ಕೇಂದ್ರ ಸರ್ಕಾರಿ ನೌಕರರಿಗೆ ಇನ್ನು ಒಂದು ವರ್ಷ ಡಿ.ಎ. (ತುಟ್ಟಿ ಭತ್ಯೆ) ಏರಿಕೆ ಮಾಡುವುದಿಲ್ಲ ಎಂದು ಕೇಂದ್ರದಿಂದ ಗುರುವಾರ ಘೋಷಣೆ ಮಾಡಲಾಗಿದೆ. ಮಾರ್ಚ್ ತಿಂಗಳಲ್ಲಿ 4 ಪರ್ಸೆಂಟ್ ಹೆಚ್ಚಿಸುವ ಮೂಲಕ 21 ಪರ್ಸೆಂಟ್ ಗೆ ಡಿ.ಎ. ಏರಿಕೆ ಮಾಡಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿತ್ತು. ಆದರೆ ಈಗ ಕೇಂದ್ರ ಸರ್ಕಾರಿ ನೌಕರರು ಹಾಗೂ ಪೆನ್ಷನ್ ದಾರರಿಗೆ 17 ಪರ್ಸೆಂಟ್ ಡಿ.ಎ., ಡಿಯರ್ ನೆಸ್ ರಿಲೀಫ್ ಮುಂದುವರಿಯಲಿದೆ.
ಇನ್ನು ಜನವರಿ 1, 2020ರಿಂದ ಜೂನ್ 30, 2021ರ ಅವಧಿಗೆ ಯಾವುದೇ ಬಾಕಿಯನ್ನು ಸಹ ನೀಡುವುದಿಲ್ಲ ಎಂದು ತಿಳಿಸಲಾಗಿದೆ. ಜುಲೈ 1, 2021ಕ್ಕೆ ಆಗಬೇಕಿರುವ ಡಿಎ ಪರಿಷ್ಕರಣೆಯನ್ನು ಈ ಹಿಂದಿನ ಏರಿಕೆ ಎಂದೇ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರವು ಸಿಬ್ಬಂದಿ ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆ ಏರಿಕೆಯನ್ನು ತಡೆಹಿಡಿಯಲಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈಗ ಬಂದಿರುವ ಆದೇಶದ ಪ್ರಕಾರ, ಜನವರಿ 1, 2020ಕ್ಕೆ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ ಬಾಕಿ ಇರುವ ಡಿ.ಎ. ಕೂಡ ಪಾವತಿ ಮಾಡುವುದಿಲ್ಲ. ಅದರ ಜತೆಗೆ ಜನವರಿ, ಜುಲೈನಿಂದ ಪಾವತಿಯಾಗಬೇಕಾದದ್ದನ್ನು ಕೂಡ ನೀಡುವುದಿಲ್ಲ. ಆದರೆ ಈಗ ನಿಗದಿ ಮಾಡಿರುವ ದರವನ್ನೇ ಮುಂದುವರಿಸಿಕೊಂಡು ಹೋಗಲಾಗುವುದು ಎಂದು ತಿಳಿಸಲಾಗಿದೆ.

ಡಿ.ಎ. ಏರಿಕೆ ಬಗ್ಗೆ ಮಾರ್ಚ್ ನಲ್ಲಿ ಘೋಷಣೆ ಮಾಡಲಾಗಿತ್ತು. ಅದು ಜನವರಿ 1, 2020ರಿಂದಲೇ ಪೂರ್ವಾನ್ವಯ ಆಗಬೇಕಿತ್ತು. ಅಂದ ಹಾಗೆ ಸರ್ಕಾರದ ಈ ನಿರ್ಧಾರದಿಂದ ಕೇಂದ್ರ ಸರ್ಕಾರದ ನೌಕರರು, ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರ ಆದಾಯದ ಮೇಲೆ ಪ್ರಭಾವ ಆಗುತ್ತದೆ.
ತುಟ್ಟಿ ಭತ್ಯೆ ಅಂದರೇನು?
ಏರುವ ಹಣದುಬ್ಬರಕ್ಕೆ ಪರಿಹಾರ ಎಂಬಂತೆ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ನೀಡಲಾಗುತ್ತದೆ. ಒಂದು ವರ್ಷದಲ್ಲಿ ಎರಡು ಬಾರಿ- ಜನವರಿ ಹಾಗೂ ಜುಲೈನಲ್ಲಿ ಡಿ.ಎ. ಪರಿಷ್ಕರಣೆ ಆಗುತ್ತದೆ.
ಈಚೆಗಷ್ಟೇ ಸರ್ಕಾರವು ಸಂಸದರು, ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ವೇತನವನ್ನು ಕಡಿತ ಮಾಡಿ ಆದೇಶ ನೀಡಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications