ಕೊರೊನಾವೈರಸ್ ಹರಡುವಿಕೆಯಿಂದ ಲಾಕ್ಡೌನ್ ಹಿನ್ನೆಲೆಯಲ್ಲಿ 2019-20ನೇ ಸಾಲಿನ ಹಣಕಾಸು ವರ್ಷದ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
2019-20ನೇ ಸಾಲಿನ ಹಣಕಾಸು ವರ್ಷದ ಅವಧಿಯು ಯಥಾಪ್ರಕಾರ ಪ್ರತಿವರ್ಷದಂತೆ ಈ ವರ್ಷ ಕೂಡ ಇಂದಿಗೆ(ಮಾರ್ಚ್31) ಮುಕ್ತಾಯವಾಗಲಿದೆ. ಈ ಹಿಂದೆ ಪ್ರಸಕ್ತ ಹಣಕಾಸು ವರ್ಷ ಜುಲೈ 1ರಿಂದ ಆರಂಭವಾಗಲಿದೆ ಎಂದು ವರದಿಯಾಗಿತ್ತು. ಆದರೆ ಹಣಕಾಸು ವರ್ಷವನ್ನು ವಿಸ್ತರಿಸುವುದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಈ ಸಂಬಂಧ ಕಳೆದ ಸಂಜೆ ಗೆಜೆಟೆಡ್ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರ್ಕಾರ ಮುದ್ರಾಂಕ ತೆರಿಗೆ ದಿನಾಂಕವನ್ನು ಏಪ್ರಿಲ್ 1ರಿಂದ ಜುಲೈ1ಕ್ಕೆ ವಿಸ್ತರಿಸಿದೆ. ಭಾರತೀಯ ಮುದ್ರಾಂಕ ಕಾಯ್ದೆ(ಐಎಸ್ಎ)ಗೆ ತಿದ್ದುಪಡಿ ತಂದಿರುವ ಹಣಕಾಸು ಸಚಿವಾಲಯ ಅದನ್ನು ಜುಲೈ 1ಕ್ಕೆ ಮುಂದೂಡಿದೆ. ಈ ತಿದ್ದುಪಡಿ ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ.
ಕೊರೊನಾವೈರಸ್ ಏಕಾಏಕಿ ಉಂಟಾಗಿದ್ದರಿಂದ ಹಣಕಾಸು ಬಿಕ್ಕಟ್ಟು ಸೃಷ್ಟಿಯಾಗುತ್ತಿದೆ. ಹೀಗಾಗಿ ಹಣಕಾಸು ವರ್ಷವನ್ನು ಮೂರು ತಿಂಗಳು ವಿಸ್ತರಿಸಬೇಕೆಂದು, 15 ತಿಂಗಳ ವರ್ಷವು ಹಿಂದಿನ ವರ್ಷಕ್ಕೆ ಹೋಲಿಸಿದರೆ ಹಣಕಾಸು ಉತ್ತಮವಾಗಿ ಕಾಣುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ ಕೇಂದ್ರ ಸರ್ಕಾರವು ಯಾವುದೇ ಹಣಕಾಸಿನ ಅವಧಿಯ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications