ದೇಶದಲ್ಲಿ ಕೊರೊನಾಯಿಂದಾಗಿ ಹೇರಿರುವ ನಿಷೇಧವು ತೆರವುಗೊಂಡ ಬಳಿಕ ವಿಮಾನಯಾನ ಶುರುವಾದ ಸಂದರ್ಭದಲ್ಲಿ ಕೆಲವು ದಿನಗಳ ಕಾಲ ಪ್ರಯಾಣಿಕರಿಗೆ ಯಾವುದೇ ಆಹಾರ ನೀಡದೇ ಇರಲು ಇಂಡಿಗೋ ವಿಮಾನ ಯಾನ ಸಂಸ್ಥೆ ನಿರ್ಧರಿಸಿದೆ.
ಸಂಸ್ಥೆಯ ಸಿಇಒ ರೊನೊಜೊಯ್ ದತ್ತ ನೌಕರರಿಗೆ ಕಳಿಸಿದ ಇ ಮೇಲ್ ಸಂದೇಶದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಇದರ ಜತೆಗೆ ಸ್ವಚ್ಛತೆಯ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

"ಲಾಕ್ಡೌನ್ ಅನ್ನು ಯಾವಾಗ ತೆಗೆದುಹಾಕಲಾಗುತ್ತದೆ ಎಂದು ನಮಗೆ ತಿಳಿದಿಲ್ಲ ಆದರೆ ನಮ್ಮ ಮುಂದಿನ ಯೋಜನೆಯಲ್ಲಿ ವಿಮಾನಯಾನವನ್ನು ಮೊದಲಿಗೆ ನಿಧಾನವಾಗಿ ಪ್ರಾರಂಭಿಸುವುದು ಮತ್ತು ಕ್ರಮೇಣ ಸಾಮರ್ಥ್ಯವನ್ನು ಹೆಚ್ಚಿಸುವುದು. ನಾವು ಯಾವಾಗಲೂ ಸುರಕ್ಷತಾ ಪ್ರಜ್ಞೆ ಹೊಂದಿದ್ದೇವೆ , ಜೊತೆಗೆ ಈಗ ನಾವು ಆರೋಗ್ಯ ಪ್ರಜ್ಞೆಯನ್ನು ಹೊಂದಿರಬೇಕು. ಇದನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಅನೇಕ ಕಾರ್ಯ ವಿಧಾನಗಳನ್ನು ಬದಲಾಯಿಸಲು ನಾವು ನೋಡುತ್ತಿದ್ದೇವೆ'' ಎಂದು ಇಂಡಿಗೊ ಸಿಇಒ ರೊನೋಜಾಯ್ ದತ್ತಾ ಅವರು ಶುಕ್ರವಾರ ಉದ್ಯೋಗಿಗಳಿಗೆ ಬರೆದ ಇ ಮೇಲ್ನಲ್ಲಿ ತಿಳಿಸಿದ್ದಾರೆ.
ಇನ್ನು ಮುಂದೆ ವಿಮಾನವನ್ನು ಸ್ವಚ್ಛಗೊಳಿಸುವುದರಿಂದ ಹಿಡಿದು, ಕ್ಯಾಬಿನ್ನಲ್ಲಿ ಶುಚಿತ್ವ ಕಾಪಾಡಲು ಆಹಾರ ಸರಬರಾಜನ್ನೂ ತಡೆ ಹಿಡಿಯುವುದರ ಜತೆಗೆ ಹಲವು ಮಾರ್ಪಾಡುಗಳನ್ನು ಸಂಸ್ಥೆಯು ತನ್ನ ಯಾನದ ಸಂದರ್ಭದಲ್ಲಿ ಅಳವಡಿಸಿಕೊಳ್ಳಲಿದೆ ಎಂದು ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications