೆ ತಿಳಿಸಿದೆವು," ಎಂಬ ಮಾಹಿತಿಯನ್ನು ಮೂಲಗಳು ನೀಡಿವೆ. ಇನ್ನೂ ಮುಂದುವರಿದು, ಶೆಟ್ಟಿ ಅವರನ್ನು ವಶಕ್ಕೆ ಏನೂ ಪಡೆದಿಲ್ಲ ಅಂತಲೂ ತಿಳಿಸಲಾಗಿದೆ.

ಮೊಬೈಲ್ ಫೋನ್ ಗೆ ಸಂಪರ್ಕಿಸಿದಾಗ ಪ್ರತಿಕ್ರಿಯೆಗೆ ಶೆಟ್ಟಿ ಅವರು ಲಭ್ಯರಾಗಿಲ್ಲ. ಶನಿವಾರ ಶೆಟ್ಟಿ ಅವರು ನೀಡಿದ ಹೊರತಾಗಿ ಬೇರ್ಯಾವ ಹೇಳಿಕೆ ನೀಡಲು ವಕ್ತಾರರು ನಿರಾಕರಿಸಿದ್ದಾರೆ. ಇನ್ನು ಬೆಂಗಳೂರಿನ ವಲಸೆ ಅಧಿಕಾರಿಗಳು ಪ್ರತಿಕ್ರಿಯೆಗೆ ತಕ್ಷಣಕ್ಕೆ ಲಭ್ಯರಾಗಿಲ್ಲ.
ಎನ್ ಎಂಸಿಗೆ ಅಂದಾಜು ಆರುನೂರಾ ಅರವತ್ತು ಕೋಟಿ ಅಮೆರಿಕನ್ ಡಾಲರ್ ಗೂ ಹೆಚ್ಚು ಸಾಲ ಇದೆ ಎಂಬುದು ಬಯಲಾದ ಮೇಲೆ ಕಳೆದ ಏಪ್ರಿಲ್ ನಲ್ಲಿ ಸಂಸ್ಥೆ ಆಡಳಿತಾಧಿಕಾರಿ ಕೈಗೆ ಹೋಯಿತು. ಶೆಟ್ಟಿ ಅವರು ಭಾರತದಲ್ಲೂ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಒಪ್ಪಂದದಿಂದ ಹಿಂದೆ ಸರಿದ ಕಾರಣಕ್ಕೆ ಬ್ಯಾಕ್ ಆಫ್ ಬರೋಡ ಮೊಕದ್ದಮೆ ದಾಖಲಿಸುತ್ತಿದೆ.
More From GoodReturns

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications