ಬೆಂಗಳೂರು, ಜುಲೈ 3: ಆರ್ಥಿಕ ಭ್ರಷ್ಟಚಾರ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ)ಗೆ ಸಂಬಂಧಿಸಿದ 180 ಕೋಟಿ ರೂಪಾಯಿ ಸುಸ್ತಿ ಸಾಲ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ (ಎನ್ಬಿಡಬ್ಲ್ಯು )ಹೊರಡಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್ಪಿ ನಾಯಕ್ ನಿಂಬಾಳ್ಕರ್ ಅವರು ಜೂನ್ 29 ರಂದು ಬಂಧನದ ವಾರಂಟ್ ಹೊರಡಿಸಿದ್ದು , ಸೋಮವಾರ ವಿವರವಾದ ಆದೇಶ ಲಭ್ಯವಾಗಿದೆ. ಸಿಬಿಐ ನ್ಯಾಯಾಲಯವು ಮಲ್ಯ ಅವರ ಸ್ಟೇಟಸ್ ಅನ್ನು "ಪರಾರಿ" ಎಂದು ಒತ್ತಿಹೇಳಿದೆ. ಸಿಬಿಐ ಸಲ್ಲಿಸಿರುವ ಆಧಾರದ ಮೇಲೆ ಅವರ ವಿರುದ್ಧ ನೀಡಲಾದ ಹಿಂದಿನ ಜಾಮೀನು ರಹಿತ ವಾರೆಂಟ್ ಗಳನ್ನು ಉಲ್ಲೇಖಿಸಿ, ಮಲ್ಯ ಉಪಸ್ಥಿತಿಯನ್ನು ಭದ್ರ ಪಡಿಸಿಕೊಳ್ಳಲು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ಇದು ಸೂಕ್ತ ಪ್ರಕರಣವಾಗಿದೆ ಎಂದು ಕೋರ್ಟ್ ಹೇಳಿದೆ.
ಈಗ ನಿಷ್ಕ್ರೀಯಗೊಂಡಿರುವ ಕಿಂಗ್ ಫಿಷರ್ ಏರ್ ಲೈನ್ಸ್ ಮಾಜಿ ಪ್ರವರ್ತಕ ಮಲ್ಯ ಅವರು ಉದ್ದೇಶಪೂರ್ವಕವಾಗಿ ಸಾಲವನ್ನು ಮರುಪಾವತಿಸದೇ ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ)ಗೆ 180 ಕೋಟಿ ರೂಪಾಯಿಗಳ ಅಕ್ರಮ ನಷ್ಟವನ್ನು ಉಂಟುಮಾಡಿದ್ದಾರೆ ಎಂದು ಸಿಬಿಐ ನ ವಾರೆಂಟ್ ಆರೋಪಿಸಿದೆ.
ಹೊಸ ವಾರಂಟ್ ಏಕೆ?
ಹೊಸ ವಾರಂಟ್ 2007 ಮತ್ತು 2012 ರ ನಡುವೆ ಕಿಂಕ್ ಫಿಷರ್ ಏರ್ಲೈನ್ಸ್ ಪಡೆದ ಸಾಲಗಳಿಗೆ ಸಂಬಂಧಿಸಿದ ವಂಚನೆ ಪ್ರ ಕರಣಕ್ಕೆ ಸಂಬಂಧಿಸಿದೆ. ಚಾರ್ಜ್ ಶೀಟ್ ನ ಪ್ರಕಾರ, ಒಪ್ಪಂದದ ಆಧಾರದ ಮೇಲೆ ಸಾಲಗಳನ್ನು ನೀಡಲಾಗಿದೆ, ಆದರೆ ಮಲ್ಯ ಮೋಸ ಮಾಡುವ ಉದ್ದೇಶದಿಂದಲೇ ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. "ಮರುಪಾವತಿಯಲ್ಲಿ ಡೀಫಾಲ್ಟ್ ನಿಂದದ 141.91 ಕೋಟಿ ರೂಪಾಯಿಗಳ ತಪ್ಪಾದ ನಷ್ಟ ಉಂಟಾಗಿದೆ, ಸಾಲವನ್ನು ಷೇರುಗಳಾಗಿ ಪರಿವರ್ತಿಸಿದ ಕಾರಣ 38.30 ಕೋಟಿ ಹೆಚ್ಚುವರಿ ನಷ್ಟವಾಗಿದೆ.
ಯುಕೆಯಿಂದ ಹಸ್ತಾಂತರ
ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 68 ವರ್ಷದ ಮಲ್ಯ ಅವರನ್ನು ಈಗಾಗಲೇ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು
ಘೋಷಿಸಲಾಗಿದೆ. ಭಾರತ ಸರ್ಕಾರವು ಯುಕೆಯಿಂದ ಅವರನ್ನು ಹಸ್ತಾಂ ತರಿಸಲು ಸಕ್ರಿಯವಾಗಿ ಪ್ರಯತ್ನಿಸುತ್ತಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications