ಹೊಸ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಸುಧಾರಿಸಲು ಹಣಕಾಸು ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರ ಮಾಹಿತಿ ನೀಡಿದೆ. ಪ್ರಮುಖವಾಗಿ ಉದ್ಯೋಗಿಗಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಹಣಕಾಸು ಮಸೂದೆ 2023 ಅನ್ನು ಲೋಕಸಭೆಯಲ್ಲಿ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎನ್ಪಿಎಸ್ ಬಗ್ಗೆ ಮಹತ್ತರ ಘೋಷಣೆಯನ್ನು ಮಾಡಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಹಣಕಾಸು ಮಸೂದೆ 2023 ಅನ್ನು ಮಂಡನೆ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಳವಡಿಸಿಕೊಳ್ಳಲು ಎನ್ಪಿಎಸ್ಗೆ ಹೊಸ ವಿಧಾನವನ್ನು ವಿನ್ಯಾಸಗೊಳಿಸಲಾಗುವುದು ಎಂದು ಈ ಸಂದರ್ಭದಲ್ಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. "ಪಿಂಚಣಿಗಳ ಸಮಸ್ಯೆಯನ್ನು ಪರಿಶೀಲಿಸಲು ಮತ್ತು ಸಾಮಾನ್ಯ ನಾಗರಿಕರನ್ನು ಹಣಕಾಸಿನ ವಿಚಾರದಲ್ಲಿ ರಕ್ಷಿಸಲು, ಉದ್ಯೋಗಿಗಳ ಅಗತ್ಯತೆಗಳನ್ನು ತಿಳಿಸುವ ವಿಧಾನವನ್ನು ಜಾರಿ ಮಾಡಲು ಹಣಕಾಸು ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ಸ್ಥಾಪಿಸಲು ನಾನು ಪ್ರಸ್ತಾಪಿಸುತ್ತೇನೆ," ಎಂದು ತಿಳಿಸಿದ್ದಾರೆ.

"ಈ ನೂತನ ವಿಧಾನವನ್ನು ಕೆಂದ್ರ ಹಾಗೂ ರಾಜ್ಯ ಸರ್ಕಾರವೆರಡೂ ಅಳವಡಿಸಿಕೊಳ್ಳಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗುತ್ತದೆ," ಎಂದು ಕೂಡಾ ಉಲ್ಲೇಖ ಮಾಡಿದ್ದಾರೆ. ಹಲವಾರು ಬಿಜೆಪಿಯೇತರ ರಾಜ್ಯಗಳು ಡಿಎ-ಲಿಂಕ್ ಆಗಿರುವ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮತ್ತೆ ಜಾರಿಗೆ ತರಲು ನಿರ್ಧಾರ ಮಾಡಿದೆ. ಈ ಹಿನ್ನೆಲೆಯಿಂದಾಗಿ ಕೇಂದ್ರ ಸರ್ಕಾರವು ಈ ನಿರ್ಧಾರಕ್ಕೆ ಬಂದಿದೆ. ಉಳಿದ ರಾಜ್ಯಗಳಲ್ಲೂ ಡಿಎ-ಲಿಂಕ್ ಆದ ಪಿಂಚಣಿ ವ್ಯವಸ್ಥೆ ಜಾರಿಯ ಆಗ್ರಹ ಕೇಳಿಬಂದಿದೆ.
ರಾಜಸ್ಥಾನ, ಛತ್ತೀಸ್ಗಢ, ಜಾರ್ಖಂಡ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ರಾಜ್ಯ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿ ಮಾಡುವ ನಿರ್ಧಾರದ ಬಗ್ಗೆ ಕೇಂದ್ರಕ್ಕೆ ತಿಳಿಸಿವೆ. ಹಾಗೆಯೇ ಎನ್ಪಿಎಸ್ ಅಡಿಯಲ್ಲಿ ಸಂಗ್ರಹವಾದ ಕಾರ್ಪಸ್ನ ಮರುಪಾವತಿ ಮಾಡಬೇಕೆಂದು ವಿನಂತಿ ಮಾಡಿದೆ. ಜನವರಿ 1, 2004 ರ ನಂತರ ನೇಮಕಗೊಂಡ ಕೇಂದ್ರ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಹಳೆ ಪಿಂಚಣಿ ವ್ಯವಸ್ಥೆಯನ್ನು (ಒಪಿಎಸ್) ಮರುಸ್ಥಾಪಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಈ ತಿಂಗಳ ಆರಂಭದಲ್ಲಿ ಸಂಸತ್ತಿಗೆ ತಿಳಿಸಿದೆ.
ಹಳೆ ಪಿಂಚಣಿ ವ್ಯವಸ್ಥೆಯನ್ನು (ಒಪಿಎಸ್) ಅಡಿಯಲ್ಲಿ ನಿವೃತ್ತ ಸರ್ಕಾರಿ ನೌಕರರು ತಮ್ಮ ಕೊನೆಯ ಸಂಬಳದ 50 ಪ್ರತಿಶತವನ್ನು ಮಾಸಿಕ ಪಿಂಚಣಿಯಾಗಿ ಪಡೆಯುತ್ತಾರೆ. ಡಿಎ ದರಗಳ ಹೆಚ್ಚಳದೊಂದಿಗೆ ಮೊತ್ತವು ಹೆಚ್ಚುತ್ತಲೇ ಇದೆ. ಆದರೆ ಇದು ಬೊಕ್ಕಸದ ಮೇಲೆ ಹೊರೆಯಾಗುತ್ತದೆ ಎಂದು ಕೇಂದ್ರ ಸರ್ಕಾರದ ವಾದವಾಗಿದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಮತ್ತು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನಿರ್ವಹಣೆಯಲ್ಲಿರುವ ಒಟ್ಟು ಆಸ್ತಿಗಳು ಮಾರ್ಚ್ 4, 2023 ಕ್ಕೆ 8.81 ಲಕ್ಷ ಕೋಟಿ ರೂಪಾಯಿ ಆಗಿದೆ.
ಜನವರಿ 1, 2004 ರಂದು ಅಥವಾ ನಂತರ ಕೇಂದ್ರ ಸರ್ಕಾರಕ್ಕೆ ಸೇರುವ ಸಶಸ್ತ್ರ ಪಡೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರಿಗೆ ಎನ್ಪಿಎಸ್ ಜಾರಿಗೊಳಿಸಲಾಗಿದೆ. ಹೆಚ್ಚಿನ ರಾಜ್ಯ/ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ತಮ್ಮ ಹೊಸ ಉದ್ಯೋಗಿಗಳಿಗೆ ತಮ್ಮ ಹೊಸ ಉದ್ಯೋಗಿಗಳಿಗೆ ಎನ್ಪಿಎಸ್ ಜಾರಿ ಮಾಡಿದೆ. ಮೇ 1, 2009 ರಿಂದ ಪ್ರತಿ ಭಾರತೀಯ ನಾಗರಿಕರಿಗೆ ಎನ್ಪಿಎಸ್ ಲಭ್ಯವಾಗುವಂತೆ ಮಾಡಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications