2020ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಬಹುಮಾನವು ಅಮೆರಿಕನ್ನರಾದ ಪಾಲ್ ಆರ್. ಮಿಲ್ ಗ್ರೋಮ್ ಮತ್ತು ರಾಬರ್ಟ್ ಬಿ. ವಿಲ್ಸನ್ ಗೆ ಸಿಕ್ಕಿದೆ. "ಹರಾಜು ಸಿದ್ಧಾಂತದಲ್ಲಿನ ಸುಧಾರಣೆ ಮತ್ತು ಹೊಸ ಹರಾಜು ರೂಪ"ಕ್ಕಾಗಿ ಈ ಬಾರಿ ಅರ್ಥಶಾಸ್ತ್ರದ ನೊಬೆಲ್ ತಮ್ಮದಾಗಿಸಿಕೊಂಡಿದ್ದಾರೆ.
ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಪ್ರಧಾನ ಕಾರ್ಯದರ್ಶಿ ಗೊರಾನ್ ಹನ್ಸನ್ ಅವರು ಸೋಮವಾರದಂದು ಸ್ಟಾಕ್ ಹೋಮ್ ನಲ್ಲಿ ವಿಜೇತರನ್ನು ಘೋಷಣೆ ಮಾಡಿದರು. ತಾಂತ್ರಿಕವಾಗಿ ಹೇಳಬೇಕೆಂದರೆ, ಸ್ವೆರಿಜಿಸ್ ರಿಕ್ಸ್ ಬ್ಯಾಂಕ್ ನಿಂದ ಆಲ್ಫ್ರೆಡ್ ನೊಬೆಲ್ ಸ್ಮರಣೆಯಲ್ಲಿ ಅರ್ಥಶಾಸ್ತ್ರ ವಿಜ್ಞಾನದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.
ಎರಡನೇ ವಿಶ್ವಯುದ್ಧ ನಂತರ ಜಾಗತಿಕವಾಗಿ ಆರ್ಥಿಕ ಕುಸಿತ ಕಾಣುವಂತಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಹೇರಿದ್ದ ಲಾಕ್ ಡೌನ್ ನಿಂದಾಗಿ ವ್ಯಾಪಾರ- ವಹಿವಾಟು ಸ್ಥಗಿತಗೊಂಡಿರುವ ಸಂದರ್ಭದಲ್ಲಿ ಆರ್ಥಿಕ ಸುಧಾರಣೆಗಾಗಿ ಪಾಲ್ ಆರ್. ಮಿಲ್ ಗ್ರೋಮ್ ಮತ್ತು ರಾಬರ್ಟ್ ಬಿ. ವಿಲ್ಸನ್ ಹೊಸ ಹರಾಜು ಸ್ವರೂಪವನ್ನು ಮುಂದಿಟ್ಟಿದ್ದನ್ನು ಸ್ಮರಿಸಲಾಗಿದೆ.

ಈ ಬಹುಮಾನವನ್ನು ಮೊದಲಿಗೆ ಆರಂಭಿಸಿದ್ದು 1969ರಲ್ಲಿ. ಕಳೆದ ವರ್ಷ ಮಸಾಚ್ಯುಸೆಟ್ಸ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಇಬ್ಬರು ಸಂಶೋಧಕರಿಗೆ ಹಾಗೂ ಮೂರನೆಯವರು ಹಾರ್ವರ್ಡ್ ವಿ.ವಿ.ಯವರಿಗೆ ಈ ಪ್ರಶಸ್ತಿ ಬಂದಿತ್ತು. ಜಾಗತಿಕ ಬಡತನ ಕಡಿಮೆ ಮಾಡುವ ಪ್ರಯತ್ನಕ್ಕೆ ಆ ಗೌರವ ಸಂದಿತ್ತು.
ಈ ಪ್ರತಿಷ್ಠಿತ ಪ್ರಶಸ್ತಿಗೆ 10 ಮಿಲಿಯನ್ ಕ್ರೋನ (1.1 ಮಿಲಿಯನ್ ಯುಎಸ್ ಡಿ) ನಗದು ಬಹುಮಾನ ಹಾಗೂ ಚಿನ್ನದ ಪದಕ ನೀಡಲಾಗುವುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications