"ಆನ್ ಲೈನ್ ನಲ್ಲಿ ಇರುವಾಗ ಬಹಳ ಎಚ್ಚರಿಕೆಯಿಂದ ಇರಿ" ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ ಎಸ್ ಎ) ಅಜಿತ್ ದೋವಲ್ ಶುಕ್ರವಾರ (ಸೆಪ್ಟೆಂಬರ್ 18, 2020) ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಕೊರೊನಾ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಡಿಜಿಟಲ್ ಪಾವತಿ ಪ್ಲಾಟ್ ಫಾರ್ಮ್ ಗಳ ಮೇಲೆ ಅವಲಂಬನೆ ಹೆಚ್ಚಾದಂತೆ ಹಣಕಾಸು ವಂಚನೆ ಕೂಡ ವಿಪರೀತ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ನ್ಯಾಷನಲ್ ಸೈಬರ್ ಸೆಕ್ಯೂರಿಟಿ ಸ್ಟ್ರಾಟೆಜಿ 2020 ಬರುತ್ತಿದೆ. ಭಾರತದ ಶ್ರೀಮಂತಿಕೆಗಾಗಿ ಸೈಬರ್ ಅವಕಾಶಗಳನ್ನು ನಂಬಿಕಸ್ತ ಹಾಗೂ ಭದ್ರತಾ ಮಾರ್ಗಗಳಿಂದ ಬಳಸಿಕೊಳ್ಳಬಹುದು ಎಂದಿದ್ದಾರೆ. ಕೇರಳ ಪೊಲೀಸ್ ಆಯೋಜಿಸಿದ್ದ ಸೈಬರ್ ಸೆಕ್ಯೂರಿಟಿ ಕುರಿತಾದ ಕಾರ್ಯಕ್ರಮದಲ್ಲಿ ದೋವಲ್ ಈ ಮಾತುಗಳನ್ನು ಹೇಳಿದ್ದಾರೆ.
ಡಿಜಿಟಲ್ ಪೇಮೆಂಟ್ ಮೇಲೆ ಅವಲಂಬನೆ
ಕೊರೊನಾ ಕಾರಣಕ್ಕೆ ಕೆಲಸ ಮಾಡುವ ವಾತಾವರಣವೇ ಬದಲಾಗಿದೆ. "ಡಿಜಿಟಲ್ ಪೇಮೆಂಟ್ ಪ್ಲಾಟ್ ಫಾರ್ಮ್ ಗಳ ಮೇಲೆ ಅವಲಂಬನೆ ಹೆಚ್ಚಾಗಿದೆ. ನಗದು ನಿರ್ವಹಣೆ ಕಡಿಮೆ ಆಗಿದೆ. ಆ ಕಾರಣಕ್ಕೆ ದೊಡ್ಡ ಪ್ರಮಾಣದಲ್ಲಿ ಡೇಟಾಗಳು ಈ ಪ್ಲಾಟ್ ಫಾರ್ಮ್ ನಲ್ಲಿ ಹಂಚಿಕೆ ಆಗುತ್ತಿವೆ. ಇನ್ನು ಆನ್ ಲೈನ್ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿನ ಬಳಕೆ ಹೆಚ್ಚಾಗಿರುವುದರಿಂದಲೂ ಇಂಥದ್ದೊಂದು ಬೆಳವಣಿಗೆ ನಡೆಯುತ್ತಿದೆ ಎಂದಿದ್ದಾರೆ.
ಅಪರಾಧ ಪ್ರಮಾಣ ಐನೂರರಷ್ಟು ಹೆಚ್ಚಳ
ನಮ್ಮ ಕೆಲಸಗಳನ್ನಷ್ಟೇ ಮಾಡಿಕೊಳ್ಳುವುದಕ್ಕೆ ಸ್ವಲ್ಪ ಮಟ್ಟಿಗೆ ಆನ್ ಲೈನ್ ಬಳಕೆ ಮಾಡಿದರೂ ಕೆಲವು ದುಷ್ಕರ್ಮಿಗಳು ಅದರಲ್ಲಿ ಕಂಡುಬರುತ್ತಾರೆ. ಅವರಿಗೆ ಹೊಸ ಅವಕಾಶಗಳು ದೊರೆಯುತ್ತವೆ ಎಂದು ದೋವಲ್ ಅಭಿಪ್ರಾಯ ಪಟ್ಟಿದ್ದಾರೆ. ಸೈಬರ್ ಸ್ವಚ್ಛತೆ ಬಗ್ಗೆ ಅರಿವಿನ ಕೊರತೆ ಇದೆ. ಆದ್ದರಿಂದ ಸೈಬರ್ ಕ್ರೈಮ್ ನಲ್ಲಿ ಐನೂರು ಪರ್ಸೆಂಟ್ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.
ಜವಾಬ್ದಾರಿಯಿಂದ ಇಂಟರ್ ನೆಟ್ ಬಳಸಬೇಕು
ಜನರು ಬಹಳ ಜವಾಬ್ದಾರಿಯಿಂದ ಇಂಟರ್ ನೆಟ್ ಬಳಕೆ ಮಾಡಬೇಕು ಎಂದು ಅವರು ಎಚ್ಚರಿಸಿದ್ದಾರೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಕೇರಳ ಸರ್ಕಾರ ಹಾಗೂ ಪೊಲೀಸರನ್ನು ಅಭಿನಂದಿಸಲಾಯಿತು. ಎರಡು ದಿನಗಳ ಸಮಾವೇಶದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜ್ಯ ಪೊಲೀಸ್ ಮುಖ್ಯಸ್ಥರು ಪಾಲ್ಗೊಂಡಿದ್ದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications